AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀನೇ ಯಾಕೆ ಫ್ರೆಂಡ್​ಗೆ ದಿನಾ ಲಿಫ್ಟ್​ ಕೊಡ್ಬೇಕು ಎಂದು ತಾಯಿ ಕೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ

ಸ್ನೇಹಿತನಿಗೆ ಪ್ರತಿ ದಿನವೂ ನೀನೇ ಏಕೆ ಲಿಫ್ಟ್​ ಕೊಡಬೇಕು ಎಂದು ಕೇಳಿದ್ದಕ್ಕೆ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. 11 ನೇ ತರಗತಿಯ ವಿದ್ಯಾರ್ಥಿನಿ ತನ್ನ ತಮ್ಮನೊಂದಿಗೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ, ತನ್ನ ಮಗಳು ದಿನ ಸ್ನೇಹಿತನಿಗೆ ಲಿಫ್ಟ್ ನೀಡುವುದನ್ನು ತಾಯಿ ವಿರೋಧಿಸಿದ್ದರು. ಫ್ರೆಂಡ್​ ತನ್ನ ಮಗಳನ್ನು ಅವಲಂಬಿಸುವ ಬದಲು ಸ್ವಂತ ವಾಹನವನ್ನು ಏಕೆ ಬಳಸಬಾರದು ಎಂದು ತಾಯಿ ಪ್ರಶ್ನಿಸಿದ್ದರು.

ನೀನೇ ಯಾಕೆ ಫ್ರೆಂಡ್​ಗೆ ದಿನಾ ಲಿಫ್ಟ್​ ಕೊಡ್ಬೇಕು ಎಂದು ತಾಯಿ ಕೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ
ಸಾವು-ಸಾಂದರ್ಭಿಕ ಚಿತ್ರImage Credit source: Hindustan Times
ನಯನಾ ರಾಜೀವ್
|

Updated on: Apr 06, 2025 | 3:32 PM

Share

ವಡೋದರಾ, ಏಪ್ರಿಲ್ 06: ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ವಿಷಯಗಳಿಗೂ ಮಕ್ಕಳು ತಪ್ಪು ನಿರ್ಧಾರ ತೆಗೆದುಕೊಂಡುಬಿಡುತ್ತಾರೆ. ಪೋಷಕರಾಗಲೀ ಅಥವಾ ಶಿಕ್ಷಕರಾಗಲೀ ಏನು ಹೇಳುತ್ತಿದ್ದಾರೆ ಎಂದು ಕೇಳುವ ವ್ಯವಧಾನವೂ ಇಲ್ಲವಾಗಿದೆ. ನಿನ್ನ ಫ್ರೆಂಡ್​(Friend)ಗೆ ಯಾಕೆ ದಿನಾ ನೀನೇ ಲಿಫ್ಟ್​ ಕೊಡಬೇಕು ಅವರ ಮನೆಯಲ್ಲಿ ವಾಹನ ಇಲ್ಲವೇ ಎಂದು ಪ್ರಶ್ನಿಸಿದ್ದಕ್ಕೆ 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ವಡೋದರಾದಲ್ಲಿ ನಡೆದಿದೆ.

ಮೊದಲೆಲ್ಲಾ ತರಗತಿಯಲ್ಲಿ ಫೇಲ್ ಆದರೆ ಮನೆಯಲ್ಲಿ ಏನೆನ್ನುತ್ತಾರೋ ಎನ್ನುವ ಆಲೋಚನೆಯಲ್ಲಿ ತಿಳಿಯದೇ ಮಕ್ಕಳು ಆತ್ಮಹತ್ಯೆಂತಹ ದಾರಿ ತುಳಿದುಬಿಡುತ್ತಿದ್ದರು. ಆದರೆ ಈಗ ಮೊಬೈಲ್, ಟಿವಿ ಯಾಕೆ ನೋಡ್ತೀಯಾ , ಫ್ರೆಂಡ್​ ಜತೆ ಯಾಕೆ ಮಾತಾಡ್ತೀಯಾ ಹೀಗೆ ಸಣ್ಣ ಪುಟ್ಟ ಪ್ರಶ್ನೆಗಳನ್ನು ಪೋಷಕರು ಕೇಳಿದರೂ ಅದನ್ನು ಕೇಳುವ ಶಾಂತ ಸ್ವಭಾವ ಮಕ್ಕಳಿಗಿಲ್ಲವಾಗಿದೆ.

11 ನೇ ತರಗತಿಯ ವಿದ್ಯಾರ್ಥಿನಿ ತನ್ನ ತಮ್ಮನೊಂದಿಗೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ, ತನ್ನ ಮಗಳು ದಿನ ಸ್ನೇಹಿತನಿಗೆ ಲಿಫ್ಟ್ ನೀಡುವುದನ್ನು ತಾಯಿ ವಿರೋಧಿಸಿದ್ದರು. ಫ್ರೆಂಡ್​ ತನ್ನ ಮಗಳನ್ನು ಅವಲಂಬಿಸುವ ಬದಲು ಸ್ವಂತ ವಾಹನವನ್ನು ಏಕೆ ಬಳಸಬಾರದು ಎಂದು ತಾಯಿ ಪ್ರಶ್ನಿಸಿದ್ದರು.

ಇದನ್ನೂ ಓದಿ
Image
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
Image
ದಾವಣಗೆರೆಯಲ್ಲೊಂದು ಅಮಾನುಷ ಕೃತ್ಯ: ಮರಕ್ಕೆ ಕಟ್ಟಿ ಚಿತ್ರಹಿಂಸೆ
Image
19 ವರ್ಷದ ಯುವತಿ ಮೇಲೆ ಅತ್ಯಾಚಾರ; ದಿಗಂಬರ ಜೈನಮುನಿಗೆ 10 ವರ್ಷ ಜೈಲು
Image
ಅನೈತಿಕ ಸಂಬಂಧದ ಶಂಕೆ; ಹೆಂಡತಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದ ಗಂಡ

ಬಾಲಕಿಯ ತಾಯಿ ಗಂಡ ತೋರಿಕೊಂಡಿದ್ದು, ಮನೆಯ ಜವಾಬ್ದಾರಿ ಸಂಪೂರ್ಣವಾಗಿ ಆಕೆಯ ಮೇಲಿದೆ. ಅವರು ನಾಲ್ಕೈದು ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.ಕೆಲಸದಿಂದ ಮನೆಗೆ ಹಿಂದಿರುಗಿದಾಗ ಮಗಳು ನೇಣು ಬಿಗಿದಿರುವುದನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದರು.ಪೊಲೀಸರು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಮತ್ತಷ್ಟು ಓದಿ: ಪಂಜಾಬ್:​ ಮಾಲ್​ನ 4ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ

ಸ್ಥಳದಿಂದ ಆಕೆಯ ತಾಯಿಗೆ ಬರೆದಿರುವ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಬಾಲಕಿ ತನ್ನ ತಾಯಿಗೆ ಪತ್ರ ಬರೆದು, “ಅಮ್ಮಾ, ನಿಮ್ಮ ಮಗಳು ನಿಮ್ಮ ನಿಯಂತ್ರಣದಲ್ಲಿಲ್ಲ. ಎಲ್ಲರೂ ಸಂತೋಷವಾಗಿರಬೇಕು. ನಾನು ಹೋಗುತ್ತಿದ್ದೇನೆ ಎಂದು ಬರೆದಿದ್ದಾಳೆ. ಎರಡು ದಿನಗಳ ಹಿಂದೆ ಮಗಳು ಆಗಾಗಾ ಸ್ನೇಹಿತನೊಂದಿಗೆ ಓಡಾಡುತ್ತಿರುವುದಕ್ಕೆ ಗದರಿಸಿದ್ದಾಗಿ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ