AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

70 ವರ್ಷದ ವ್ಯಕ್ತಿಯಿಂದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ

ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು.

70 ವರ್ಷದ ವ್ಯಕ್ತಿಯಿಂದ  ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ
ಕ್ರೈಂImage Credit source: Shutterstock
ನಯನಾ ರಾಜೀವ್
|

Updated on: Apr 26, 2026 | 8:25 AM

Share

ಮಹಿಸಾಗರ್, ಏಪ್ರಿಲ್ 26: ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು. ಘಟನೆ ನಡೆದ ದಿನ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಆರೋಪಿ, ತನ್ನ ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ. ನಂತರ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆತಂದು, ಬಾಗಿಲು ಲಾಕ್ ಮಾಡಿ ಮೃಗೀಯವಾಗಿ ವರ್ತಿಸಿದ್ದಾನೆ.

ದೌರ್ಜನ್ಯದ ನಂತರ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆರೋಪಿ ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ದಾನೆ. ಆದರೆ, ಸಂತ್ರಸ್ತ ಮಹಿಳೆ ಧೈರ್ಯಗುಂದದೆ ನಡೆದ ಅನ್ಯಾಯವನ್ನು ತನ್ನ ತಾಯಿಗೆ ತಿಳಿಸಿದ್ದಾರೆ. ಮಗಳ ಸ್ಥಿತಿಯನ್ನು ಕಂಡು ಮರುಗಿದ ತಾಯಿ ಕೂಡಲೇ ಲುನಾವಾಡ ಪೊಲೀಸ್ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, 70 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಂಗವಿಕಲ ವ್ಯಕ್ತಿಗಳ ಮೇಲಿನ ಅಪರಾಧಗಳು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಠಿಣ ಕಾನೂನು ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮನೆಯ ಹತ್ತಿರವೇ ಇರುವ ವಯಸ್ಸಾದ ಸಂಬಂಧಿಯೇ ಇಂತಹ ವಿಕೃತ ಕೃತ್ಯವೆಸಗಿರುವುದು ಸ್ಥಳೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ವಯಸ್ಸಾದವರು ಮಕ್ಕಳಿಗೆ ಮತ್ತು ಅಬಲರಿಗೆ ರಕ್ಷಣೆ ನೀಡಬೇಕು, ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ” ಎಂದು ಜನರು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು