AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !
ಹೊತ್ತಿ ಉರಿಯುತ್ತಿರುವ ಮದುವೆ ಮನೆ
TV9 Web
| Edited By: |

Updated on:Nov 30, 2021 | 9:57 AM

Share

ಚಿಂತೆಯಿಲ್ಲದವನಿಗೆ ಸಂತೆಯಲ್ಲೂ ನಿದ್ದೆಯಂತೆ ! ಹೀಗೊಂದು ಮಾತು ಕೇಳಿರುತ್ತೇವೆ. ಆದರೆ ಇಲ್ಲಿ ತುಸು ವಿಭಿನ್ನ..ಮದುವೆ ಮನೆಗೆ ಬೆಂಕಿ ಬಿದ್ದು, ಧಗಧಗನೇ ಹೊತ್ತು ಉರಿಯುತ್ತಿದ್ದರೂ ಅಲ್ಲಿಯೇ ಸ್ವಲ್ಪ ದೂರದಲ್ಲಿ ಕುಳಿತ ಅತಿಥಿಗಳು ಸ್ವಲ್ಪೂ ಚಿಂತೆ ಮಾಡದೆ ಕುಳಿತು ಊಟ ಮಾಡಿದ ವಿಡಿಯೋ ಇದೀಗ ಇಂಟರ್​ನೆಟ್​​ನಲ್ಲಿ ಸಿಕ್ಕಾಪಟೆ ಸದ್ದು ಮಾಡುತ್ತಿದೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಥಾಣೆ ಭಿವಂಡಿಯಲ್ಲಿ.  

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ. ಅಲ್ಲಿ, ಬೆಂಕಿ ಬಳಿ ಅನೇಕರು ಕೂಗುತ್ತ, ಅದನ್ನು ನಂದಿಸಲು ಅತ್ತಿಂದಿತ್ತ ಓಡಾಡುತ್ತಿರುವುದೂ ವಿಡಿಯೋದಲ್ಲಿ ಕಾಣಿಸುತ್ತದೆ. ಇದು ಅನ್ಸಾರಿ ಮದುವೆ ಹಾಲ್​​ನಲ್ಲಿ ನಡೆದ ಘಟನೆ. ಭಾನುವಾರ ಸಂಜೆ ಅಲ್ಲಿ ಮದುವೆ ಸಂಭ್ರಮ ಇತ್ತು. ಆದರೆ ವಿಪರೀತ ಪಟಾಕಿ ಹೊಡೆದಿದ್ದರಿಂದ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ.  ಆರು ಬೈಕ್​ಗಳು, ಹಲವು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಮದುವೆಗಾಗಿ ಮಾಡಲಾಗಿದ್ದ ಅಲಂಕಾರ ಪೂರ್ತಿ ಸರ್ವನಾಶವಾಗಿದೆ. ನಂತರ ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ ನಂದಿಸಿವೆ.ಅದೃಷ್ಟವಶಾತ್ ಯಾರಿಗೂ ಗಾಯವಾಗಲಿ, ಪ್ರಾಣಹಾನಿಯಾಗಲಿ ಆಗಿಲ್ಲ.

ಇದನ್ನೂ ಓದಿ: Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ

Published On - 9:54 am, Tue, 30 November 21

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ