AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್ ಅಧಿಕಾರಿಯ ಕೊಲೆ ಮಾಡಿ ಅವರ ಠಾಣೆಯಲ್ಲೇ ಶರಣಾದ ಸಿಆರ್​ಪಿಎಫ್ ಜವಾನ

ಕೆಲವೊಮ್ಮೆ ನಂಬಿದವರೇ ಕುತ್ತಿಗೆ ಕೊಯ್ಯುವ ಕೆಲಸ ಮಾಡುತ್ತಾರೆ. ಮಹಿಳಾ ಎಎಸ್​ಐ ಹಾಗೂ ಸಿಆರ್​ಪಿಎಫ್​ ಯೋಧರಿಬ್ಬರೂ ಲಿವಿಂಗ್ ಸಂಬಂಧದಲ್ಲಿದ್ದರು. ಯಾವುದೋ ಕಾರಣಕ್ಕೆ ಕೋಪಗೊಂಡು ಯೋಧ ಮಹಿಳಾ  ಪೊಲೀಸ್(Police) ಅಧಿಕಾರಿಯನ್ನು ಕೊಲೆ ಮಾಡಿ ಕೊನೆಗೆ ಅವರು ನಿಯೋಜನೆಗೊಂಡಿದ್ದ ಪೊಲೀಸ್​ ಠಾಣೆಯಲ್ಲೇ ಶರಣಾಗಿರುವ ಘಟನೆ ಗುಜರಾತ್​ನ ಕಚ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಎಲ್ಲೆಡೆ ಸಂಚಲನ ಮೂಡಿಸಿದೆ.

ಮಹಿಳಾ ಪೊಲೀಸ್ ಅಧಿಕಾರಿಯ ಕೊಲೆ ಮಾಡಿ ಅವರ ಠಾಣೆಯಲ್ಲೇ ಶರಣಾದ ಸಿಆರ್​ಪಿಎಫ್ ಜವಾನ
ಅರುಣಾ
ನಯನಾ ರಾಜೀವ್
|

Updated on:Jul 20, 2025 | 12:21 PM

Share

ಕಚ್, ಜುಲೈ 20: ಕೆಲವೊಮ್ಮೆ ನಂಬಿದವರೇ ಕುತ್ತಿಗೆ ಕೊಯ್ಯುವ ಕೆಲಸ ಮಾಡುತ್ತಾರೆ. ಮಹಿಳಾ ಎಎಸ್​ಐ ಹಾಗೂ ಸಿಆರ್​ಪಿಎಫ್​ ಯೋಧ ಈ ಇಬ್ಬರೂ ಲಿವಿಂಗ್ ಸಂಬಂಧದಲ್ಲಿದ್ದರು. ಯಾವುದೋ ಕಾರಣಕ್ಕೆ ಕೋಪಗೊಂಡು ಯೋಧ ಮಹಿಳಾ  ಪೊಲೀಸ್(Police) ಅಧಿಕಾರಿಯನ್ನು ಕೊಲೆ ಮಾಡಿ ಕೊನೆಗೆ ಅವರು ನಿಯೋಜನೆಗೊಂಡಿದ್ದ ಪೊಲೀಸ್​ ಠಾಣೆಯಲ್ಲೇ ಶರಣಾಗಿರುವ ಘಟನೆ ಗುಜರಾತ್​ನ ಕಚ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಎಲ್ಲೆಡೆ ಸಂಚಲನ ಮೂಡಿಸಿದೆ. ಆತ ಠಾಣೆಗೆ ಶರಣಾಗುವ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂಜಾರ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ನಿಯೋಜಿತರಾಗಿದ್ದ ಅರುಣಾ ನಟು ಜಾದವ್ ಅವರನ್ನು ಅವರ ಲಿವ್-ಇನ್ ಸಂಗಾತಿ ಮತ್ತು ಸಿಆರ್‌ಪಿಎಫ್ ಜವಾನ ದಿಲೀಪ್ ದಂಗಾಚಿಯಾ ಕೊಲೆ ಮಾಡಿದ್ದಾರೆ. ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಈ ಘಟನೆ ಶುಕ್ರವಾರ (ಜುಲೈ 18) ರಾತ್ರಿ ನಡೆದಿದೆ. ತೂಹಲಕಾರಿ ವಿಷಯವೆಂದರೆ ಆರೋಪಿ ಸ್ವತಃ ಮಹಿಳಾ ಅಧಿಕಾರಿಯನ್ನು ನಿಯೋಜಿತಗೊಳಿಸಲಾಗಿದ್ದ ಅದೇ ಪೊಲೀಸ್ ಠಾಣೆಗೆ ಬಂದು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಘಟನೆ ನಡೆದ ರಾತ್ರಿ ಏನಾಯಿತು? ಈ ಘಟನೆ ಶುಕ್ರವಾರ (ಜುಲೈ 18) ರಾತ್ರಿ ಅಂಜಾರ್‌ನಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ರಾತ್ರಿ 10 ಗಂಟೆ ಸುಮಾರಿಗೆ ಅರುಣಾ ಮತ್ತು ದಿಲೀಪ್ ನಡುವೆ ಯಾವುದೋ ವಿಷಯಕ್ಕೆ ಜಗಳವಾಯಿತು. ಈ ಜಗಳ ಎಷ್ಟು ಉಲ್ಬಣಗೊಂಡಿತೆಂದರೆ, ದಿಲೀಪ್ ಕೋಪದಿಂದ ಅರುಣಾಳನ್ನು ಕತ್ತು ಹಿಸುಕಿ ಸ್ಥಳದಲ್ಲೇ ಕೊಂದಿದ್ದಾನೆ.

ಇನ್‌ಸ್ಟಾಗ್ರಾಮ್‌ನಿಂದ ಆರಂಭವಾದ ಸಂಬಂಧ ಕೊಲೆಯಲ್ಲಿ ಕೊನೆಗೊಂಡಿತು ಅರುಣಾ ಮತ್ತು ದಿಲೀಪ್ 2021 ರಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಭೇಟಿಯಾದರು ಎಂದು ಅಂಜರ್ ವಿಭಾಗದ ಉಪ ಎಸ್‌ಪಿ ಮುಖೇಶ್ ಚೌಧರಿ ಹೇಳಿದ್ದಾರೆ. ಇಬ್ಬರೂ ಸ್ವಲ್ಪ ಸಮಯದಿಂದ ಒಟ್ಟಿಗೆ ವಾಸಿಸುತ್ತಿದ್ದರು. ಶನಿವಾರ (ಜುಲೈ 19) ಬೆಳಗ್ಗೆ ಆರೋಪಿ ದಿಲೀಪ್ ಸ್ವತಃ ಅಂಜರ್ ಪೊಲೀಸ್ ಠಾಣೆಗೆ ಬಂದು ಶರಣಾದ ಬಳಿಕಘಟನೆ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ; ವಿಡಿಯೋ ನೋಡಿ

ದಿಲೀಪ್ ದಂಗಾಚಿಯಾ ಶರಣಾದ ನಂತರ, ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಆರಂಭಿಕ ತನಿಖೆಯಲ್ಲಿ, ಕೌಟುಂಬಿಕ ವಿವಾದವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಅದೇ ಸಮಯದಲ್ಲಿ, ಮಹಿಳಾ ಅಧಿಕಾರಿಯ ಸಾವಿನಿಂದ ಪೊಲೀಸ್ ಇಲಾಖೆಯಲ್ಲಿ ಶೋಕದ ಅಲೆ ಆವರಿಸಿದೆ.

ಅರುಣಾ ಜಾದವ್ ಅವರನ್ನು ಅಂಜರ್ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ನೇಮಿಸಲಾಗಿತ್ತು.ಆರೋಪಿ ದಿಲೀಪ್ ದಂಗಾಚಿಯಾ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಆಗಿದ್ದು, ಅರುಣಾ ಅವರ ಲಿವ್-ಇನ್ ಸಂಗಾತಿಯಾಗಿದ್ದ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಜಗಳ ಮತ್ತು ಜಗಳದ ನಂತರ ದಿಲೀಪ್ ಅರುಣಾ ಅವರನ್ನು ಕತ್ತು ಹಿಸುಕಿ ಕೊಂದು ಶರಣಾಗಿದ್ದಾರೆ. ಈಗ ಪೊಲೀಸರು ಪ್ರಕರಣದಲ್ಲಿ ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Sun, 20 July 25

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು