AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೊವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಪಂದ್ಯ ಆಯೋಜಿಸಿದ ಬಿಜೆಪಿ ಶಾಸಕ; ವಿಡಿಯೋ ವೈರಲ್

ಕಳೆದ ಕೆಲವು ದಿನಗಳಲ್ಲಿ ಗುಜರಾತ್​ನಲ್ಲಿ ಕೊವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಆದರೂ ಬಿಜೆಪಿ ಶಾಸಕ ರಾತ್ರಿ ಹೊತ್ತು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ.

Viral Video: ಕೊವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಪಂದ್ಯ ಆಯೋಜಿಸಿದ ಬಿಜೆಪಿ ಶಾಸಕ; ವಿಡಿಯೋ ವೈರಲ್
ಬಿಜೆಪಿ ಶಾಸಕ ಭಾಗವಹಿಸಿದ್ದ ಕ್ರಿಕೆಟ್ ಪಂದ್ಯ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 28, 2021 | 1:11 PM

Share

ಅಹಮದಾಬಾದ್: ಈಗಾಗಲೇ ಕೊವಿಡ್-19 ಕೇಸುಗಳು ದೇಶಾದ್ಯಂತ ಹೆಚ್ಚುತ್ತಲೇ ಇದೆ. ಅದರ ನಡುವೆ ಒಮಿಕ್ರಾನ್ ಹರಡುವಿಕೆ ಕೂಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಮುಂತಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಆದರೆ, ಗುಜರಾತ್ ಬಿಜೆಪಿ ಶಾಸಕ ಸೌರಭ್ ಪಟೇಲ್ ತಮ್ಮ ಪಕ್ಷದಿಂದ ಆಯೋಜಿಸಲಾಗಿದ್ದ ರಾತ್ರಿ ಕ್ರಿಕೆಟ್ ಪಂದ್ಯಾವಳಿಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಈ ಕ್ರಿಕೆಟ್ ಮ್ಯಾಚ್​ನಲ್ಲಿ ನೂರಾರು ಜನರು ಭಾಗವಹಿಸಿದ್ದರು. ಅವರಲ್ಲಿ ಹೆಚ್ಚಿನವರು ಮಾಸ್ಕ್ ಹಾಕಿರಲಿಲ್ಲ ಮತ್ತು ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸಿರಲಿಲ್ಲ.

ಡೆಲ್ಟಾ ಪ್ಲಸ್​ ವೈರಸ್​ಗಿಂತಲೂ ಹೆಚ್ಚು ವೇಗವಾಗಿ ಹರಡುವ ಒಮಿಕ್ರಾನ್ ರೂಪಾಂತರ ಪ್ರಕರಣಗಳು ಭಾರತದಲ್ಲಿ ಹೆಚ್ಚುತ್ತಲೇ ಇವೆ. ಆದರೂ ಬಿಜೆಪಿ ಶಾಸಕ ರಾತ್ರಿ ಹೊತ್ತು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ‘ನನ್ನ ಕ್ಷೇತ್ರವಾದ ಬೋಟಾಡ್​ನಲ್ಲಿ ಯಾವುದೇ ಕೋವಿಡ್ ಪ್ರಕರಣಗಳಿಲ್ಲ. ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದಾಗ ಸುಮಾರು ಒಂದು ತಿಂಗಳ ಹಿಂದೆ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರಾರಂಭಿಸಲಾಯಿತು. ಕೊವಿಡ್ ಕೇಸುಗಳು ಕಡಿಮೆ ಇರುವುದರಿಂದಲೇ ಈ ನೈಟ್ ಕ್ರಿಕೆಟ್ ಮ್ಯಾಚ್ ಅನ್ನು ಆಯೋಜಿಸಿದ್ದೆವು’ ಎಂದು ಶಾಸಕ ಸೌರಭ್ ಪಟೇಲ್ ತಾವು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಎರಡು ವಾರ್ಡ್‌ಗಳ ನಡುವೆ ಕ್ರಿಸ್‌ಮಸ್‌ನಲ್ಲಿ ಆಡಿದ ಟೂರ್ನಮೆಂಟ್ ಫೈನಲ್‌ನ ವಿಡಿಯೋಗಳಲ್ಲಿ ಪ್ರೇಕ್ಷಕರು, ಮಾಸ್ಕ್ ಇಲ್ಲದ ಅನೇಕರು ವಿಜಯೋತ್ಸವದ ಅಂಗವಾಗಿ ಪಿಚ್‌ಗೆ ಓಡಿ ಸಂಭ್ರಮಿಸಿರುವುದನ್ನು ನೋಡಬಹುದು.

ಭಾರತದ ಮಾಜಿ ಕ್ರಿಕೆಟಿಗ ಮುನಾಫ್ ಪಟೇಲ್ ಅವರು ಶಾಸಕರೊಂದಿಗೆ ಪಂದ್ಯಾವಳಿಯ ಟ್ರೋಫಿಗಳನ್ನು ಹಸ್ತಾಂತರಿಸಿದ್ದಾರೆ. ಅಂತಿಮ ಪಂದ್ಯವನ್ನು ಹೊರತುಪಡಿಸಿ, ಇತರ ಪಂದ್ಯಗಳಲ್ಲಿ ಕೆಲವೇ ಜನರು ಆಗಮಿಸಿದ್ದರು ಮತ್ತು ಅವರ ಸಮಯದಲ್ಲಿ ಎಲ್ಲಾ ಕೋವಿಡ್ ನಿಯಮಗಳನ್ನು ಅನುಸರಿಸಲಾಗಿದೆ ಎಂದು ಶಾಸಕರು ಹೇಳಿದ್ದಾರೆ. ಅವರ ವಿಧಾನಸಭಾ ಕ್ಷೇತ್ರದಿಂದ 140 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.

“ಹಿಂದಿನ ಪಂದ್ಯಗಳಲ್ಲಿ ಹೆಚ್ಚು ಜನರು ಇರಲಿಲ್ಲ. ಫೈನಲ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದರು. ಇದು ನಮ್ಮ ನಿರೀಕ್ಷೆಗೂ ಮೀರಿತ್ತು. ನಾವು ಆಟವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇವೆ” ಎಂದು ಶಾಸಕರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ಗುಜರಾತ್​ನಲ್ಲಿ ಕೊವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. 948 ಪ್ರಕರಣಗಳು ಸಕ್ರಿಯವಾಗಿವೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತರಾದವರ ಕುಟುಂಬಗಳಿಗೆ ಒಂದೂವರೆ ಲಕ್ಷ ಪರಿಹಾರ: ಕಂದಾಯ ಸಚಿವ ಆರ್ ಅಶೋಕ್

9 ತಿಂಗಳ ಹಿಂದೆ 2ನೇ ಡೋಸ್ ಕೊವಿಡ್ ಲಸಿಕೆ ಪಡೆದವರಿಗೆ ಮುಂಜಾಗರೂಕತೆ ಲಸಿಕೆ; ನೋಂದಣಿ ಹೇಗೆ? ಇಲ್ಲಿದೆ ಮಾಹಿತಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ