AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದು ಹುಡುಗಿಯರ ತಂಟೆಗೆ ಬರುವವರನ್ನು ಸುಮ್ಮನೆ ಬಿಡೋದಿಲ್ಲ’-ಗುಜರಾತ್​ ಸಿಎಂ ಎಚ್ಚರಿಕೆ

ಗುಜರಾತ್​ನಲ್ಲಿ ಧಾರ್ಮಿಕ ಸ್ವಾತಂತ್ರ್ಯದ ತಿದ್ದುಪಡಿ ಕಾಯ್ದೆ 2021ನ್ನು ಏಪ್ರಿಲ್​ ತಿಂಗಳಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಹಾಗೇ, ಜೂನ್​ 15ರಂದು ಅಧಿಸೂಚನೆ ಹೊರಡಿಸಲಾಗಿದೆ.

‘ಹಿಂದು ಹುಡುಗಿಯರ ತಂಟೆಗೆ ಬರುವವರನ್ನು ಸುಮ್ಮನೆ ಬಿಡೋದಿಲ್ಲ’-ಗುಜರಾತ್​ ಸಿಎಂ ಎಚ್ಚರಿಕೆ
ವಿಜಯ್​ ರೂಪಾನಿ
TV9 Web
| Edited By: |

Updated on: Sep 11, 2021 | 10:44 AM

Share

ಅಹಮದಾಬಾದ್​: ಹಿಂದು ಹುಡುಗಿಯರ ತಂಟೆಗೆ ಬರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ( Gujarat Chief Minister Vijay Rupani)ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್​​ನ ವೈಷ್ಣೋದೇವಿ ವೃತ್ತದ ಬಳಿ, ಮಾಲಧಾರಿ ಸಮುದಾಯ (ಜಾನುವಾರು ಸಾಕಾಣಿಕೆಯನ್ನು ವೃತ್ತಿಯಾಗಿಸಿಕೊಂಡ ಸಮುದಾಯ) ಉದ್ದೇಶಿಸಿ ಮಾತನಾಡಿದ ಅವರು, ‘ಹಿಂದು ಹುಡುಗಿಯರನ್ನು ಮರಳು ಮಾಡಿ, ಅವರನ್ನು ಕರೆದುಕೊಂಡು ಪರಾರಿ ಆಗುವ ಯಾರನ್ನೂ ಬಿಡುವುದಿಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ಗೋಹತ್ಯೆ (Cow Slaughter) ಮಾಡುವವರ ವಿರುದ್ಧವೂ ಕ್ರಮ ನಿಶ್ಚಿತ ಎಂದಿದ್ದಾರೆ.  

ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಠಿಣ ನಿಬಂಧನೆಗಳೊಂದಿಗೆ ಹಲವು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಿದೆ. ಗೋವು ವಧೆಯನ್ನು ತಡೆಯುವುದರಿಂದ ಹಿಡಿದು, ಸರಗಳ್ಳತನ ನಿಯಂತ್ರಣದವರೆಗೆ ಹಲವು ಕಾನೂನು ಅನುಷ್ಠಾನಕ್ಕೆ ಬಂದಿದೆ.  ಹಾಗೇ, ಲವ್​ ಜಿಹಾದ್​ ವಿರುದ್ಧ ಕಠಿಣ ನಿಯಮ ತಂದಿದೆ. ಅದರ ಅನ್ವಯ, ಹಿಂದು ಹುಡುಗಿಯರಿಗೆ ಬಲೆ ಬೀಸಿ, ಅವರನ್ನು ಕರೆದುಕೊಂಡು ಹೋಗುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.

ಗುಜರಾತ್​ನಲ್ಲಿ ಧಾರ್ಮಿಕ ಸ್ವಾತಂತ್ರ್ಯದ ತಿದ್ದುಪಡಿ ಕಾಯ್ದೆ 2021ನ್ನು ಏಪ್ರಿಲ್​ ತಿಂಗಳಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಹಾಗೇ, ಜೂನ್​ 15ರಂದು ಅಧಿಸೂಚನೆ ಹೊರಡಿಸಲಾಗಿದೆ. ಅದರ ಅನ್ವಯ ಮದುವೆ ಅಥವಾ ಇನ್ಯಾವುದೇ ವಿಧಾನದ ಮೂಲಕ ಬಲವಂತದ ಮತಾಂತರ ಕ್ರಿಯೆ ನಡೆಸಿದರೆ, ಕಠಿಣ ಶಿಕ್ಷೆಯಿದೆ.  ಆದರೆ ಈ ಕಾನೂನಿನಲ್ಲಿರುವ ಕೆಲವು ವಿವಾದಾತ್ಮಕ ಅಂಶಗಳಿಗೆ ಕಳೆದ ತಿಂಗಳು ಗುಜರಾತ್ ಹೈಕೋರ್ಟ್ ತಡೆ ನೀಡಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಅಭಿಮಾನಿಯಿಂದ ರೂಲ್ಸ್ ಬ್ರೇಕ್!

Sai Dharam Tej: ಪ್ರಜ್ಞಾಹೀನ ಸ್ಥಿತಿಯಲ್ಲಿ ನಟ ಸಾಯಿ ಧರಮ್​ ತೇಜ್​; ಆದರೆ ಆಪ್ತರು ಹೇಳೋದೇ ಬೇರೆ

(Gujarat Cm Vijay Rupani Warning Against trapping Hindu Girls)