AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬಾಲಕಿಯ ಕನಸ್ಸಿನಲ್ಲಿ ಶಿವಲಿಂಗ ಕಾಣಿಸಿಕೊಂಡಿದ್ದಕ್ಕೆ ದೇವಸ್ಥಾನದಿಂದ ಲಿಂಗ ಕದ್ದ ಕುಟುಂಬ

ಮಹಾಶಿವರಾತ್ರಿಯ ಸಂದರ್ಭದಲ್ಲಿ ಗುಜರಾತ್‌ನ ದ್ವಾರಕಾದ ದೇವಸ್ಥಾನದಿಂದ ಶಿವಲಿಂಗವನ್ನು ಕದ್ದು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ ಆರೋಪದ ಮೇಲೆ ಕುಟುಂಬದ ಎಂಟು ಸದಸ್ಯರನ್ನು ಬಂಧಿಸಲಾಗಿದೆ. ಬಾಲಕಿಯೊಬ್ಬಳಿಗೆ ಶಿವಲಿಂಗದ ಕನಸು ಬಿದ್ದ ನಂತರ ಕುಟುಂಬದವರು ದೇವಸ್ಥಾನಕ್ಕೆ ಹೋಗಿ ಶಿವಲಿಂಗ ಕದ್ದಿದ್ದರು..ದ್ವಾರಕಾದಲ್ಲಿರುವ ಪ್ರಾಚೀನ ಭೀದ್ಭಂಜನ್ ಮಹಾದೇವ್ ದೇವಾಲಯದಿಂದ ಶಿವಲಿಂಗವನ್ನು ಕದ್ದಿದ್ದರು.

ಗುಜರಾತ್: ಬಾಲಕಿಯ ಕನಸ್ಸಿನಲ್ಲಿ ಶಿವಲಿಂಗ ಕಾಣಿಸಿಕೊಂಡಿದ್ದಕ್ಕೆ ದೇವಸ್ಥಾನದಿಂದ ಲಿಂಗ ಕದ್ದ ಕುಟುಂಬ
ದೇವಸ್ಥಾನImage Credit source: India Today
ನಯನಾ ರಾಜೀವ್
|

Updated on:Mar 01, 2025 | 10:22 AM

Share

ಗುಜರಾತ್, ಮಾರ್ಚ್​ 1: ಮಹಾಶಿವರಾತ್ರಿಯ ಸಂದರ್ಭದಲ್ಲಿ ಗುಜರಾತ್‌ನ ದ್ವಾರಕಾದ ದೇವಸ್ಥಾನದಿಂದ ಶಿವಲಿಂಗವನ್ನು ಕದ್ದು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದ ಆರೋಪದ ಮೇಲೆ ಕುಟುಂಬದ ಎಂಟು ಸದಸ್ಯರನ್ನು ಬಂಧಿಸಲಾಗಿದೆ. ಬಾಲಕಿಯೊಬ್ಬಳಿಗೆ ಶಿವಲಿಂಗದ ಕನಸು ಬಿದ್ದ ನಂತರ ಕುಟುಂಬದವರು ದೇವಸ್ಥಾನಕ್ಕೆ ಹೋಗಿ ಶಿವಲಿಂಗ ಕದ್ದಿದ್ದರು.

ದ್ವಾರಕಾದಲ್ಲಿರುವ ಪ್ರಾಚೀನ ಭೀದ್ಭಂಜನ್ ಮಹಾದೇವ್ ದೇವಾಲಯದಿಂದ ಶಿವಲಿಂಗವನ್ನು ಕದ್ದಿದ್ದರು, ಅಧಿಕಾರಿಗಳು ಆರಂಭದಲ್ಲಿ ಅದನ್ನು ಸಮುದ್ರಕ್ಕೆ ಎಸೆದಿದ್ದಾರೆ ಎಂದು ಶಂಕಿಸಿದ್ದರು. ದ್ವಾರಕಾದಿಂದ 500 ಕಿಲೋಮೀಟರ್ ದೂರದಲ್ಲಿರುವ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಕುಟುಂಬವೊಂದು ಅದನ್ನು ಕದ್ದಿರುವುದು ಬಳಿಕ ತಿಳಿದುಬಂದಿತ್ತು.

ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಕುಟುಂಬದ ಒಬ್ಬ ಹುಡುಗಿ ಕನಸಿನಲ್ಲಿ ಕಾಣಿಸಿಕೊಂಡ ಭೀದ್ಭಂಜನ್ ಮಹಾದೇವ್ ದೇವಸ್ಥಾನದ ಶಿವಲಿಂಗವನ್ನು ಮನೆಗೆ ತಂದು ಪ್ರತಿಷ್ಠಾಪಿಸುವುದರಿಂದ ಅವರ ಸಮಸ್ಯೆಗಳು ಕೊನೆಗೊಂಡು ಸಮೃದ್ಧಿ ತರುತ್ತದೆ ಎಂದು ನಂಬಿದ್ದರು ಎಂಬುದು ಪೊಲೀಸರಿಗೆ ಬಳಿಕ ತಿಳಿಯಿತು.

ಮತ್ತಷ್ಟು ಓದಿ: ಶಿವಲಿಂಗದಲ್ಲಿ ಕೆತ್ತನೆ ಮಾಡಿರುವ ಕಲ್ಲು ನಾಗರದ ತಲೆ ಮೇಲೆ ಬೆಳೆದ ಕೂದಲು; ಪವಾಡ ಕಣ್ತುಂಬಿಕೊಳ್ಳಲು ಬಂದ ಜನ

ಮಹೇಂದ್ರ ಮಕ್ವಾನಾ ಅವರ ಸೊಸೆಯ ಕನಸಿನಲ್ಲಿ ಶಿವಲಿಂಗ ಕಾಣಿಸಿಕೊಂಡಿತ್ತು, ಕುಟುಂಬದ ಏಳರಿಂದ ಎಂಟು ಸದಸ್ಯರು ದ್ವಾರಕೆಗೆ ಪ್ರಯಾಣ ಬೆಳೆಸಿ ಕೆಲವು ದಿನಗಳ ಕಾಲ ಅಲ್ಲಿಯೇ ಇದ್ದರು. ಅವರು ದೇವಾಲಯದ ಪೂಜೆಯನ್ನು ನಡೆಸಿದರು ಮತ್ತು ಶಿವಲಿಂಗವನ್ನು ಕದ್ದ ನಂತರ, ಮನೆಗೆ ಹಿಂತಿರುಗಿ ಮಹಾಶಿವರಾತ್ರಿಯಂದು ಅದನ್ನು ತಮ್ಮ ಮನೆಯಲ್ಲಿ ಪ್ರತಿಷ್ಠಾಪಿಸಿದರು.

ನಾವು ಎಂಟು ಆರೋಪಿಗಳನ್ನೂ ಬಂಧಿಸಿದ್ದೇವೆ. ಮಹೇಂದ್ರನ ಸೊಸೆ ಹರ್ಷದ ಭೀದ್ಭಂಜನ್ ಮಹಾದೇವನ ಶಿವಲಿಂಗವನ್ನು ತಮ್ಮ ಮನೆಯಲ್ಲಿ ಸ್ಥಾಪಿಸಿದರೆ, ಅದು ಅದೃಷ್ಟವನ್ನು ತರುತ್ತದೆ ಮತ್ತು ಕುಟುಂಬವು ಪ್ರಗತಿ ಹೊಂದುತ್ತದೆ ಎಂಬುದಾಗಿ ಕನಸು ಕಂಡಿದ್ದಳು. ಕುಟುಂಬದ ಎಲ್ಲಾ ಸದಸ್ಯರು ಒಟ್ಟಾಗಿ ಒಂದು ಯೋಜನೆಯನ್ನು ರೂಪಿಸಿ ಅದನ್ನು ಕಾರ್ಯಗತಗೊಳಿಸಿದರು ಎಂದು ದ್ವಾರಕಾ ಎಸ್ಪಿ ನಿತೀಶ್ ಪಾಂಡೆ ಹೇಳಿದರು.

ಕುಟುಂಬದ ಮೂವರು ಮಹಿಳೆಯರ ಜೊತೆಗೆ ವನರಾಜ್, ಮನೋಜ್ ಮತ್ತು ಜಗತ್ ಎಂದು ಗುರುತಿಸಲಾದ ಇತರ ಆರೋಪಿಗಳನ್ನು ಸಹ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಕದ್ದ ಶಿವಲಿಂಗವನ್ನು ಪೊಲೀಸರು ವಶಪಡಿಸಿಕೊಂಡು ದ್ವಾರಕಾದ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:20 am, Sat, 1 March 25

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ