AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !
ಹೊತ್ತಿ ಉರಿಯುತ್ತಿರುವ ಮದುವೆ ಮನೆ
TV9 Web
| Edited By: |

Updated on:Nov 30, 2021 | 9:57 AM

Share

ಚಿಂತೆಯಿಲ್ಲದವನಿಗೆ ಸಂತೆಯಲ್ಲೂ ನಿದ್ದೆಯಂತೆ ! ಹೀಗೊಂದು ಮಾತು ಕೇಳಿರುತ್ತೇವೆ. ಆದರೆ ಇಲ್ಲಿ ತುಸು ವಿಭಿನ್ನ..ಮದುವೆ ಮನೆಗೆ ಬೆಂಕಿ ಬಿದ್ದು, ಧಗಧಗನೇ ಹೊತ್ತು ಉರಿಯುತ್ತಿದ್ದರೂ ಅಲ್ಲಿಯೇ ಸ್ವಲ್ಪ ದೂರದಲ್ಲಿ ಕುಳಿತ ಅತಿಥಿಗಳು ಸ್ವಲ್ಪೂ ಚಿಂತೆ ಮಾಡದೆ ಕುಳಿತು ಊಟ ಮಾಡಿದ ವಿಡಿಯೋ ಇದೀಗ ಇಂಟರ್​ನೆಟ್​​ನಲ್ಲಿ ಸಿಕ್ಕಾಪಟೆ ಸದ್ದು ಮಾಡುತ್ತಿದೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಥಾಣೆ ಭಿವಂಡಿಯಲ್ಲಿ.  

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ. ಅಲ್ಲಿ, ಬೆಂಕಿ ಬಳಿ ಅನೇಕರು ಕೂಗುತ್ತ, ಅದನ್ನು ನಂದಿಸಲು ಅತ್ತಿಂದಿತ್ತ ಓಡಾಡುತ್ತಿರುವುದೂ ವಿಡಿಯೋದಲ್ಲಿ ಕಾಣಿಸುತ್ತದೆ. ಇದು ಅನ್ಸಾರಿ ಮದುವೆ ಹಾಲ್​​ನಲ್ಲಿ ನಡೆದ ಘಟನೆ. ಭಾನುವಾರ ಸಂಜೆ ಅಲ್ಲಿ ಮದುವೆ ಸಂಭ್ರಮ ಇತ್ತು. ಆದರೆ ವಿಪರೀತ ಪಟಾಕಿ ಹೊಡೆದಿದ್ದರಿಂದ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ.  ಆರು ಬೈಕ್​ಗಳು, ಹಲವು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಮದುವೆಗಾಗಿ ಮಾಡಲಾಗಿದ್ದ ಅಲಂಕಾರ ಪೂರ್ತಿ ಸರ್ವನಾಶವಾಗಿದೆ. ನಂತರ ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ ನಂದಿಸಿವೆ.ಅದೃಷ್ಟವಶಾತ್ ಯಾರಿಗೂ ಗಾಯವಾಗಲಿ, ಪ್ರಾಣಹಾನಿಯಾಗಲಿ ಆಗಿಲ್ಲ.

ಇದನ್ನೂ ಓದಿ: Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ

Published On - 9:54 am, Tue, 30 November 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ