AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗುಜರಾತ್​ನಲ್ಲಿ ಕೇವಲ 16 ಗಂಟೆಗಳಲ್ಲಿ 1100 ಮಿ.ಮೀ ಮಳೆ, ಗೊಂಬೆಗಳಂತೆ ನೀರಿನಲ್ಲಿ ತೇಲಿದ ಕಾರುಗಳು

ದಕ್ಷಿಣ ಗುಜರಾತ್‌ನಲ್ಲಿ ವರುಣನ ಭೀಕರ ಆರ್ಭಟ ಮುಂದುವರೆದಿದ್ದು, ಜಲಪ್ರಳಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ವಲ್ಸಾದ್ ಜಿಲ್ಲೆಯ ಉಂಬರ್‌ಗಮ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಭಾರಿ 1100 ಮಿ.ಮೀ ಮಳೆ(Rain) ಸುರಿದಿದ್ದು, ಇಡೀ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯ ಭೀಕರತೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.

Video: ಗುಜರಾತ್​ನಲ್ಲಿ ಕೇವಲ 16 ಗಂಟೆಗಳಲ್ಲಿ 1100 ಮಿ.ಮೀ ಮಳೆ, ಗೊಂಬೆಗಳಂತೆ ನೀರಿನಲ್ಲಿ ತೇಲಿದ ಕಾರುಗಳು
ಮಳೆ
ನಯನಾ ರಾಜೀವ್
|

Updated on: Jul 24, 2026 | 3:08 PM

Share

ವಲ್ಸಾದ್, ಜುಲೈ 24: ದಕ್ಷಿಣ ಗುಜರಾತ್‌ನಲ್ಲಿ ವರುಣನ  ಆರ್ಭಟ ಮುಂದುವರೆದಿದ್ದು, ಜಲಪ್ರಳಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ವಲ್ಸಾದ್ ಜಿಲ್ಲೆಯ ಉಂಬರ್‌ಗಮ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆಯವರೆಗೆ ಕೇವಲ 16 ಗಂಟೆಗಳಲ್ಲಿ ಭಾರಿ 1100 ಮಿ.ಮೀ ಮಳೆ(Rain) ಸುರಿದಿದ್ದು, ಇಡೀ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಮಳೆಯ ಭೀಕರತೆಗೆ ಸಂಬಂಧಿಸಿದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ.

ಪಾರ್ಕಿಂಗ್‌ನಲ್ಲಿದ್ದ ಕಾರುಗಳು ಮುಳುಗಡೆ ವಲ್ಸಾದ್ ಜಿಲ್ಲೆಯ ವಾಪಿ ಪ್ರದೇಶದ ಬಹುಮಹಡಿ ಕಟ್ಟಡ ಒಂದರ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕಾರುಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ, ಕಿಟಕಿಗಳ ಮಟ್ಟಕ್ಕೆ ನೀರು ತಲುಪಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಕಟ್ಟಡಗಳ ಸುತ್ತಮುತ್ತಲಿನ ಪ್ರದೇಶಗಳು ಕೆರೆಯಂತಾಗಿದ್ದು, ವಾಹನಗಳು ನೀರಿನಲ್ಲಿ ತೇಲುತ್ತಿರುವುದು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಔರಂಗ, ಪರ್ ಮತ್ತು ದಮನ್‌ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ವಲ್ಸಾದ್ ಹಾಗೂ ಸೂರತ್ ನಗರಗಳ ತಗ್ಗು ಪ್ರದೇಶಗಳಿಂದ 2,200 ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿವೆ. ಸಂತ್ರಸ್ತರಿಗಾಗಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, ಆಹಾರ, ಕುಡಿಯುವ ನೀರು ಹಾಗೂ ವೈದ್ಯಕೀಯ ನೆರವು ನೀಡಲಾಗುತ್ತಿದೆ.

ವಿಡಿಯೋ

5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಎಚ್ಚರಿಕೆ ದಕ್ಷಿಣ ಗುಜರಾತ್‌ನ ವಲ್ಸಾದ್, ನವಸಾರಿ, ಡಾಂಗ್ಸ್, ಸೂರತ್ ಮತ್ತು ತಾಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರಿ ಮಳೆಯ ‘ರೆಡ್ ಅಲರ್ಟ್’ ಘೋಷಿಸಿದೆ. ತುರ್ತು ಕೆಲಸಗಳಿದ್ದರೆ ಮಾತ್ರ ಹೊರಬರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ಪರಿಹಾರ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಸಚಿವರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us