AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದಿದ್ದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ

ಇಂಥವರನ್ನು ನೇರವಾಗಿ ರೋಗಿಗಳ ಆರೈಕೆಗೆ ಬಿಡಬಾರದು. ಸ್ವಚ್ಛಗೊಳಿಸುವುದು, ಅಡುಗೆಯಲ್ಲಿ ಸಹಾಯ ಮಾಡುವುದು, ದಾಖಲೆಗಳ ನಿರ್ವಹಣೆಯಂಥ ಕೆಲಸಗಳಲ್ಲಿ ತೊಡಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಮಾಸ್ಕ್ ಧರಿಸದಿದ್ದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ
ಮಾಸ್ಕ್ ಧಾರಣೆ ಕಡ್ಡಾಯ
sandhya thejappa
| Edited By: |

Updated on:Dec 03, 2020 | 3:17 PM

Share

ಗಾಂಧಿನಗರ: ಮಾಸ್ಕ್ ಧರಿಸವರಿಗೆ ಕೋವಿಡ್ ಕೇಂದ್ರಗಳಲ್ಲಿ ಸಮುದಾಯ ಸೇವೆ ಮಾಡುವ ಶಿಕ್ಷೆ ವಿಧಿಸುವಂತೆ ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಬುಧವಾರ ನಿರ್ದೇಶನ ನೀಡಿದೆ. ಕೋವಿಡ್ ಆರೈಕೆ ಕೇಂದ್ರದಲ್ಲಿ ಇಂಥವರಿಗೆ ಕಡ್ಡಾಯ ಸೇವೆ ವಿಧಿಸುವ ಪ್ರಸ್ತಾವ ಒಪ್ಪಿಕೊಳ್ಳಲು ತುಸು ಹಿಂಜರಿಕೆಯಿದೆ ಎಂದು ಮಂಗಳವಾರ ಹೇಳಿದ್ದ ನ್ಯಾಯಾಲಯ ಬುಧವಾರ ಅಂತಿಮವಾಗಿ ಸೇವಾ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಿತು.

ಈ ಪ್ರಸ್ತಾವವನ್ನು ಅನುಷ್ಠಾನಕ್ಕೆ ತರಲು ಆಸಕ್ತಿಯಿದೆ. ಆದರೆ ಅದು ಅಷ್ಟು ಸುಲಭವಲ್ಲ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತು.

ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ಡಿವಾಲಾ ಅವರಿದ್ದ ವಿಭಾಗೀಯ ಪೀಠವು ಈ ಕುರಿತು ಸಮರ್ಪಕ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ರಾಜ್ಯ ಸರ್ಕಾರವು ಹೊರಡಿಸುವ ನಿರ್ದೇಶನದಲ್ಲಿ ಮಾಸ್ಕ್​ ಬಳಕೆ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದೂ ಸೇರಿದಂತೆ ಕೋವಿಡ್​ ಸುರಕ್ಷಾ ಶಿಷ್ಟಾಚಾರಗಳ ಕಡ್ಡಾಯ ಪಾಲನೆಯ ವಿಚಾರಗಳ ಉಲ್ಲೇಖವಿರಬೇಕು ಎಂದು ನ್ಯಾಯಪೀಠ ಹೇಳಿದೆ.

ಇಂಥವರನ್ನು ನೇರವಾಗಿ ರೋಗಿಗಳ ಆರೈಕೆಗೆ ಬಿಡಬಾರದು. ಸ್ವಚ್ಛಗೊಳಿಸುವುದು, ಅಡುಗೆಯಲ್ಲಿ ಸಹಾಯ ಮಾಡುವುದು, ದಾಖಲೆಗಳ ನಿರ್ವಹಣೆಯಂಥ ಕೆಲಸಗಳಲ್ಲಿ ತೊಡಗಿಸಬೇಕು. ಮಾಸ್ಕ್​ ಧರಿಸದೆ ಸಂಚರಿಸಿ ಸಿಕ್ಕಿಬಿದ್ದವರ ವಯಸ್ಸು, ವಿದ್ಯಾರ್ಹತೆ, ಲಿಂಗ ಮತ್ತು ಆರೋಗ್ಯ ಸ್ಥಿತಿ ಪರಿಗಣಿಸಿ ಅವರನ್ನು ಸೇವೆಗೆ ನಿಯೋಜಿಸಬೇಕು. ಇಂಥವರನ್ನು ದಿನಕ್ಕೆ 4ರಿಂದ 6 ಗಂಟೆಗಳಂತೆ 4-15 ದಿನಗಳವರೆಗೆ ಸಮುದಾಯ ಸೇವೆಗೆ ನಿಯೋಜಿಸಬಹುದು. ಕೊರೊನಾ ಸೋಂಕು ಹರಡುವುದನ್ನು ತಡೆಯಲೆಂದು ರೂಪಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ ಕಾರಣಕ್ಕೆ ಸಮುದಾಯ ಸೇವೆ ಮಾಡಲು ನಿಯುಕ್ತಿಗೊಂಡವರ ಹೆಸರುಗಳನ್ನು ಮಾಧ್ಯಮಗಳಲ್ಲಿ ಪ್ರಚಾರ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿತು.

ಡಿಸೆಂಬರ್ 24ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯವು, ಅಷ್ಟರೊಳಗೆ ಈ ಕುರಿತ ಕಾರ್ಯಸಾಧ್ಯತೆ ವರದಿ ಸಲ್ಲಿಸಲು ನಿರ್ದೇಶನ ನೀಡಿತು.

ಅಪಾಯದ ಹೊಸ್ತಿಲಲ್ಲಿ.. ಅಮೆರಿಕನ್ನರು!

Published On - 4:27 pm, Wed, 2 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ