Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ
ಡ್ರ್ಯಾಗನ್ ಫ್ರೂಟ್​
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 20, 2021 | 4:54 PM

ಗಾಂಧಿನಗರ: ಇಷ್ಟು ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನಗರಗಳ ಹೆಸರನ್ನು ಬದಲಿಸುವುದನ್ನು ಕೇಳಿದ್ದೀರಿ. ಆದರೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಣ್ಣೊಂದರ ಹೆಸರನ್ನು ಬದಲಿಸಿದ್ದಾರೆ.

ಗುಜರಾತ್​ನ ಕಛ್​, ನವ್​ಸಾರಿ ಹಾಗೂ ಸೌರಾಷ್ಟ್ರದ ವಿವಿಧ ಭಾಗಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಡ್ರ್ಯಾಗನ್ ಫ್ರೂಟ್​ಗೆ ‘ಕಮಲಂ’ ಮರುನಾಮಕರಣ ಮಾಡಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ರೂಪಾಣಿ ಮಾಹಿತಿ ನೀಡಿದ್ದಾರೆ. ಈ ಹಣ್ಣಿಗೆ ಡ್ರ್ಯಾಗನ್​ ಎಂಬ ಹೆಸರು ಸೂಕ್ತವೆನಿಸುತ್ತಿಲ್ಲ. ಇದರ ಹೆಸರಿನ ಕಾರಣಕ್ಕೆ ಇದು ಚೀನಾದ್ದೇ ಇರಬಹುದಾ ಎನಿಸುತ್ತದೆ. ಹಾಗಾಗಿ ಕಮಲಂ ಎಂದು ಮರುನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

ಕಮಲಂ ಯಾಕೆ? ಆದರೆ ಕಮಲಂ ಎಂಬ ಹೆಸರೇ ಯಾಕೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಾಣಿ, ಈ ಹಣ್ಣು ಕಮಲದ ಹೂವಿನಂತೆ ಇದೆ ಎಂದು ಇದನ್ನು ಬೆಳೆಯುವ ಅದೆಷ್ಟೋ ರೈತರು ಹೇಳಿದ್ದಾರೆ. ಹಾಗಾಗಿ ಕಮಲಂ ಎಂದೇ ಹೆಸರಿಟ್ಟಿದ್ದೇವೆಯೇ ಹೊರತು ಇದರಲ್ಲಿ ರಾಜಕೀಯ ಕಾರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿಯ ಸಿಂಬಲ್ ಕಮಲವಾಗಿದ್ದು, ಗುಜರಾತ್​ನಲ್ಲಿ ಪಕ್ಷದ ಪ್ರಧಾನ ಕಚೇರಿಯ ಹೆಸರೂ ಶ್ರೀ ಕಮಲಂ ಎಂದೇ ಆಗಿದೆ.

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ