AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊತ್ತಂಬರಿ ಮತ್ತು ಮೆಂತ್ಯಗೆ ಇರುವ ವ್ಯತ್ಯಾಸ ಗುರುತಿಸಿ; ರಾಹುಲ್​ ಗಾಂಧಿಗೆ ಸವಾಲೊಡ್ಡಿದ ಗುಜರಾತ್ ಸಿಎಂ

ನೂತನ ಕೃಷಿ ಕಾಯ್ದೆಯನ್ನು ವಿರೋಧಿಸುವ ಮೊದಲು ರಾಹುಲ್​ ಗಾಂಧಿ ಕೊತ್ತಂಬರಿ ಮತ್ತು ಮೆಂತೆ ನಡುವಿನ ವ್ಯತ್ಯಾಸ ಗುರುತಿಸಲಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾಣಿ ಲೇವಡಿ ಮಾಡಿದ್ದಾರೆ.

ಕೊತ್ತಂಬರಿ ಮತ್ತು ಮೆಂತ್ಯಗೆ ಇರುವ ವ್ಯತ್ಯಾಸ ಗುರುತಿಸಿ; ರಾಹುಲ್​ ಗಾಂಧಿಗೆ ಸವಾಲೊಡ್ಡಿದ ಗುಜರಾತ್ ಸಿಎಂ
ವಿಜಯ್​ ರೂಪಾಣಿ ಮತ್ತು ರಾಹುಲ್​ ಗಾಂಧಿ
Skanda
| Edited By: |

Updated on: Dec 08, 2020 | 3:14 PM

Share

ಗಾಂಧಿನಗರ: ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಭಾರತ್​ ಬಂದ್​ ಅನ್ನು ರಾಹುಲ್​ ಗಾಂಧಿ  ಬೆಂಬಲಿಸಿಸಿದ್ದಾರೆ. ಆದ್ರೆ ಅದಕ್ಕೂ ಮೊದಲು ರಾಹುಲ್ ಗಾಧಿ ಕೊತ್ತಂಬರಿ ಮತ್ತು ಮೆಂತ್ಯ ಬೆಳೆಯ ನಡುವಿನ ವ್ಯತ್ಯಾಸ ಗುರುತಿಸಲಿ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾಣಿ ಸಾವಲು ರೂಪದಲ್ಲಿ, ಲೇವಡಿ ಮಾಡಿದ್ದಾರೆ.

ಗುಜರಾತ್​ನ ಮೆಹ್ಸಾನಾದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯ್​ ರೂಪಾಣಿ, ಕಾಂಗ್ರೆಸ್ ಪಕ್ಷವು ಜನರಿಂದ ತಿರಸ್ಕೃತಗೊಂಡು ಮೂಲೆ ಗುಂಪಾಗಿದೆ. ಈಗ ರೈತರ ಹೆಸರು ಹೇಳಿಕೊಂಡು ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಜ್ಞಾನದ ಬಗ್ಗೆ ಕುತೂಹಲವಿದೆ. ಅವರಿಗೆ ನಾನು ಸವಾಲೆಸೆಯುತ್ತೇನೆ. ರಾಹುಲ್​, ಕೊತ್ತಂಬರಿ ಮತ್ತು ಮೆಂತ್ಯ ಬೆಳೆಯ ನಡುವಿನ ವ್ಯತ್ಯಾಸ ಗುರುತಿಸಿ ಎಂದು ಗುಜರಾತ್ ಮುಖ್ಯಮಂತ್ರಿ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ.

ತಾನೂ ಮಾಡಲ್ಲ, ಮಾಡುವವರಿಗೆ ಬಿಡಲ್ಲ ಕಳೆದ ಲೋಕಸಭಾ ಚುನಾವಣೆಯಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿತ್ತು. ಆದರೆ, ಅವರಿಗೆ ಅಧಿಕಾರವೇ ಸಿಗಲಿಲ್ಲ. ಈಗ ಮೋದಿ ಸರ್ಕಾರ ಅದನ್ನು ಜಾರಿಗೊಳಿಸಲು ಹೊರಟರೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಜಯ್​ ರೂಪಾಣಿ ಕಾಂಗ್ರೆಸ್​ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರೈತರ ಬಗ್ಗೆ ಹುಸಿ ಕಾಳಜಿ ತೋರಿಸುವ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗುಜರಾತ್​ನಲ್ಲಿ ಶೇ. 18ರಷ್ಟು ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುತ್ತಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಕಾಂಗ್ರೆಸ್ ಬಾಯಿಯಲ್ಲಿ ಹೇಳುವುದು ಬಿಟ್ಟರೆ ಕೆಲಸ ಮಾಡಿ ತೋರಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ರೈತರ ಗಳಿಕೆ ದುಪ್ಪಟ್ಟು ಅಲ್ಲ; ಅರ್ಧದಷ್ಟು ಇಳಿಕೆ! ಇದು ‘ಸೂಟ್ ಬೂಟ್ ಕೀ ಸರ್ಕಾರ್’ ಕೊಡುಗೆ ಎಂದ ರಾಹುಲ್ ಗಾಂಧಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ