ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿ, 7 ಮಂದಿ ಸಾವು

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಸೆಪ್ಟೆಂಬರ್ 25 ರ ಬುಧವಾರ ಬೆಳಿಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.

ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ  ಟ್ರಕ್​ಗೆ ಕಾರು ಡಿಕ್ಕಿ, 7 ಮಂದಿ ಸಾವು
ಅಪಘಾತImage Credit source: ABP Live
Follow us
|

Updated on: Sep 25, 2024 | 10:03 AM

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಸೆಪ್ಟೆಂಬರ್ 25 ರ ಬುಧವಾರ ಬೆಳಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಎಂಟು ಜನರು ಕುಳಿತಿದ್ದರು, ಅವರೆಲ್ಲರೂ ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಅಹಮದಾಬಾದ್‌ಗೆ ಹಿಂತಿರುಗುತ್ತಿದ್ದರು. ಕಾರು ಹಿಮ್ಮತ್‌ನಗರ ಪ್ರದೇಶದ ಸಹಕಾರಿ ಗಿರಣಿ ಬಳಿ ಬಂದ ತಕ್ಷಣ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳದವರು ಕಾರಿನಿಂದ ಶವಗಳನ್ನು ತೆಗೆಯಲು ಕಟ್ಟರ್ ಬಳಸಬೇಕಾಯಿತು.ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರೆಲ್ಲರೂ ಅಹಮದಾಬಾದ್ ನಿವಾಸಿಗಳು. ಪೊಲೀಸರು ಮೃತದೇಹಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಪ್ರಾಥಮಿಕ ತನಿಖೆಯ ಪ್ರಕಾರ ಕಾರು ಅತಿವೇಗ ಮತ್ತು ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಠಾತ್ ನಿದ್ದೆ ಜಾಸ್ತಿಯಾದ ಕಾರಣ ಮುಂದೆ ಹೋಗುತ್ತಿದ್ದ ಟ್ರಕ್ ಕಾಣಿಸದೇ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಕಾರು ಮುಂಭಾಗದಿಂದ ತೀವ್ರವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ