AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ.

Video: ಮದುವೆ ಮನೆಗೆ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿದ್ದರೂ ಸ್ವಲ್ಪವೂ ತಲೆಕೆಡಿಸಿಕೊಳ್ಳದೆ ಊಟ ಮಾಡುತ್ತಲೇ ಇದ್ದ ಅತಿಥಿಗಳು !
ಹೊತ್ತಿ ಉರಿಯುತ್ತಿರುವ ಮದುವೆ ಮನೆ
Follow us
TV9 Web
| Updated By: Lakshmi Hegde

Updated on:Nov 30, 2021 | 9:57 AM

ಚಿಂತೆಯಿಲ್ಲದವನಿಗೆ ಸಂತೆಯಲ್ಲೂ ನಿದ್ದೆಯಂತೆ ! ಹೀಗೊಂದು ಮಾತು ಕೇಳಿರುತ್ತೇವೆ. ಆದರೆ ಇಲ್ಲಿ ತುಸು ವಿಭಿನ್ನ..ಮದುವೆ ಮನೆಗೆ ಬೆಂಕಿ ಬಿದ್ದು, ಧಗಧಗನೇ ಹೊತ್ತು ಉರಿಯುತ್ತಿದ್ದರೂ ಅಲ್ಲಿಯೇ ಸ್ವಲ್ಪ ದೂರದಲ್ಲಿ ಕುಳಿತ ಅತಿಥಿಗಳು ಸ್ವಲ್ಪೂ ಚಿಂತೆ ಮಾಡದೆ ಕುಳಿತು ಊಟ ಮಾಡಿದ ವಿಡಿಯೋ ಇದೀಗ ಇಂಟರ್​ನೆಟ್​​ನಲ್ಲಿ ಸಿಕ್ಕಾಪಟೆ ಸದ್ದು ಮಾಡುತ್ತಿದೆ. ಅಂದಹಾಗೆ ಈ ಘಟನೆ ನಡೆದದ್ದು ಮಹಾರಾಷ್ಟ್ರದ ಥಾಣೆ ಭಿವಂಡಿಯಲ್ಲಿ.  

ಅದೊಂದು ಮದುವೆ ಮನೆ. ಹಾಕಿದ್ದ ಪೆಂಡಾಲ್​​ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿದೆ. ಆದರೆ ಅಲ್ಲಿಯೇ ಸ್ವಲ್ಪದೂರದಲ್ಲಿ ಕುಳಿತ ಇಬ್ಬರು ಹಿಂದಿರುಗಿ ಬೆಂಕಿಯನ್ನು ನೋಡನೋಡುತ್ತ ಗಡದ್ದಾಗಿ ಊಟ ಮಾಡುತ್ತಿದ್ದಾರೆ. ಅಲ್ಲಿ, ಬೆಂಕಿ ಬಳಿ ಅನೇಕರು ಕೂಗುತ್ತ, ಅದನ್ನು ನಂದಿಸಲು ಅತ್ತಿಂದಿತ್ತ ಓಡಾಡುತ್ತಿರುವುದೂ ವಿಡಿಯೋದಲ್ಲಿ ಕಾಣಿಸುತ್ತದೆ. ಇದು ಅನ್ಸಾರಿ ಮದುವೆ ಹಾಲ್​​ನಲ್ಲಿ ನಡೆದ ಘಟನೆ. ಭಾನುವಾರ ಸಂಜೆ ಅಲ್ಲಿ ಮದುವೆ ಸಂಭ್ರಮ ಇತ್ತು. ಆದರೆ ವಿಪರೀತ ಪಟಾಕಿ ಹೊಡೆದಿದ್ದರಿಂದ ಬೆಂಕಿ ಬಿದ್ದಿದೆ ಎಂದು ಹೇಳಲಾಗಿದೆ.  ಆರು ಬೈಕ್​ಗಳು, ಹಲವು ಕುರ್ಚಿಗಳು ಬೆಂಕಿಗೆ ಆಹುತಿಯಾಗಿವೆ. ಮದುವೆಗಾಗಿ ಮಾಡಲಾಗಿದ್ದ ಅಲಂಕಾರ ಪೂರ್ತಿ ಸರ್ವನಾಶವಾಗಿದೆ. ನಂತರ ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಭೇಟಿಕೊಟ್ಟು ಬೆಂಕಿ ನಂದಿಸಿವೆ.ಅದೃಷ್ಟವಶಾತ್ ಯಾರಿಗೂ ಗಾಯವಾಗಲಿ, ಪ್ರಾಣಹಾನಿಯಾಗಲಿ ಆಗಿಲ್ಲ.

ಇದನ್ನೂ ಓದಿ: Yoga Asanas: ಆರೋಗ್ಯಕರ ಜೀವನ ಶೈಲಿಗಾಗಿ ಈ ಕೆಲವು ಯೋಗ ಆಸನಗಳನ್ನು ಪ್ರತಿನಿತ್ಯ ಮಾಡಿ

Published On - 9:54 am, Tue, 30 November 21

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ