AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ
ಡ್ರ್ಯಾಗನ್ ಫ್ರೂಟ್​
Lakshmi Hegde
| Edited By: |

Updated on: Jan 20, 2021 | 4:54 PM

Share

ಗಾಂಧಿನಗರ: ಇಷ್ಟು ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನಗರಗಳ ಹೆಸರನ್ನು ಬದಲಿಸುವುದನ್ನು ಕೇಳಿದ್ದೀರಿ. ಆದರೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಣ್ಣೊಂದರ ಹೆಸರನ್ನು ಬದಲಿಸಿದ್ದಾರೆ.

ಗುಜರಾತ್​ನ ಕಛ್​, ನವ್​ಸಾರಿ ಹಾಗೂ ಸೌರಾಷ್ಟ್ರದ ವಿವಿಧ ಭಾಗಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಡ್ರ್ಯಾಗನ್ ಫ್ರೂಟ್​ಗೆ ‘ಕಮಲಂ’ ಮರುನಾಮಕರಣ ಮಾಡಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ರೂಪಾಣಿ ಮಾಹಿತಿ ನೀಡಿದ್ದಾರೆ. ಈ ಹಣ್ಣಿಗೆ ಡ್ರ್ಯಾಗನ್​ ಎಂಬ ಹೆಸರು ಸೂಕ್ತವೆನಿಸುತ್ತಿಲ್ಲ. ಇದರ ಹೆಸರಿನ ಕಾರಣಕ್ಕೆ ಇದು ಚೀನಾದ್ದೇ ಇರಬಹುದಾ ಎನಿಸುತ್ತದೆ. ಹಾಗಾಗಿ ಕಮಲಂ ಎಂದು ಮರುನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

ಕಮಲಂ ಯಾಕೆ? ಆದರೆ ಕಮಲಂ ಎಂಬ ಹೆಸರೇ ಯಾಕೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಾಣಿ, ಈ ಹಣ್ಣು ಕಮಲದ ಹೂವಿನಂತೆ ಇದೆ ಎಂದು ಇದನ್ನು ಬೆಳೆಯುವ ಅದೆಷ್ಟೋ ರೈತರು ಹೇಳಿದ್ದಾರೆ. ಹಾಗಾಗಿ ಕಮಲಂ ಎಂದೇ ಹೆಸರಿಟ್ಟಿದ್ದೇವೆಯೇ ಹೊರತು ಇದರಲ್ಲಿ ರಾಜಕೀಯ ಕಾರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿಯ ಸಿಂಬಲ್ ಕಮಲವಾಗಿದ್ದು, ಗುಜರಾತ್​ನಲ್ಲಿ ಪಕ್ಷದ ಪ್ರಧಾನ ಕಚೇರಿಯ ಹೆಸರೂ ಶ್ರೀ ಕಮಲಂ ಎಂದೇ ಆಗಿದೆ.

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!