Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ; ಇಂದು ಹೊಸ ಸಚಿವರ ಪ್ರಮಾಣ ವಚನ ಸಾಧ್ಯತೆ

ಇನ್ನು ಗುಜರಾತ್​​ನಲ್ಲಿ ಹೊಸ ಮಂತ್ರಿಮಂಡಲ ರಚನೆ ಸಂಬಂಧ ಗುಜರಾತ್​ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಯಾದವ್​ ಅವರು ಸತತ ಎರಡು ದಿನಗಳಿಂದ ಸಭೆ ನಡೆಸುತ್ತಿದ್ದಾರೆ.

ಗುಜರಾತ್​ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯ; ಇಂದು ಹೊಸ ಸಚಿವರ ಪ್ರಮಾಣ ವಚನ ಸಾಧ್ಯತೆ
ಗುಜರಾತ್​ ಬಿಜೆಪಿ
Follow us
TV9 Web
| Updated By: Lakshmi Hegde

Updated on:Sep 16, 2021 | 12:02 PM

ದೆಹಲಿ: ಗುಜರಾತ್​​ನ ನೂತನ ಮುಖ್ಯಮಂತ್ರಿ (Gujarat New Chief Minister)ಯಾಗಿ ಭೂಪೇಂದ್ರ ಪಟೇಲ್​ (Bhupendra Patel) ಸೆಪ್ಟೆಂಬರ್​ 13ರಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಮೂರು ದಿನಗಳಾದರೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಬುಧವಾರವೇ ಹೊಸ ಸಚಿವ ಸಂಪುಟ ರಚನೆಯಾಗುತ್ತದೆ ಎಂದು ಹೇಳಲಾಗಿತ್ತಾದರೂ, ಕೆಲವು ಆಂತರಿಕ ಕಲಹ, ಭಿನ್ನಾಭಿಪ್ರಾಯಗಳಿಂದಾಗಿ ಅದಾಗಲಿಲ್ಲ. ಈಗಾಗಲೇ ಇರುವ ಕೆಲವು ಸಚಿವರನ್ನು ಹೊಸ ಸಂಪುಟದಿಂದ ಕೈಬಿಡಲಾಗುವ ಬಗ್ಗೆ ಮಾಹಿತಿ ನೀಡುತ್ತಿದ್ದಂತೆಯೇ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಎಂದು ಹೇಳಲಾಗಿದೆ.  

ಇಂದು (ಗುರುವಾರ) ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯೆ ಹೊಸ ಮಂತ್ರಿ ಮಂಡಳಿ ರಚನೆಯಾಗಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಸಿ.ಆರ್​.ಪಾಟೀಲ್​ ತಿಳಿಸಿದ್ದಾಗಿ ಇಂಡಿಯನ್​ ಎಕ್ಸ್​​ಪ್ರೆಸ್​ ವರದಿ ಮಾಡಿದೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ರಚನೆ ಸಂಬಂಧ ರಾಜಭವನದಲ್ಲಿ ಸಕಲ ಸಿದ್ಧತೆಗಳೂ ನಡೆದಿವೆ ಎಂದು ಹೇಳಿದ್ದಾರೆ.

ಎರಡು ದಿನಗಳ ಸತತ ಸಭೆ ಇನ್ನು ಗುಜರಾತ್​​ನಲ್ಲಿ ಹೊಸ ಮಂತ್ರಿಮಂಡಲ ರಚನೆ ಸಂಬಂಧ ಗುಜರಾತ್​ ಬಿಜೆಪಿ ಮುಖ್ಯಸ್ಥ ಭೂಪೇಂದ್ರ ಯಾದವ್​ ಅವರು ಸತತ ಎರಡು ದಿನಗಳಿಂದ ಸಭೆ ನಡೆಸುತ್ತಿದ್ದಾರೆ. ಮಂತ್ರಿಮಂಡಲ ಸೇರುವ ಸಚಿವರ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ವ್ಯಾಪಕ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ ಹಲವು ಶಾಸಕರು ಮಾಜಿ ಮುಖ್ಯಮಂತ್ರಿ ವಿಜಯ್​ ರೂಪಾನಿಯವರನ್ನೂ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ವೃದ್ಧಾಪ್ಯ ವೇತನ ಬಂದಿಲ್ಲವೆಂದು ಅಜ್ಜಿಯ ಅಳಲು, ತಹಶೀಲ್ದಾರ್​ಗೆ ವಿಡಿಯೋ ಕಾಲ್ ಮಾಡಿ ನೆರವಿಗೆ ಬಂದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ

ರಸ್ತೆ ಮಧ್ಯೆ ಕುಣಿದು ವಿಡಿಯೋ ಹರಿಬಿಟ್ಟ ಯುವತಿಗೆ ಟ್ರಾಫಿಕ್ ನಿಯಮ ಉಲ್ಲಂಘನೆಗೆ ನೋಟೀಸು ನೀಡಿದ ಪೊಲೀಸರು

Published On - 11:54 am, Thu, 16 September 21

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್