AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿ, 7 ಮಂದಿ ಸಾವು

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಸೆಪ್ಟೆಂಬರ್ 25 ರ ಬುಧವಾರ ಬೆಳಿಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.

ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ  ಟ್ರಕ್​ಗೆ ಕಾರು ಡಿಕ್ಕಿ, 7 ಮಂದಿ ಸಾವು
ಅಪಘಾತImage Credit source: ABP Live
ನಯನಾ ರಾಜೀವ್
|

Updated on: Sep 25, 2024 | 10:03 AM

Share

ಗುಜರಾತ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇವಸ್ಥಾನದಿಂದ ಹಿಂದಿರುಗುವಾಗ ಟ್ರಕ್​ಗೆ ಕಾರು ಡಿಕ್ಕಿಯಾಗಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಸಬರಕಾಂತ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಸೆಪ್ಟೆಂಬರ್ 25 ರ ಬುಧವಾರ ಬೆಳಗ್ಗೆ 6 ಗಂಟೆಗೆ ಅಪಘಾತ ಸಂಭವಿಸಿದೆ.

ಕಾರಿನಲ್ಲಿ ಎಂಟು ಜನರು ಕುಳಿತಿದ್ದರು, ಅವರೆಲ್ಲರೂ ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಅಹಮದಾಬಾದ್‌ಗೆ ಹಿಂತಿರುಗುತ್ತಿದ್ದರು. ಕಾರು ಹಿಮ್ಮತ್‌ನಗರ ಪ್ರದೇಶದ ಸಹಕಾರಿ ಗಿರಣಿ ಬಳಿ ಬಂದ ತಕ್ಷಣ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಅಗ್ನಿಶಾಮಕ ದಳದವರು ಕಾರಿನಿಂದ ಶವಗಳನ್ನು ತೆಗೆಯಲು ಕಟ್ಟರ್ ಬಳಸಬೇಕಾಯಿತು.ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರೆಲ್ಲರೂ ಅಹಮದಾಬಾದ್ ನಿವಾಸಿಗಳು. ಪೊಲೀಸರು ಮೃತದೇಹಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಲಾರಿಗಳು, 1 ಸ್ಲೀಪರ್ ಕೋಚ್ ಬಸ್, ಕಾರು ನಡುವೆ ಸರಣಿ ಅಪಘಾತ; ಹಲವರಿಗೆ ಗಾಯ

ಪ್ರಾಥಮಿಕ ತನಿಖೆಯ ಪ್ರಕಾರ ಕಾರು ಅತಿವೇಗ ಮತ್ತು ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಠಾತ್ ನಿದ್ದೆ ಜಾಸ್ತಿಯಾದ ಕಾರಣ ಮುಂದೆ ಹೋಗುತ್ತಿದ್ದ ಟ್ರಕ್ ಕಾಣಿಸದೇ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಕಾರು ಮುಂಭಾಗದಿಂದ ತೀವ್ರವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ