AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jal Jeevan Mission: ಗುಜರಾತ್ ಶೇ 100 ಹರ್ ಘರ್ ಜಲ್ ರಾಜ್ಯ: ಸಚಿವ ಹರ್ಷ ಸಂಘವಿ ಘೋಷಣೆ

ಗುಜರಾತ್​ ಅನ್ನು 100% ಹರ್ ಘರ್ ಜಲ್ ಯೋಜನೆಯನ್ನು ಪೂರ್ಣಗೊಳಿಸಿದ ರಾಜ್ಯ ಎಂದು ಬುಧವಾರ ಘೋಷಿಸಲಾಗಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಟ್ವೀಟ್ ಮಾಡಿದ್ದಾರೆ.

Jal Jeevan Mission: ಗುಜರಾತ್ ಶೇ 100 ಹರ್ ಘರ್ ಜಲ್ ರಾಜ್ಯ: ಸಚಿವ ಹರ್ಷ ಸಂಘವಿ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Oct 26, 2022 | 6:54 PM

Share

ಗುಜರಾತ್: ಗುಜರಾತ್​ ಅನ್ನು 100% ಹರ್ ಘರ್ ಜಲ್ ಯೋಜನೆಯನ್ನು ಪೂರ್ಣಗೊಳಿಸಿದ ರಾಜ್ಯ ಎಂದು ಬುಧವಾರ ಘೋಷಿಸಲಾಗಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಟ್ವೀಟ್ ಮಾಡಿದ್ದಾರೆ. ಜಲ ಜೀವನ್ ಮಿಷನ್​ನ್ನು 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು, ಇದರ ಅಡಿಯಲ್ಲಿ 2024 ರ ವೇಳೆಗೆ ಗ್ರಾಮೀಣ ಭಾರತದ ಪ್ರತಿ ಮನೆಗೆ ಶುದ್ಧ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಲಾಗಿತ್ತು.

ಈ ಮಿಷನ್ ಅಡಿಯಲ್ಲಿ, 3.60 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಅಂದಾಜಿಸಲಾಗಿದೆ, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 2.08 ಲಕ್ಷ ಕೋಟಿ ಆಗಿದೆ. 2021-22ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಬಜೆಟ್ ಬಿಡುಗಡೆ ಮಾಡಿದೆ.ಮಾರ್ಚ್‌ನಲ್ಲಿ, ಕೇಂದ್ರ ಸರ್ಕಾರವು 2022-23 ರ ಹಣಕಾಸು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 60 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಿಂದೆ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಲಾಕ್‌ಡೌನ್ ಮತ್ತು ಇತರ ಅಡೆತಡೆಗಳ ಹೊರತಾಗಿಯೂ, 2.06 ಲಕ್ಷ ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ತಲುಪಿದೆ ಎಂದು ಸರ್ಕಾರ ಹೇಳಿತ್ತು.

ಸರ್ಕಾರದ ಪ್ರಕಾರ ಈ ಯೋಜನೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ನೀರಿನ ಸಮಿತಿ ಮತ್ತು ಕಣ್ಗಾವಲು ಸಮಿತಿಯ ಭಾಗವಾಗಿದ್ದಾರೆ. 31 ಮಾರ್ಚ್ 2022 ರವರೆಗೆ 4.78 ಲಕ್ಷ ಜಲ ಸಮಿತಿಗಳನ್ನು ರಚಿಸಲಾಗಿದೆ.

ಜಲ ಜೀವನ್ ಮಿಷನ್‌ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜಂಟಿಯಾಗಿ ಧನಸಹಾಯ ಮಾಡಲು ಅವಕಾಶವಿದೆ, ಇದರಲ್ಲಿ ಕೇಂದ್ರ ಸರ್ಕಾರವು ಶಾಸಕಾಂಗ ಸಭೆಯನ್ನು ಹೊಂದಿರದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 100% ಪಾಲನ್ನು ನೀಡಿದೆ. ಶಾಸಕಾಂಗ ಸಭೆಯೊಂದಿಗೆ, ಕೇಂದ್ರ ಮತ್ತು ರಾಜ್ಯದ ಪಾಲು 90: 10 ಆಗಿರುತ್ತದೆ ಮತ್ತು ಇತರ ರಾಜ್ಯಗಳು 50:50 ಪಾಲು ಇರುತ್ತದೆ. ಇದರ ಹೊರತಾಗಿ, ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳ ನಡುವೆ ನೀರಿನ ಮಾನಿಟರಿಂಗ್ ಸಿಸ್ಟಮ್​ಗಳ ಚಟುವಟಿಕೆಗಳಿಗೆ 90:10 ಮತ್ತು ಇತರ ರಾಜ್ಯಗಳ ನಡುವೆ 60:40 ಹಣಕಾಸಿನ ನರೆವು ನೀಡಿದೆ.

Published On - 6:54 pm, Wed, 26 October 22

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ