AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat: 200 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ, ಗುಜರಾತ್​ನಲ್ಲಿ 6 ಪಾಕಿಸ್ತಾನಿ ಪ್ರಜೆಗಳ ಬಂಧನ

ಇಂದು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 200 ಕೋಟಿ ರೂ. ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ

Gujarat: 200 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ, ಗುಜರಾತ್​ನಲ್ಲಿ 6 ಪಾಕಿಸ್ತಾನಿ ಪ್ರಜೆಗಳ ಬಂಧನ
Drugs worth more than 200 crore seized, 6 Pakistani nationals arrested in Gujarat
TV9 Web
| Edited By: |

Updated on: Sep 14, 2022 | 4:16 PM

Share

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಭಾರತೀಯ ಕೋಸ್ಟ್ ಗಾರ್ಡ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 200 ಕೋಟಿ ರೂ. ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ ಎಂದು ಹಿರಿಯ ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೋಣಿಯಲ್ಲಿದ್ದ ಆರು ಪಾಕಿಸ್ತಾನಿಗಳನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ . ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್‌ನ ಜಂಟಿ ತಂಡವು ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ತಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆರಾಯಿನ್​ನ್ನು ಗುಜರಾತ್ ಕರಾವಳಿಯಲ್ಲಿ ಇಳಿಸಿ ನಂತರ ರಸ್ತೆ ದಾರಿಯ ಮೂಲಕ ಪಂಜಾಬ್‌ಗೆ ಸಾಗಿಸಲು ಪ್ಲಾನ್ ಹಾಕಿದ್ದರು ಎಂದು ಹೇಳಲಾಗಿದೆ. ನಿರ್ದಿಷ್ಟ ಸುಳಿವು ಆಧರಿಸಿ, ನಾವು ಪಾಕಿಸ್ತಾನದಿಂದ ಹೊರಟಿದ್ದ ದೋಣಿಯನ್ನು ತಡೆದು, 40 ಕೆಜಿ ಹೆರಾಯಿನ್‌ನೊಂದಿಗೆ ಆರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್ ಎಟಿಎಸ್ ಮತ್ತು ಕೋಸ್ಟ್ ಗಾರ್ಡ್ ಈ ಹಿಂದೆಯೂ ಮಾದಕವಸ್ತು ಕಳ್ಳಸಾಗಣೆಯ ತಡೆಯಳಾಗಿತ್ತು. ಗುಜರಾತ್ ಕರಾವಳಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲು ಯೋಜಿಸಿದ್ದ ಭಾರೀ ಪ್ರಮಾಣದ ಮಾದಕವಸ್ತುಗಳೊಂದಿಗೆ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ