ಈರುಳ್ಳಿ-ಬೆಳ್ಳುಳ್ಳಿ ವಿವಾದದಲ್ಲಿ ಕೊನೆಗೊಂಡ 11 ವರ್ಷದ ದಾಂಪತ್ಯ ಜೀವನ

ಗುಜರಾತ್‌ನ ಅಹಮದಾಬಾದ್​ನಲ್ಲಿ ವಿಚಿತ್ರ ವಿಚ್ಛೇದನ ಪ್ರಕರಣವೊಂದು ಬೆಳಕಿಗೆ ಬಂದಿದೆ, ವಿಚ್ಛೇದನಗಳು ಸಾಮಾನ್ಯವಾಗಿ ದೈಹಿಕ ಹಿಂಸೆ, ವಿವಾಹೇತರ ಸಂಬಂಧಗಳು ಅಥವಾ ಕೌಟುಂಬಿಕ ಕಲಹಗಳಿಂದ ಉಂಟಾಗುತ್ತವೆ. ಆದರೆ, ಅಹಮದಾಬಾದ್‌ನ ದಂಪತಿಗಳು ಈರುಳ್ಳಿ ಮತ್ತು ಬೆಳ್ಳುಳ್ಳಿಯಿಂದಾಗಿ ವಿಚ್ಛೇದನ ಪಡೆದಿದ್ದಾರೆ.ಪತ್ನಿ ಕೂಡಲೇ ಮಗುವಿನೊಂದಿಗೆ ಮನೆಬಿಟ್ಟು ಹೊರಟು ಹೋಗಿದ್ದಳು, ಪತಿ ಬಳಿಕ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವು ಗುಜರಾತ್ ಹೈಕೋರ್ಟ್‌ ಮಟ್ಟಿಲೇರಿತ್ತು. ಅಲ್ಲಿ ನ್ಯಾಯಾಲಯವು ವಿಚ್ಛೇದನವನ್ನು ಪ್ರಶ್ನಿಸಿ ಪತ್ನಿಯ ಮೇಲ್ಮನವಿಯನ್ನು ವಜಾಗೊಳಿಸಿತು.

ಈರುಳ್ಳಿ-ಬೆಳ್ಳುಳ್ಳಿ ವಿವಾದದಲ್ಲಿ ಕೊನೆಗೊಂಡ 11 ವರ್ಷದ ದಾಂಪತ್ಯ ಜೀವನ
ಈರುಳ್ಳಿ, ಬೆಳ್ಳುಳ್ಳಿ

Updated on: Dec 10, 2025 | 1:00 PM

ಅಹಮದಾಬಾದ್, ಡಿಸೆಂಬರ್ 10: ಊಟದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸುವ ಬಗ್ಗೆ ದಂಪತಿ ನಡುವೆ ಉಂಟಾದ ಜಗಳ ವಿಚ್ಛೇದನ(Divorce)ದೊಂದಿಗೆ ಅಂತ್ಯಗೊಂಡಿದೆ. ವಾದ ಎಷ್ಟು ತೀವ್ರವಾಗಿತ್ತೆಂದರೆ 11 ವರ್ಷದ ದಾಂಪತ್ಯ ಜೀವನವೇ ಕೊನೆಗೊಂಡಿದೆ. ಈ ವಿಚಿತ್ರ ಘಟನೆ ಅಹಮದಾಬಾದಿನಲ್ಲಿ ನಡೆದಿದೆ. ಪತ್ನಿ ಕೂಡಲೇ ಮಗುವಿನೊಂದಿಗೆ ಮನೆಬಿಟ್ಟು ಹೊರಟು ಹೋಗಿದ್ದಳು, ಪತಿ ಬಳಿಕ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣವು ಗುಜರಾತ್ ಹೈಕೋರ್ಟ್‌ ಮಟ್ಟಿಲೇರಿತ್ತು. ಅಲ್ಲಿ ನ್ಯಾಯಾಲಯವು ವಿಚ್ಛೇದನವನ್ನು ಪ್ರಶ್ನಿಸಿ ಪತ್ನಿಯ ಮೇಲ್ಮನವಿಯನ್ನು ವಜಾಗೊಳಿಸಿತು. ಈ ಜೋಡಿ 2002ರಲ್ಲಿ ವಿವಾಹವಾಗಿದ್ದರು. ಪತ್ನಿ ಸ್ವಾಮಿನಾರಾಯಣ ಪಂಥದ ಅನುಯಾಯಿಯಾಗಿದ್ದಳು.

ಹಾಗಾಗಿ ಊಟದಲ್ಲಿ ಈರುಳ್ಳಿ, ಬೆಳ್ಳುಳ್ಳಿ ತಿನ್ನಲು ಬಿಡುತ್ತಿರಲಿಲ್ಲ. ಆದರೆ ಪತಿ ಹಾಗೂ ಅತ್ತೆಗೆ ಇದು ಇಷ್ಟವಾಗಲಿಲ್ಲ. ಕೊನೆಗೆ ಆಹಾರದ ಆಯ್ಕೆ ದಾಂಪತ್ಯಕ್ಕೆ ವಿಪತ್ತಾಗಿ ಪರಿಣಮಿಸಿತು. ಜಗಳ ಹೆಚ್ಚಾಗಿ, ಸಂಬಂಧ ಹದಗೆಟ್ಟಿತ್ತು. ಸ್ವಾಮಿನಾರಾಯಣ ಪಂಥದ ನಿಯಮಗಳನ್ನು ಪಾಲಿಸುತ್ತಿದ್ದ ಪತ್ನಿ ನಿಯಮಿತವಾಗಿ ದೇವಸ್ಥಾನಗಳಲ್ಲಿ ಪ್ರಾರ್ಥನೆಗಳು ಮತ್ತು ಧಾರ್ಮಿಕ ಆಚರಣೆಗಳಿಗೆ ಹಾಜರಾಗುತ್ತಿದ್ದರು.

ಆಕೆಯ ಪತಿ ಮತ್ತು ಅತ್ತೆ ತಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಲು ಇಷ್ಟವಿರಲಿಲ್ಲ, ಪರಿಣಾಮವಾಗಿ ಮನೆಯಲ್ಲಿ ಪ್ರತ್ಯೇಕ ಅಡುಗೆ ವ್ಯವಸ್ಥೆ ಮಾಡಲಾಗಿತ್ತು. 2013 ರಲ್ಲಿ, ಪತಿ ಅಹಮದಾಬಾದ್ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದರು, ಆಹಾರದ ವಿಷಯದಲ್ಲಿ ತನ್ನ ಹೆಂಡತಿ ತನ್ನ ಬಳಿ ಕ್ರೂರವಾಗಿ ವರ್ತಿಸಿ ನಂತರ ತನ್ನನ್ನು ಬಿಟ್ಟುಹೋಗಿದ್ದಾಳೆ ಎಂದು ಆರೋಪಿಸಿದ್ದರು.

ಮತ್ತಷ್ಟು ಓದಿ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಪತಿ! ಅಮೇಲೇನಾಯ್ತು?

2024 ರಲ್ಲಿ, ಕೌಟುಂಬಿಕ ನ್ಯಾಯಾಲಯವು ಅವರಿಗೆ ವಿಚ್ಛೇದನವನ್ನು ನೀಡಿ, ಪತ್ನಿಗೆ ಜೀವನಾಂಶ ನೀಡುವಂತೆ ಆದೇಶಿಸಿತು. ದಂಪತಿ ಹೈಕೋರ್ಟ್ ಮೆಟ್ಟಿಲೇರಿದರು.

ಪತ್ನಿಯ ಧಾರ್ಮಿಕ ನಂಬಿಕೆಗಳಿಂದಾಗಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ತಪ್ಪಿಸುವ ಅಭ್ಯಾಸವು ಜಗಳಗಳಿಗೆ ಕಾರಣವಾಗುತ್ತಿದೆ ಎಂದು ಪತಿ ಕುಟುಂಬ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದು, ಆಕೆ ಬದಲಾಗಲು ಸಿದ್ಧಳಿಲ್ಲ ಎಂದು ಮಹಿಳೆ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದರು.ಈ ಕಾನೂನು ಪ್ರಕ್ರಿಯೆಯು ಸುಮಾರು 12 ವರ್ಷಗಳ ಕಾಲ ನಡೆಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us