AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ ಅಪಘಾತದಲ್ಲಿ 9 ಜನ ಸಾವು; ಪ್ರಧಾನಿ ಸಚಿವಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.

ಗುಜರಾತ್​​ ಅಪಘಾತದಲ್ಲಿ 9 ಜನ ಸಾವು; ಪ್ರಧಾನಿ ಸಚಿವಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
ಪ್ರಧಾನಿ ನರೇಂದ್ರ ಮೋದಿ (ಎಎನ್​ಐ ಚಿತ್ರ)Image Credit source: ANI
TV9 Web
| Edited By: |

Updated on: Dec 31, 2022 | 3:01 PM

Share

ಅಹಮದಾಬಾದ್: ಗುಜರಾತ್‌ನ ನವಸಾರಿಯಲ್ಲಿ (Navasari Accident) ಇಂದು ಬೆಳಗಿನ ಜಾವ ಬಸ್ ಮತ್ತು ಫಾರ್ಚುನರ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿ, 32 ಮಂದಿ ಗಾಯಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ಸಂಭವಿಸಿದ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 32 ಮಂದಿಯಲ್ಲಿ 17 ಜನರನ್ನು ವಲ್ಸಾದ್‌ನ ಆಸ್ಪತ್ರೆಗೆ, 14 ಮಂದಿಯನ್ನು ನವಸಾರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯಲ್ಲಿ ಗಾಯಗೊಂಡ ಇನ್ನೊಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸೂರತ್‌ಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ: ಗುಜರಾತ್​​ನ ನವಸಾರಿಯಲ್ಲಿ ಭೀಕರ ಅಪಘಾತ; 9 ಜನ ಸಾವು, 32 ಮಂದಿಗೆ ಗಾಯ

ಎಸ್‌ಯುವಿ (ಫಾರ್ಚುನರ್) ಅಂಕಲೇಶ್ವರದ ಸಂಸ್ಥೆಯೊಂದರ ಉದ್ಯೋಗಿಗಳಾಗಿರುವ 9 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಬಸ್ ಅಹಮದಾಬಾದ್‌ನಿಂದ ವಲ್ಸಾದ್‌ಗೆ ಜನರನ್ನು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದೆ. “ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. PMNRFನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ