AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Statue: 54 ಅಡಿ ಎತ್ತರದ ಹನುಮಂತನ ಪ್ರತಿಮೆ ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್​ನಲ್ಲಿ 54 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇಂದು ನಾಡಿನಾದ್ಯಂತ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

Hanuman Statue: 54 ಅಡಿ ಎತ್ತರದ ಹನುಮಂತನ ಪ್ರತಿಮೆ ಅನಾವರಣಗೊಳಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಹನುಮಂತನ ಪ್ರತಿಮೆImage Credit source: ANI
ನಯನಾ ರಾಜೀವ್
|

Updated on: Apr 06, 2023 | 12:50 PM

Share

ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಗುಜರಾತ್​ನಲ್ಲಿ 54 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಇಂದು ನಾಡಿನಾದ್ಯಂತ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನ ಬೊಟಾಡ್ ಜಿಲ್ಲೆಯ ಸಾರಂಗ್‌ಪುರ ದೇವಸ್ಥಾನದಲ್ಲಿ 54 ಅಡಿ ಎತ್ತರದ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದಲ್ಲದೇ ಏಳು ಎಕರೆಯಲ್ಲಿ ನಿರ್ಮಿಸಿರುವ ದೇವಸ್ಥಾನದ ನೂತನ ರೆಸ್ಟೋರೆಂಟ್‌ಗೂ ಅಮಿತ್ ಶಾ ಚಾಲನೆ ನೀಡಿದರು. ಈ ದೇವಾಲಯಕ್ಕೆ ಭೇಟಿ ನೀಡುವುದರಿಂದ ಜನರು ಶನಿದೇವನ ಕೋಪದಿಂದ ಮುಕ್ತರಾಗುತ್ತಾರೆ ಎನ್ನುವ ಪ್ರತೀತಿ ಇದೆ.

ಮಾಹಿತಿ ಪ್ರಕಾರ, ಪಂಚಧಾತುಗಳಿಂದ ತಯಾರಿಸಿದ 30 ಸಾವಿರ ಕೆಜಿ ತೂಕದ ಈ ವಿಗ್ರಹವನ್ನು ಏಳು ಕಿ.ಮೀ ದೂರದಿಂದಲೂ ನೋಡಬಹುದಾಗಿದೆ. ಇದಲ್ಲದೇ ಈ ಪ್ರತಿಮೆಯ ವೆಚ್ಚ ಆರು ಕೋಟಿ ರೂಪಾಯಿ. ಕಷ್ಟಭಂಜನ ಹನುಮಾನ್ ದೇವಾಲಯವನ್ನು ವಿಕ್ರಮ್ ಸಂವತ್ 1905 ರಲ್ಲಿ ಸ್ಥಾಪಿಸಲಾಯಿತು.

ಮತ್ತಷ್ಟು ಓದಿ: Hanuman Jayanti 2023: ಹನುಮನಿಗೆ ಈ ಸಿಹಿ ಪ್ರಸಾದ ಅರ್ಪಿಸಿ

ಇದನ್ನು ನಿರ್ಮಿಸಿದವರು ಸದ್ಗುರು ಗೋಪಾಲಾನಂದ ಸ್ವಾಮಿಗಳು. ಗುಜರಾತಿನ ಬೋಟಾಡ್ ಜಿಲ್ಲೆಯ ಸಾರಂಗ್‌ಪುರದಲ್ಲಿ ಮಾಡಿದ ಕಷ್ಟಭಂಜನ ಹನುಮಂತ ಇಲ್ಲಿ ಹನುಮಾನ್ ದಾದಾ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಬಹಳ ಹಿಂದೆಯೇ ಇಲ್ಲಿನ ಜನರು ಶನಿದೇವನ ಕೋಪಕ್ಕೆ ಗುರಿಯಾಗುತ್ತಿದ್ದರು ಎಂದು ಹೇಳಲಾಗುತ್ತದೆ, ಆಗ ಭಕ್ತರು ಹನುಮಂತನನ್ನು ಪೂಜಿಸುತ್ತಾರೆ. ಆಗ ಹನುಮಂತ ಶನಿದೇವರ ಕೋಪವನ್ನು ಕಡಿಮೆ ಮಾಡಿದನು ಎಂದು ಹೇಳಲಾಗುತ್ತದೆ.

ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು, ಹಬ್ಬದ ಸಮಯದಲ್ಲಿ ಶಾಂತಿ ಕಾಪಾಡಬೇಕು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ ಎಲ್ಲಾ ರೀತಿಯ ಶಕ್ತಿಗಳ ಮೇಲೆ ನಿಗಾ ಇಡಬೇಕು ಎಂದು ಗೃಹ ಸಚಿವಾಲಯ ಟ್ವೀಟ್ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!