AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬೋರ್​ವೆಲ್​ಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ

ಮಂಗಳವಾರ ಗುಜರಾತ್‌ನ ಜಾಮ್‌ನಗರದಲ್ಲಿ ಮಗುವೊಂದು ಬೋರ್‌ವೆಲ್‌ಗೆ ಬಿದ್ದಿತ್ತು. 9 ಗಂಟೆಗಳ ಕಠಿಣ ಪರಿಶ್ರಮದ ನಂತರ ಹೊರತೆಗೆಯಲಾಗಿದೆ ಮಗು ಸುರಕ್ಷಿತವಾಗಿde. ಅಗ್ನಿಶಾಮಕ ದಳದ ಸಿಬ್ಬಂದಿ ಬಿಡುವು ನೀಡದೆ ನಿರಂತರವಾಗಿ 9 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಮಗುವನ್ನು ಸುಸ್ಥಿತಿಯಲ್ಲಿಟ್ಟು ಗುಂಡಿಯಿಂದ ಹೊರ ತೆಗೆಯಲಾಗಿದೆ. ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಾತ್: ಬೋರ್​ವೆಲ್​ಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ
ಬೋರ್​ವೆಲ್
ನಯನಾ ರಾಜೀವ್
|

Updated on: Feb 07, 2024 | 11:04 AM

Share

ಬೋರ್​ವೆಲ್(Borewell) ​ಗೆ ಬಿದ್ದ 2 ವರ್ಷದ ಮಗುವನ್ನು ರಕ್ಷಣೆ ಮಾಡಿರುವ ಘಟನೆ ಗುಜರಾತ್​ನ ಜಾಮ್​ನಗರದಲ್ಲಿ ನಡೆದಿದೆ. ಗುಜರಾತ್​ನ ಜಾಮ್​ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಮಗುವೊಂದು ಬೋರ್​ವೆಲ್​ಗೆ ಬಿದ್ದಿತ್ತು, ಆ ಮಗುವನ್ನು ಇಂದು ಬೆಳಗಿನ ಜಾವ ರಕ್ಷಣೆ ಮಾಡಲಾಗಿದೆ. ಸತತ 9 ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿತ್ತು, ತಕ್ಷಣ ಚಿಕಿತ್ಸೆಗಾಗಿ ಜಾಮ್​ನಗರದ ಆಸ್ಪತ್ರೆಗೆ ಕಳುಹಿಸಲಾಗಿದೆ.

ಎರಡು ವರ್ಷದ ಮಗುವಿನ ಹೆಸರು ರಾಜು ಮತ್ತು ಪೋಷಕರು ಮಧ್ಯಪ್ರದೇಶದ ನಿವಾಸಿಗಳು. ಜಾಮ್‌ನಗರ ನಗರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಾಲಕರು 15 ದಿನಗಳ ಹಿಂದೆ ಜಾಮ್‌ನಗರಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದು, ರಾಜು ಕಿರಿಯ ಮಗ.

ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕರೆಯಲಾಗಿತ್ತು. ಜನವರಿಯಲ್ಲಿ ಗುಜರಾತ್​ನ ದ್ವಾರಕಾದಲ್ಲಿ ಬೋರ್​ವೆಲ್​ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಳು.

ಮತ್ತಷ್ಟು ಓದಿ:150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

ಏಂಜೆಲ್ ಸಖ್ರಾ ಎಂದು ಗುರುತಿಸಲಾದ ಬಾಲಕಿಯನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು, ಖಂಭಾಲಿಯಾ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಆಕೆ ಸಾವನ್ನಪ್ಪಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!