AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ: ಸಿಎಂ ಭೂಪೇಂದ್ರ ಪಟೇಲ್ ಸುಳಿವು

ಪ್ರೇಮ ವಿವಾಹವಾಗಬೇಕಾದರೆ ಮನೆಯವರು ಒಪ್ಪಿಗೆ ಕಡ್ಡಾಯವಾಗಿ ಬೇಕು ಎಂದು ಗುಜರಾತ್​​ ಸರ್ಕಾರ ಹೊಸ ಆದೇಶ ನೀಡುವ ಸಾಧ್ಯತೆ ಇದೆ.

ಗುಜರಾತ್​​: ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ: ಸಿಎಂ ಭೂಪೇಂದ್ರ ಪಟೇಲ್ ಸುಳಿವು
ಗುಜರಾತ್​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್
ಅಕ್ಷಯ್​ ಪಲ್ಲಮಜಲು​​
|

Updated on:Aug 01, 2023 | 11:24 AM

Share

ಗಾಂಧಿನಗರ: ಇನ್ನು ಮುಂದೆ ಪ್ರೇಮ ವಿವಾಹವಾಗಬೇಕಾದರೆ ಮನೆಯವರು ಒಪ್ಪಿಗೆ ಕಡ್ಡಾಯವಾಗಿ ಬೇಕು ಎಂಬ ಕಾನೂನನ್ನು  ಗುಜರಾತ್​​ ಸರ್ಕಾರ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಗುಜರಾತ್​​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೆಹ್ಸಾನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸರ್ದಾರ್ ಪಟೇಲ್ ಸಮುದಾಯವನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆಯ ಬೇಡಿಕೆಯನ್ನು ಪಾಟಿದಾರ್ ಸಮುದಾಯದ ಕೆಲವು ವರ್ಗಗಳು ಮಾಡುತ್ತಿವೆ. ಈ ಬಗ್ಗೆ ಖಂಡಿತ ತಕ್ಷಣದಲ್ಲೇ ಕ್ರಮಕೈಗೊಳ್ಳುತ್ತೇವೆ ಎಂದು ಹೇಳುವ ಮೂಲಕ ಪ್ರೇಮ ವಿವಾಹಕ್ಕೆ ಮನೆಯವರ ಒಪ್ಪಿಗೆ ಬೇಕು ಎಂಬ ಚರ್ಚೆಗೆ ಸಿಎಂ ತೆರೆ ಎಳೆದಂತಾಗಿದೆ.

ಡಿಜಿಟಲ್​​ ವರದಿ ಪ್ರಕಾರ ಪ್ರೇಮ ವಿವಾಹ ಮಾಡಿಕೊಳ್ಳಲು ಮನೆಬಿಟ್ಟು ಓಡಿ ಹೋಗಿರುವ ಘಟನೆಗಳ ಬಗ್ಗೆ ಮಾಹಿತಿ ಪಡೆಯುವ ಬಗ್ಗೆ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರಿಗೆ ಹೇಳಿದ್ದಾನೆ. ಪ್ರೇಮ ವಿವಾಹಕ್ಕೆ ಪೋಷಕರ ಅನುಮೋದನೆಯನ್ನು ಕಡ್ಡಾಯಗೊಳಿಸಲು ರಚಿಸಬೇಕಾದ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮವನ್ನು ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಂವಿಧಾನಿಕ ಅನುಮೋದನೆ ಸಿಕ್ಕರೆ ಖಂಡಿತ ಮುಂದಿನ ಹಂತ ಕಾರ್ಯಯೋಜನೆಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಈ ನಿರ್ಧಾರಕ್ಕೆ ಪ್ರತಿಪಕ್ಷ ಕಾಂಗ್ರೆಸ್​ ಕೂಡ ಮೇಲ್ನೋಟಕ್ಕೆ ಒಲುವು ತೋರಿಸಿದೆ ಎಂದು ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್​ಐ ವರದಿ ಪ್ರಕಾರ ಪ್ರೇಮ ವಿವಾಹಕ್ಕೆ ಜೋಡಿಗಳು ಪೋಷಕರನ್ನು ನಿರ್ಲಕ್ಷಿಸುತ್ತಿರುವ ಕಾರಣ ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ಗಾಂಧಿನಗರದಿಂದ ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಿದೇಶಾಂಗ ಸಚಿವ ಎಸ್​ ಜೈಶಂಕರ್

ಇನ್ನು ಭಾರತದ ಕಾನೂನಿ ಪ್ರಕಾರ, ಪುರುಷರು 21 ವರ್ಷ ವಯಸ್ಸಿನಲ್ಲಿ ಮತ್ತು ಮಹಿಳೆಯರು 18 ವರ್ಷ ವಯಸ್ಸಿನಲ್ಲಿ ಮದುವೆಯಾಗಬಹುದು ಎಂದು ಹೇಳಿದೆ. ಹೀಗಾಗಿ ಪ್ರೇಮ ವಿವಾಹಗಳು ಹೆಚ್ಚಾಗಿದೆ ಎಂದು ಜನರು ವಾದಿಸುತ್ತಿದ್ದಾರೆ. ಮನೆಯವರು ಪ್ರೇಮ ವಿವಾಹಕ್ಕೆ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಓಡಿ ಹೋಗಿ ಪ್ರೇಮ ವಿವಾಹವಾಗುತ್ತಿದ್ದಾರೆ. ಅದಕ್ಕಾಗಿ ಎರಡು ಮನೆಯವರು (ಹುಡುಗ-ಹುಡುಗಿ) ಒಪ್ಪಿಗೆ ನೀಡಿ. ಮನೆಯವರ ಒಪ್ಪಿಗೆ ಪ್ರಕಾರ ಮದುವೆಯಾಗುವುದು ಒಳ್ಳೆಯದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Tue, 1 August 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್