AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ
ಡ್ರ್ಯಾಗನ್ ಫ್ರೂಟ್​
Lakshmi Hegde
| Edited By: |

Updated on: Jan 20, 2021 | 4:54 PM

Share

ಗಾಂಧಿನಗರ: ಇಷ್ಟು ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನಗರಗಳ ಹೆಸರನ್ನು ಬದಲಿಸುವುದನ್ನು ಕೇಳಿದ್ದೀರಿ. ಆದರೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಣ್ಣೊಂದರ ಹೆಸರನ್ನು ಬದಲಿಸಿದ್ದಾರೆ.

ಗುಜರಾತ್​ನ ಕಛ್​, ನವ್​ಸಾರಿ ಹಾಗೂ ಸೌರಾಷ್ಟ್ರದ ವಿವಿಧ ಭಾಗಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಡ್ರ್ಯಾಗನ್ ಫ್ರೂಟ್​ಗೆ ‘ಕಮಲಂ’ ಮರುನಾಮಕರಣ ಮಾಡಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ರೂಪಾಣಿ ಮಾಹಿತಿ ನೀಡಿದ್ದಾರೆ. ಈ ಹಣ್ಣಿಗೆ ಡ್ರ್ಯಾಗನ್​ ಎಂಬ ಹೆಸರು ಸೂಕ್ತವೆನಿಸುತ್ತಿಲ್ಲ. ಇದರ ಹೆಸರಿನ ಕಾರಣಕ್ಕೆ ಇದು ಚೀನಾದ್ದೇ ಇರಬಹುದಾ ಎನಿಸುತ್ತದೆ. ಹಾಗಾಗಿ ಕಮಲಂ ಎಂದು ಮರುನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

ಕಮಲಂ ಯಾಕೆ? ಆದರೆ ಕಮಲಂ ಎಂಬ ಹೆಸರೇ ಯಾಕೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಾಣಿ, ಈ ಹಣ್ಣು ಕಮಲದ ಹೂವಿನಂತೆ ಇದೆ ಎಂದು ಇದನ್ನು ಬೆಳೆಯುವ ಅದೆಷ್ಟೋ ರೈತರು ಹೇಳಿದ್ದಾರೆ. ಹಾಗಾಗಿ ಕಮಲಂ ಎಂದೇ ಹೆಸರಿಟ್ಟಿದ್ದೇವೆಯೇ ಹೊರತು ಇದರಲ್ಲಿ ರಾಜಕೀಯ ಕಾರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿಯ ಸಿಂಬಲ್ ಕಮಲವಾಗಿದ್ದು, ಗುಜರಾತ್​ನಲ್ಲಿ ಪಕ್ಷದ ಪ್ರಧಾನ ಕಚೇರಿಯ ಹೆಸರೂ ಶ್ರೀ ಕಮಲಂ ಎಂದೇ ಆಗಿದೆ.

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ