AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು: ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ

ಶ್ರೀರಾಮ ಎಲ್ಲರ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್​ ನಾಯಕ ಅರ್ಜುನ್ ಮೊದ್ವಾಡಿಯಾ ಹೇಳಿದ್ದಾರೆ. ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದ ಹಲವು ಕಾಂಗ್ರೆಸ್​ ನಾಯಕರು ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಈ ಹೇಳಿಕೆ ನೀಡಿದ್ದಾರೆ.

ಶ್ರೀರಾಮ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು: ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ
ಅರ್ಜುನ್ ಮೊಧ್ವಾಡಿಯಾ
ನಯನಾ ರಾಜೀವ್
|

Updated on: Jan 11, 2024 | 9:30 AM

Share

ಶ್ರೀರಾಮ ಎಲ್ಲರ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ(Arjun Modhwadia) ಹೇಳಿದ್ದಾರೆ. ಶ್ರೀರಾಮ ಮಂದಿರ(Ram Mandir)ದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದ ಹಲವು ಕಾಂಗ್ರೆಸ್​ ನಾಯಕರು ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಈ ಹೇಳಿಕೆ ನೀಡಿದ್ದಾರೆ.

ರಾಮಮಂದಿರದ ಬಗ್ಗೆ ಕಾಂಗ್ರೆಸ್ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಅರ್ಜುನ್ ಮೊಧ್ವಾಡಿಯಾ ಅವರು ಗುಜರಾತ್‌ನಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಪೋರಬಂದರ್‌ನ ಶಾಸಕರೂ ಆಗಿದ್ದಾರೆ.

ಕಾಂಗ್ರೆಸ್ ನೀಡಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಇಂತಹ ರಾಜಕೀಯ ನಿರ್ಧಾರಗಳಿಂದ ದೂರವಿರಿ ಎಂದು ಕಾಂಗ್ರೆಸ್‌ಗೆ ಸಲಹೆ ನೀಡಿದ್ದಾರೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಳ್ಳುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್‌ನ ಈ ನಿರ್ಧಾರದಿಂದ ಬಿಜೆಪಿ ದಾಳಿ ನಡೆಸುತ್ತಿದೆ. ಇದಾದ ಬಳಿಕ ಕಾಂಗ್ರೆಸ್ ನಾಯಕರೂ ಪಕ್ಷದ ಈ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸುತ್ತಿದ್ದಾರೆ. ಕೋಟ್ಯಂತರ ಭಾರತೀಯರು ರಾಮನನ್ನು ಪೂಜಿಸುತ್ತಾರೆ, ಧರ್ಮವು ಮನುಷ್ಯನ ವೈಯಕ್ತಿಕ ವಿಷಯವಾಗಿದೆ, ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಮಮಂದಿರವನ್ನು ವರ್ಷಗಳಿಂದ ರಾಜಕೀಯ ವಿಷಯವನ್ನಾಗಿ ಮಾಡಿದೆ.

ಅರ್ಧದಷ್ಟು ನಿರ್ಮಾಣವಾಗಿರುವ ಮಂದಿರವನ್ನು ಉದ್ಘಾಟನೆ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಕೇವಲ ಚುನಾವಣಾ ಲಾಭ ಪಡೆಯಲು ರಾಮಮಂದಿರ ಕಾರ್ಯಕ್ರಮ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಾರ್ಯಕ್ರಮ ಎಂದು ಈ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ ವಾದಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​