AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ

Vijay Rupani: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
KUSHAL V
| Edited By: |

Updated on:Feb 15, 2021 | 3:20 PM

Share

ಗಾಂಧಿನಗರ: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು. ವಡೋದರಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ರೂಪಾನಿ ನಗರದ ಮೂರು ಬಡಾವಣೆಗಳಲ್ಲಿ ಪ್ರಚಾರ ಮಾಡುವುದಕ್ಕೆ ಆಗಮಿಸಿದ್ದರು. ತರಸಾಲಿ ಮತ್ತು ಕರೇಲಿಬಾಗ್​ನಲ್ಲಿ ಭಾಷಣ ಮಾಡಿದ್ದ ಬಳಿಕ ನಿಜಾಂಪುರದಲ್ಲಿ ಭಾಷಣೆ ಮಾಡುವಾಗ ವೇದಿಕೆ ಮೇಲೆ ಕುಸಿದುಬಿದ್ದರು. ಈ ವೇಳೆ, ಅವರ ಹಿಂದೆಯಿದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿಯಲು ಯತ್ನಿಸಿದರೂ ಗುಜರಾತ್​ ಸಿಎಂ ನೆಲಕ್ಕೆ ಕುಸಿದರು.

ವೇದಿಕೆ ಮೇಲೆ ಕೆಲ ಹೊತ್ತು ಸುಧಾರಿಸಿಕೊಂಡ ಬಳಿಕ ರೂಪಾನಿ ಕೊಂಚ ಚೇತರಿಕೆ ಕಂಡರು. ಆದರೆ, ತಮ್ಮ ಭಾಷಣ ವನ್ನು ಅಲ್ಲೇ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು. ಚುನಾವಣಾ ಪ್ರಚಾರದಲ್ಲಿ ಕೈಗೊಂಡ ಓಡಾಟದಿಂದ ದಣಿವಾಗಿದ್ದ ಬೆನ್ನಲ್ಲೇ ಸಿಎಂ ಕುಸಿದುಬಿದ್ದರು. ಇದೀಗ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ನಿತಿನ್​ ಪಟೇಲ್​ ಮಾಹಿತಿ ನೀಡಿದರು.

ಇದನ್ನೂ ಓದಿ: ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!

Published On - 11:13 pm, Sun, 14 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ