AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಗುಜರಾತ್: ಹಲವದ್ ಜಿಐಡಿಸಿ ಸಾಗರ್​​ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿತ; 13 ಕಾರ್ಮಿಕರು ಸಾವು

ಹಲವದ್​​ನ ಜಿಐಡಿಸಿಯಲ್ಲಿರುವ  ಸಾಗರ್ ಸಾಲ್ಟ್ ಕಾರ್ಖಾನೆಯ ಗೋಡೆ ಕುಸಿದು ಬಿದ್ದಿದೆ. ದಿಢೀರನೆ ಗೋಡೆ ಕುಸಿದು ಬಿದ್ದಿದ್ದು, 13 ಮಂದಿಯ  ಮೃತದೇಹವನ್ನು  ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ.

Breaking ಗುಜರಾತ್: ಹಲವದ್ ಜಿಐಡಿಸಿ ಸಾಗರ್​​ ಉಪ್ಪಿನ ಕಾರ್ಖಾನೆಯ ಗೋಡೆ ಕುಸಿತ; 13 ಕಾರ್ಮಿಕರು ಸಾವು
ಗುಜರಾತಿನಲ್ಲಿ ಕಾರ್ಖಾನೆಯ ಗೋಡೆ ಕುಸಿತ
TV9 Web
| Edited By: |

Updated on:May 18, 2022 | 2:04 PM

Share

ಗುಜರಾತಿನ ಮೋರ್ಬಿ ಜಿಲ್ಲೆಯ  ಹಲವದ್ ಜಿಐಡಿಸಿ (Halvad GIDC)  ಸಾಗರ್​​ ಉಪ್ಪಿನ ಕಾರ್ಖಾನೆಯ (Sagar salt factory) ಗೋಡೆ ಕುಸಿದು (Wall collapse )13 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿ ಆಗಿದೆ. 30 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸದ್ಯ  ಲಭಿಸಿರುವ ಮಾಹಿತಿ ಪ್ರಕಾರ ಹಲವದ್​​ನ ಜಿಐಡಿಸಿಯಲ್ಲಿರುವ  ಸಾಗರ್ ಸಾಲ್ಟ್ ಕಾರ್ಖಾನೆಯ ಗೋಡೆ ಕುಸಿದು ಬಿದ್ದಿದೆ. ದಿಢೀರನೆ ಗೋಡೆ ಕುಸಿದು ಬಿದ್ದಿದ್ದು, 13 ಮಂದಿಯ  ಮೃತದೇಹವನ್ನು  ಅವಶೇಷಗಳಡಿಯಿಂದ ಹೊರತೆಗೆಯಲಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ  ರಕ್ಷಣಾ ಕಾರ್ಯ ನಡೆಸಿದ್ದಾರೆ. ಇಂದು (ಬುಧವಾರ) ಮಧ್ಯಾಹ್ನ  12ಗಂಟೆಗೆ ಈ ದುರಂತ ಸಂಭವಿಸಿದ್ದು  ರಕ್ಷಣಾ  ಕಾರ್ಯಾಚರಣೆ ನಡೆಯುತ್ತಿದೆ. ದಿಢೀರ್  ಆಗಿ ಗೋಡೆ ಕುಸಿಯಲು ಕಾರಣ ಏನೆಂಬುದು ಈವರೆಗೆ ಗೊತ್ತಾಗಿಲ್ಲ.  ಸ್ಥಳೀಯ ಶಾಸಕ ಪರ್ಸೋತ್ತಮ್ ಸಬರಿಯಾ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.ಜೆಸಿಬಿ  ಸಹಾಯದಿಂದ ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಹೊರತಗೆಯಲಾಗುತ್ತಿದೆ .

ಕಾರ್ಮಿಕರು ಮಧ್ಯಾಹ್ನದ ಊಟ ಮಾಡಲು ಹೋಗಿದ್ದರು. ಹಾಗಾಗಿ  ಕೆಲವು ಕಾರ್ಮಿಕರು ಮಾತ್ರ ಅಲ್ಲಿದ್ದರು. ಇಲ್ಲವಾದರೆ  ಹಲವು ಕಾರ್ಮಿಕರು  ಈ ಘಟನೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಕೆಲವು ಮೂಲಗಳ   ಪ್ರಕಾರ ಗೋಡೆ  ಬಳಿ ಉಪ್ಪಿನ ಹಾಸಿಗೆ ಹಾಕಲಾಗಿದೆ. ಇದರಿಂದಾಗಿ ಗೋಡೆಯು ಒತ್ತಡದಿಂದ ಕುಸಿದಿದ್ದು, ಗೋಡೆ ಪಕ್ಕದಲ್ಲಿ ಪ್ಯಾಕಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಾವಿಗೀಡಾಗಿದ್ದಾರೆ.  ಪ್ರಾಣ ಕಳೆದುಕೊಂಡ ಕಾರ್ಮಿಕರು ರಾಧನ್‌ಪುರ ಬಳಿಯ ಕಾರ್ಮಿಕರು ಎಂದುಹೇಳಲಾಗುತ್ತಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:34 pm, Wed, 18 May 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ