AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat CM Resigns: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

Vijay Rupani resigned: ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಅಚ್ಚರಿ ಮೂಡಿಸಿದೆ. ಬಿ.ಎಲ್.ಸಂತೋಷ್​ ಗುಜರಾತ್​​ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Gujarat CM Resigns: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
ವಿಜಯ್ ರೂಪಾನಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Sep 11, 2021 | 3:56 PM

ಗಾಂಧಿನಗರ: ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಅಚ್ಚರಿ ಮೂಡಿಸಿದೆ. ಬಿ.ಎಲ್.ಸಂತೋಷ್​ ಗುಜರಾತ್​​ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ವಿಜಯ್ ರೂಪಾನಿ​ ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅವಕಾಶ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲು ಬದ್ಧ. ಪಕ್ಷದ ನಿರ್ಧಾರದ ಕುರಿತು ಯಾವುದೇ ಗೊಂದಲವಿಲ್ಲ. ಮುಂದಿನ ಚುನಾವಣೆಯಲ್ಲಿ ಮೋದಿ ಹೆಸರಲ್ಲಿ ಮತಯಾಚನೆ ಮಾಡುತ್ತೇವೆ. ಮುಂದಿನ ಮುಖ್ಯಮಂತ್ರಿಯನ್ನ ಪಕ್ಷ ನಿರ್ಧಾರ ಮಾಡುತ್ತದೆ. ನನಗೆ ನೀಡಿದ್ದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನನ್ನ ರಾಜೀನಾಮೆಯಲ್ಲಿ ಯಾವುದೇ ರೀತಿ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ.

ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಹಿನ್ನೆಲೆಯಲ್ಲಿ, ನಾಳೆ ಮಧ್ಯಾಹ್ನ ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಳೆಯೇ ನೂತನ ಸಿಎಂ ಆಯ್ಕೆ ಮಾಡಲು ಬಿಎಲ್​​ಪಿ ಸಭೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಅನುಸರಿಸಿರುವ ಮುಖ್ಯಮಂತ್ರಿ ಬದಲಾವಣೆ ತಂತ್ರ ಗುಜರಾತ್​​ನಲ್ಲೂ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ವರ್ಷ ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ.

ಉತ್ತರಾಖಂಡ್, ಕರ್ನಾಟಕದ ಬಳಿಕ ಗುಜರಾತ್​ನಲ್ಲಿ ಇಂತಹ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಹೈಕಮಾಂಡ್ ದಿಢೀರ್ ರಾಜಕೀಯ ಸಂಚಲನ ಸೃಷ್ಟಿಸುತ್ತಿದೆ. ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ವಿಜಯ್ ರೂಪಾನಿಯಿಂದ ರಾಜೀನಾಮೆ ಕೊಡಿಸಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದು, ಮುಂದೆ ಬಹುಸಂಖ್ಯಾತ ಪಾಟೀದಾರ್​ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ಪಾಟೀದಾರ್​ ಸಮುದಾಯ ಓಲೈಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.

ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಜಾತಿ ಲೆಕ್ಕಾಚಾರ, ಸಮುದಾಯದ ನಾಯಕತ್ವ ಅಥವಾ ಓಲೈಕೆ, ಚುನಾವಣೆ ಗೆಲ್ಲುವ ತಂತ್ರದ ಭಾಗವಾಗಿ ಈ ಮುಖ್ಯಮಂತ್ರಿ ಬದಲಾವಣೆ ನಡೆದಿದೆ ಎಂದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕೂಡ ಹೆಸರುಗಳು ಮುನ್ನೆಲೆಗೆ ಬಂದಿದೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿರುವ ಬೆನ್ನಲ್ಲಿ ಗುಜರಾತ್ ಸಿಎಂ ರೇಸ್​ನಲ್ಲಿ ಎರಡು ಹೆಸರು ಮುಂಚೂಣಿಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್​ ಮಾಂಡವೀಯಾ, ಪುರುಷೋತ್ತಮ್​ ರೂಪಾಲ ಹಾಗೂ ಆರ್​​ಸಿ ಫಾಲ್ಡು ಹೆಸರುಗಳು ಗುಜರಾತ್ ಸಿಎಂ ರೇಸ್​ನಲ್ಲಿ ಕೇಳಿಬಂದಿದೆ.

ಇದನ್ನೂ ಓದಿ: Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ

ಇದನ್ನೂ ಓದಿ: ‘ಹಿಂದು ಹುಡುಗಿಯರ ತಂಟೆಗೆ ಬರುವವರನ್ನು ಸುಮ್ಮನೆ ಬಿಡೋದಿಲ್ಲ’-ಗುಜರಾತ್​ ಸಿಎಂ ಎಚ್ಚರಿಕೆ

Published On - 3:20 pm, Sat, 11 September 21

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?