AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬೋರ್​ವೆಲ್​ಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ

ಮಂಗಳವಾರ ಗುಜರಾತ್‌ನ ಜಾಮ್‌ನಗರದಲ್ಲಿ ಮಗುವೊಂದು ಬೋರ್‌ವೆಲ್‌ಗೆ ಬಿದ್ದಿತ್ತು. 9 ಗಂಟೆಗಳ ಕಠಿಣ ಪರಿಶ್ರಮದ ನಂತರ ಹೊರತೆಗೆಯಲಾಗಿದೆ ಮಗು ಸುರಕ್ಷಿತವಾಗಿde. ಅಗ್ನಿಶಾಮಕ ದಳದ ಸಿಬ್ಬಂದಿ ಬಿಡುವು ನೀಡದೆ ನಿರಂತರವಾಗಿ 9 ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದು, ಮಗುವನ್ನು ಸುಸ್ಥಿತಿಯಲ್ಲಿಟ್ಟು ಗುಂಡಿಯಿಂದ ಹೊರ ತೆಗೆಯಲಾಗಿದೆ. ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಾತ್: ಬೋರ್​ವೆಲ್​ಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ
ಬೋರ್​ವೆಲ್
ನಯನಾ ರಾಜೀವ್
|

Updated on: Feb 07, 2024 | 11:04 AM

Share

ಬೋರ್​ವೆಲ್(Borewell) ​ಗೆ ಬಿದ್ದ 2 ವರ್ಷದ ಮಗುವನ್ನು ರಕ್ಷಣೆ ಮಾಡಿರುವ ಘಟನೆ ಗುಜರಾತ್​ನ ಜಾಮ್​ನಗರದಲ್ಲಿ ನಡೆದಿದೆ. ಗುಜರಾತ್​ನ ಜಾಮ್​ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಮಗುವೊಂದು ಬೋರ್​ವೆಲ್​ಗೆ ಬಿದ್ದಿತ್ತು, ಆ ಮಗುವನ್ನು ಇಂದು ಬೆಳಗಿನ ಜಾವ ರಕ್ಷಣೆ ಮಾಡಲಾಗಿದೆ. ಸತತ 9 ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿತ್ತು, ತಕ್ಷಣ ಚಿಕಿತ್ಸೆಗಾಗಿ ಜಾಮ್​ನಗರದ ಆಸ್ಪತ್ರೆಗೆ ಕಳುಹಿಸಲಾಗಿದೆ.

ಎರಡು ವರ್ಷದ ಮಗುವಿನ ಹೆಸರು ರಾಜು ಮತ್ತು ಪೋಷಕರು ಮಧ್ಯಪ್ರದೇಶದ ನಿವಾಸಿಗಳು. ಜಾಮ್‌ನಗರ ನಗರದಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಾಲಕರು 15 ದಿನಗಳ ಹಿಂದೆ ಜಾಮ್‌ನಗರಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದು, ರಾಜು ಕಿರಿಯ ಮಗ.

ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕರೆಯಲಾಗಿತ್ತು. ಜನವರಿಯಲ್ಲಿ ಗುಜರಾತ್​ನ ದ್ವಾರಕಾದಲ್ಲಿ ಬೋರ್​ವೆಲ್​ಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಳು.

ಮತ್ತಷ್ಟು ಓದಿ:150 ಅಡಿ ಆಳದ ಬೋರ್​ವೆಲ್​ಗೆ ಬಿದ್ದ 4 ವರ್ಷದ ಮಗು; ಪೊಲೀಸರಿಂದ ರಕ್ಷಣಾ ಕಾರ್ಯಾಚಾರಣೆ

ಏಂಜೆಲ್ ಸಖ್ರಾ ಎಂದು ಗುರುತಿಸಲಾದ ಬಾಲಕಿಯನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು, ಖಂಭಾಲಿಯಾ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಆಕೆ ಸಾವನ್ನಪ್ಪಿದ್ದಾಳೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!