AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2017ರ ಆಜಾದಿ ಮಾರ್ಚ್​ ಕೇಸ್​: ಗುಜರಾತ್​ ಶಾಸಕ ಜಿಗ್ನೇಶ್​ ಮೇವಾನಿಗೆ ಮೂರು ತಿಂಗಳು ಜೈಲು, 1000 ರೂ. ದಂಡ

ಜಿಗ್ನೇಶ್ ಮೇವಾನಿ ಕಳೆದ ಹಲವು ದಿನಗಳಿಂದಲೂ ಜೈಲಿನಲ್ಲಿಯೇ ಇದ್ದರು. ಮೊದಲು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನ ಮಾಡಿದ್ದಕ್ಕೆ ಅಸ್ಸಾಂ ಪೊಲೀಸರಿಂದ ಅರೆಸ್ಟ್ ಆಗಿದ್ದ ಅವರಿಗೆ ಜಾಮೀನು ಸಿಕ್ಕಿತ್ತು.

2017ರ ಆಜಾದಿ ಮಾರ್ಚ್​ ಕೇಸ್​: ಗುಜರಾತ್​ ಶಾಸಕ ಜಿಗ್ನೇಶ್​ ಮೇವಾನಿಗೆ ಮೂರು ತಿಂಗಳು ಜೈಲು, 1000 ರೂ. ದಂಡ
ಜಿಗ್ನೇಶ್ ಮೇವಾನಿ
TV9 Web
| Updated By: Lakshmi Hegde|

Updated on:May 05, 2022 | 3:46 PM

Share

2017ರಲ್ಲಿ ನಡೆಸಿದ್ದ ಆಜಾದಿ ಮಾರ್ಚ್​ (ಆಜಾದಿ ಮೆರವಣಿಗೆ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯವರಿಗೆ ಗುಜರಾತ್​ ನ್ಯಾಯಾಲಯವೊಂದು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕೇವಲ ಮೇವಾನಿಗೆ ಮಾತ್ರವಲ್ಲ, ಅವರೊಂದಿಗೆ ಇನ್ನೂ 9 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. 2016ರಲ್ಲಿ ಗುಜರಾತ್​​ನ ಉನಾದಲ್ಲಿ ದಲಿತ  ಕುಟುಂಬದ ಏಳುಮಂದಿಯನ್ನು ಅಲ್ಲಿನ ಗೋರಕ್ಷಕರ ಗುಂಪೊಂದು ಥಳಿಸಿತ್ತು. ಇವರೆಲ್ಲ ಹಸುಗಳನ್ನು ಕಳ್ಳತನ ಮಾಡಿ, ಅದರ ಚರ್ಮವನ್ನು ಸುಲಿಯುವ ಕೆಲಸದವರು ಎಂಬ ಆರೋಪ ಮಾಡಿ ಥಳಿಸಲಾಗಿತ್ತು.  ಅಷ್ಟೇ ಅಲ್ಲ, ನಾಲ್ವರು ದಲಿತ ಪುರುಷರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿತ್ತು. ನಾವು ದಾಳಿ ಮಾಡಿದಾಗ ಇವರೆಲ್ಲರೂ ಹಸುವಿನ ಚರ್ಮ ಸುಲಿಯುತ್ತಿದ್ದರು ಎಂಬುದನ್ನೇ ದೂರಿನಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ದಲಿತ ಕುಟುಂಬದವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಅದನ್ನು ಬಲವಾಗಿ ವಿರೋಧಿಸಿದ್ದ ಜಿಗ್ನೇಶ್ ಮೇವಾನಿ ದಲಿತರಿಗೆ ಥಳಿಸಿದವರ ವಿರುದ್ಧ ಪ್ರತಿಭಟನೆಗೆ ಕರೆಕೊಟ್ಟಿದ್ದರು.  ಹಾಗೇ ಉನಾ ಥಳಿತ ಪ್ರಕರಣಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ 2017ರ ಜುಲೈನಲ್ಲಿ  ಮೆಹಸಾನಾದಿಂದ ಬನಸ್ಕಾಂತಾಕ್ಕೆ  ಆಜಾದಿ ಮೆರವಣಿಗೆ ನಡೆಸಿದ್ದರು. ಆದರೆ ಈ ಮಾರ್ಚ್​ಗಾಗಿ ಅವರು ಯಾವುದೇ ಅನುಮತಿಯನ್ನೂ ಪಡೆದಿರಲಿಲ್ಲ.  ಈ ಬಗ್ಗೆ ಕೇಸ್ ದಾಖಲಾಗಿ ಕೋರ್ಟ್​​ನಲ್ಲಿ ವಿಚಾರಣೆ ನಡೆಯುತ್ತಿತ್ತು.

ಜಿಗ್ನೇಶ್ ಮೇವಾನಿ ಕಳೆದ ಹಲವು ದಿನಗಳಿಂದಲೂ ಜೈಲಿನಲ್ಲಿಯೇ ಇದ್ದರು. ಮೊದಲು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಟ್ವಿಟರ್​ನಲ್ಲಿ ಅವಹೇಳನ ಮಾಡಿದ್ದಕ್ಕೆ ಅಸ್ಸಾಂ ಪೊಲೀಸರಿಂದ ಅರೆಸ್ಟ್ ಆಗಿದ್ದ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಸಿಕ್ಕಿ ಹೊರಬರುತ್ತಿದ್ದಂತೆ, ಮಹಿಳಾ ಪೊಲೀಸ್​ ಅಧಿಕಾರಿ ಮೇಲೆ ಹಲ್ಲೆ ಯತ್ನ ಮಾಡಿದ್ದ ಆರೋಪದಡಿ ಮತ್ತೆ ಅಸ್ಸಾಂನಲ್ಲಿಯೇ ಜೈಲು ಸೇರಿದ್ದರು. ಈ ಪ್ರಕರಣದಲ್ಲಿ ಮೇ 1ರಂದು ಜಾಮೀನು ಸಿಕ್ಕಿತ್ತು.

ಅಸ್ಸಾಂನಿಂದ ಗುಜರಾತ್​​ಗೆ ಬಂದಿದ್ದ ಜಿಗ್ನೇಶ್​ ಮೇವಾನಿ ಮತ್ತೆ ಉನಾ ಪ್ರಕರಣದ ಬಗ್ಗೆ ಮಾತನಾಡಿದ್ದರು. 2016ರಲ್ಲಿ ದಲಿತರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ವಿರುದ್ಧವೇ ದಾಖಲಾದ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯದೆ ಇದ್ದಲ್ಲಿ ಜೂನ್​ 1ರಂದು ಗುಜರಾತ್ ಬಂದ್​ ನಡೆಸುವ ಎಚ್ಚರಿಕೆ ನೀಡಿದ್ದರು.  ಅಷ್ಟೇ ಅಲ್ಲ, ಮುಂದ್ರಾ ಬಂದರಿನಲ್ಲಿ ಭಾರಿ ಪ್ರಮಾಣದಲ್ಲಿ ಡ್ರಗ್ಸ್ ವಶಪಡಿಸಿಕೊಂಡಿದ್ದರ ಮತ್ತು 2022ರ  ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಗಳ ಬಗ್ಗೆ ತನಿಖೆ ನಡೆಸದೆ ಇದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದೂ ಹೇಳಿದ್ದರು.

ಇದನ್ನೂ ಓದಿ: Mandira Bedi: ಗಂಡ ಸತ್ತು ವರ್ಷ ಕಳೆದಿಲ್ಲ, ಬೇರೆ ಪುರುಷನ ಜತೆ ಹಿಂಗೆಲ್ಲ ಪೋಸ್​ ನೀಡಿದ್ದಕ್ಕೆ ಮಂದಿರಾ ಬೇಡಿ ಸಖತ್​ ಟ್ರೋಲ್​

Published On - 3:29 pm, Thu, 5 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ