AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ

Vijay Rupani: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು.

Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
ವೇದಿಕೆ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾನಿ
KUSHAL V
| Edited By: |

Updated on:Feb 15, 2021 | 3:20 PM

Share

ಗಾಂಧಿನಗರ: ಗುಜರಾತ್​ನ ವಡೋದರಾದ ನಿಜಾಂಪುರದಲ್ಲಿ ಭಾಷಣ ಮಾಡುವ ವೇಳೆ ಸಿಎಂ ವಿಜಯ್​ ರೂಪಾನಿ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ವೇದಿಕೆ ಮೇಲೆ ಮಾತನಾಡುವ ವೇಳೆ ಕೊಂಚ ಅಸ್ವಸ್ಥರಾಗಿ ಕಂಡುಬಂದ ಸಿಎಂ ವಿಜಯ್ ರೂಪಾನಿ ನೋಡನೋಡುತ್ತಿದ್ದಂತೆ ವೇದಿಕೆ ಮೇಲೆ ಕುಸಿದುಬಿದ್ದರು. ವಡೋದರಾದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಇರುವ ಹಿನ್ನೆಲೆಯಲ್ಲಿ ರೂಪಾನಿ ನಗರದ ಮೂರು ಬಡಾವಣೆಗಳಲ್ಲಿ ಪ್ರಚಾರ ಮಾಡುವುದಕ್ಕೆ ಆಗಮಿಸಿದ್ದರು. ತರಸಾಲಿ ಮತ್ತು ಕರೇಲಿಬಾಗ್​ನಲ್ಲಿ ಭಾಷಣ ಮಾಡಿದ್ದ ಬಳಿಕ ನಿಜಾಂಪುರದಲ್ಲಿ ಭಾಷಣೆ ಮಾಡುವಾಗ ವೇದಿಕೆ ಮೇಲೆ ಕುಸಿದುಬಿದ್ದರು. ಈ ವೇಳೆ, ಅವರ ಹಿಂದೆಯಿದ್ದ ಭದ್ರತಾ ಸಿಬ್ಬಂದಿ ಅವರನ್ನು ಹಿಡಿಯಲು ಯತ್ನಿಸಿದರೂ ಗುಜರಾತ್​ ಸಿಎಂ ನೆಲಕ್ಕೆ ಕುಸಿದರು.

ವೇದಿಕೆ ಮೇಲೆ ಕೆಲ ಹೊತ್ತು ಸುಧಾರಿಸಿಕೊಂಡ ಬಳಿಕ ರೂಪಾನಿ ಕೊಂಚ ಚೇತರಿಕೆ ಕಂಡರು. ಆದರೆ, ತಮ್ಮ ಭಾಷಣ ವನ್ನು ಅಲ್ಲೇ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು. ಚುನಾವಣಾ ಪ್ರಚಾರದಲ್ಲಿ ಕೈಗೊಂಡ ಓಡಾಟದಿಂದ ದಣಿವಾಗಿದ್ದ ಬೆನ್ನಲ್ಲೇ ಸಿಎಂ ಕುಸಿದುಬಿದ್ದರು. ಇದೀಗ, ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ನಿತಿನ್​ ಪಟೇಲ್​ ಮಾಹಿತಿ ನೀಡಿದರು.

ಇದನ್ನೂ ಓದಿ: ಅಭಿಮಾನಿಗಳ ಒತ್ತಾಯದ ಮೇರೆಗೆ.. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಜಬರ್​ದಸ್ತ್​ ಡ್ಯಾನ್ಸ್​!

Published On - 11:13 pm, Sun, 14 February 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್