AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jal Jeevan Mission: ಗುಜರಾತ್ ಶೇ 100 ಹರ್ ಘರ್ ಜಲ್ ರಾಜ್ಯ: ಸಚಿವ ಹರ್ಷ ಸಂಘವಿ ಘೋಷಣೆ

ಗುಜರಾತ್​ ಅನ್ನು 100% ಹರ್ ಘರ್ ಜಲ್ ಯೋಜನೆಯನ್ನು ಪೂರ್ಣಗೊಳಿಸಿದ ರಾಜ್ಯ ಎಂದು ಬುಧವಾರ ಘೋಷಿಸಲಾಗಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಟ್ವೀಟ್ ಮಾಡಿದ್ದಾರೆ.

Jal Jeevan Mission: ಗುಜರಾತ್ ಶೇ 100 ಹರ್ ಘರ್ ಜಲ್ ರಾಜ್ಯ: ಸಚಿವ ಹರ್ಷ ಸಂಘವಿ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 26, 2022 | 6:54 PM

Share

ಗುಜರಾತ್: ಗುಜರಾತ್​ ಅನ್ನು 100% ಹರ್ ಘರ್ ಜಲ್ ಯೋಜನೆಯನ್ನು ಪೂರ್ಣಗೊಳಿಸಿದ ರಾಜ್ಯ ಎಂದು ಬುಧವಾರ ಘೋಷಿಸಲಾಗಿದೆ ಎಂದು ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಟ್ವೀಟ್ ಮಾಡಿದ್ದಾರೆ. ಜಲ ಜೀವನ್ ಮಿಷನ್​ನ್ನು 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು, ಇದರ ಅಡಿಯಲ್ಲಿ 2024 ರ ವೇಳೆಗೆ ಗ್ರಾಮೀಣ ಭಾರತದ ಪ್ರತಿ ಮನೆಗೆ ಶುದ್ಧ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಲಾಗಿತ್ತು.

ಈ ಮಿಷನ್ ಅಡಿಯಲ್ಲಿ, 3.60 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಅಂದಾಜಿಸಲಾಗಿದೆ, ಇದರಲ್ಲಿ ಕೇಂದ್ರ ಸರ್ಕಾರದ ಪಾಲು 2.08 ಲಕ್ಷ ಕೋಟಿ ಆಗಿದೆ. 2021-22ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರ 40 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಬಜೆಟ್ ಬಿಡುಗಡೆ ಮಾಡಿದೆ.ಮಾರ್ಚ್‌ನಲ್ಲಿ, ಕೇಂದ್ರ ಸರ್ಕಾರವು 2022-23 ರ ಹಣಕಾಸು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 60 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಈ ಹಿಂದೆ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಲಾಕ್‌ಡೌನ್ ಮತ್ತು ಇತರ ಅಡೆತಡೆಗಳ ಹೊರತಾಗಿಯೂ, 2.06 ಲಕ್ಷ ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ತಲುಪಿದೆ ಎಂದು ಸರ್ಕಾರ ಹೇಳಿತ್ತು.

ಸರ್ಕಾರದ ಪ್ರಕಾರ ಈ ಯೋಜನೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ನೀರಿನ ಸಮಿತಿ ಮತ್ತು ಕಣ್ಗಾವಲು ಸಮಿತಿಯ ಭಾಗವಾಗಿದ್ದಾರೆ. 31 ಮಾರ್ಚ್ 2022 ರವರೆಗೆ 4.78 ಲಕ್ಷ ಜಲ ಸಮಿತಿಗಳನ್ನು ರಚಿಸಲಾಗಿದೆ.

ಜಲ ಜೀವನ್ ಮಿಷನ್‌ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಜಂಟಿಯಾಗಿ ಧನಸಹಾಯ ಮಾಡಲು ಅವಕಾಶವಿದೆ, ಇದರಲ್ಲಿ ಕೇಂದ್ರ ಸರ್ಕಾರವು ಶಾಸಕಾಂಗ ಸಭೆಯನ್ನು ಹೊಂದಿರದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 100% ಪಾಲನ್ನು ನೀಡಿದೆ. ಶಾಸಕಾಂಗ ಸಭೆಯೊಂದಿಗೆ, ಕೇಂದ್ರ ಮತ್ತು ರಾಜ್ಯದ ಪಾಲು 90: 10 ಆಗಿರುತ್ತದೆ ಮತ್ತು ಇತರ ರಾಜ್ಯಗಳು 50:50 ಪಾಲು ಇರುತ್ತದೆ. ಇದರ ಹೊರತಾಗಿ, ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳ ನಡುವೆ ನೀರಿನ ಮಾನಿಟರಿಂಗ್ ಸಿಸ್ಟಮ್​ಗಳ ಚಟುವಟಿಕೆಗಳಿಗೆ 90:10 ಮತ್ತು ಇತರ ರಾಜ್ಯಗಳ ನಡುವೆ 60:40 ಹಣಕಾಸಿನ ನರೆವು ನೀಡಿದೆ.

Published On - 6:54 pm, Wed, 26 October 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ