AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಯಾವುದೇ ವಿರೋಧವನ್ನು ಎದುರಿಸದೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ರದ್ದು, ಏಳು ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯುವಿಕೆಯೊಂದಿಗೆ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಸಂಸದರಾಗಿ ಘೋಷಿಸಲು ದಾರಿ ಮಾಡಿಕೊಟ್ಟಿದೆ.

Lok Sabha Election: ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ
ಮುಖೇಶ್​
ನಯನಾ ರಾಜೀವ್
|

Updated on: Apr 22, 2024 | 3:02 PM

Share

ಸಾಮಾನ್ಯವಾಗಿ ಚುನಾವಣೆ(Election) ಎಂದ ಮೇಲೆ ಮೊದಲು ಅಭ್ಯರ್ಥಿ ಕಣಕ್ಕಿಳಿಸುವುದು, ನಂತರ ನಾಮಪತ್ರ(Nomination) ಸಲ್ಲಿಕೆ, ನಾಮಪತ್ರ ಪರಿಶೀಲನೆ, ಚುನಾವಣೆ, ಮತ ಎಣಿಕೆ ಇದೆಲ್ಲಾ ಆದ ನಂತರ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆ. ಆದರೆ ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.

ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರ ಬಿಜೆಪಿ ಖಾತೆಗೆ ಬಂದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್(Mukesh Dalad) ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ನಿನ್ನೆ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ಕೂಡ ರದ್ದಾಗಿದೆ. ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗಾಗಿ ಮುಖೇಶ್​ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.

ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಘೋಷಿಸಲಾಗಿದೆ. ಬಿಜೆಪಿಯ ಮುಖೇಶ್ ದಲಾಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆ ಪ್ರಚಾರದ ಅಖಾಡದಲ್ಲಿ ಚೊಂಬು, ಚಿಪ್ಪು, ಟಾಯ್ಲೆಟ್ಟು: ಟೀಕೆಗಳಲ್ಲೂ ಕ್ರಿಯಾಶೀಲತೆ ಉಂಟು!

ಈ ಬಾರಿ ಗುಜರಾತ್​ನ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಸಮೀಕರಣ ಸಂಪೂರ್ಣವಾಗಿ ಬದಲಾಗಿದೆ. ಕಾಂಗ್ರೆಸ್​ ಅಭ್ಯರ್ಥಿ ನೀಲೇಶ್​ ಕುಂಭಾಣಿ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಈ ಕ್ಷೇತ್ರದ ಚುನಾವಣಾ ಇತಿಹಾಸವು ತುಂಬಾ ಆಸಕ್ತಿದಾಯಕವಾಗಿದೆ.

ಇದು ದೇಶದ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಸಂಸದರಾಗಿ ಆಯ್ಕೆಯಾದ ಕ್ಷೇತ್ರವಾಗಿದೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದೆ. ಅಂದರೆ ಒಮ್ಮೆಯೂ ಕಾಂಗ್ರೆಸ್​ ಗೆದ್ದ ಇತಿಹಾಸವೇ ಇಲ್ಲ.

ಕುಂಭಣಿ ಮತ್ತು ಪಡಸಾಲ ಅವರು ಸಲ್ಲಿಸಿದ್ದ ಮೂರು ನಾಮಪತ್ರಗಳಲ್ಲಿ ಮಾಡಿರುವ ಸಹಿಯಲ್ಲಿ ಮೇಲ್ನೋಟಕ್ಕೆ ವ್ಯತ್ಯಾಸಗಳು ಕಂಡು ಬಂದ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ