AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !
ಹೊತ್ತಿ ಉರಿಯುತ್ತಿರುವ ಮದುವೆ ಮನೆ
TV9 Web
| Edited By: |

Updated on:Nov 30, 2021 | 9:57 AM

Share

ಚಿಂತೆಯಿಲ್ಲದವನಿಗೆ ಸಂತೆಯಲ್ಲೂ ನಿದ್ದೆಯಂತೆ ! ಹೀಗೊಂದು ಮಾತು ಕೇಳಿರುತ್ತೇವೆ. ಆದರೆ ಇಲ್ಲಿ ತುಸು ವಿಭಿನ್ನ..ಮದುವೆ ಮನೆಗೆ ಬೆಂಕಿ ಬಿದ್ದು, ಧಗಧಗನೇ ಹೊತ್ತು ಉರಿಯುತ್ತಿದ್ದರೂ ಅಲ್ಲಿಯೇ ಸ್ವಲ್ಪ ದೂರದಲ್ಲಿ ಕುಳಿತ ಅತಿಥಿಗಳು ಸ್ವಲ್ಪೂ ಚಿಂತೆ ಮಾಡದೆ ಕುಳಿತು ಊಟ ಮಾಡಿದ ವಿಡಿಯೋ ಇದೀಗ ಇಂಟರ್​ನೆಟ್​​ನಲ್ಲಿ ಸಿಕ್ಕಾಪಟೆ ಸದ್ದು ಮಾಡುತ್ತಿದೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಥಾಣೆ ಭಿವಂಡಿಯಲ್ಲಿ.  

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ. ಅಲ್ಲಿ, ಬೆಂಕಿ ಬಳಿ ಅನೇಕರು ಕೂಗುತ್ತ, ಅದನ್ನು ನಂದಿಸಲು ಅತ್ತಿಂದಿತ್ತ ಓಡಾಡುತ್ತಿರುವುದೂ ವಿಡಿಯೋದಲ್ಲಿ ಕಾಣಿಸುತ್ತದೆ. ಇದು ಅನ್ಸಾರಿ ಮದುವೆ ಹಾಲ್​​ನಲ್ಲಿ ನಡೆದ ಘಟನೆ. ಭಾನುವಾರ ಸಂಜೆ ಅಲ್ಲಿ ಮದುವೆ ಸಂಭ್ರಮ ಇತ್ತು. ಆದರೆ ವಿಪರೀತ ಪಟಾಕಿ ಹೊಡೆದಿದ್ದರಿಂದ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ.  ಆರು ಬೈಕ್​ಗಳು, ಹಲವು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಮದುವೆಗಾಗಿ ಮಾಡಲಾಗಿದ್ದ ಅಲಂಕಾರ ಪೂರ್ತಿ ಸರ್ವನಾಶವಾಗಿದೆ. ನಂತರ ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ ನಂದಿಸಿವೆ.ಅದೃಷ್ಟವಶಾತ್ ಯಾರಿಗೂ ಗಾಯವಾಗಲಿ, ಪ್ರಾಣಹಾನಿಯಾಗಲಿ ಆಗಿಲ್ಲ.

ಇದನ್ನೂ ಓದಿ: Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ

Published On - 9:54 am, Tue, 30 November 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ