AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice Gita Gopi: ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ

Rahul Gandhi in defamation case: ಕೇರಳದ ವಯನಾಡ್‌ ಸಂಸದರಾಗಿದ್ದ ರಾಹುಲ್ ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿದೆ ಎಂಬ ಹೇಳಿಕೆ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಅವರಿಗೆ ಶಿಕ್ಷೆ ವಿಧಿಸಿತ್ತು.

Justice Gita Gopi: ರಾಹುಲ್ ಗಾಂಧಿ ಮೇಲ್ಮನವಿ ವಿಚಾರಣೆಯಿಂದ ಹಿಂದೆ ಸರಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಗೀತಾ ಗೋಪಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on:Apr 26, 2023 | 8:49 PM

Share

ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ (Defamation case) ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯಿಂದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಗೋಪಿ (Justice Gita Gopi) ಬುಧವಾರ ಹಿಂದೆ ಸರಿದಿದ್ದಾರೆ. ಏಕಸದಸ್ಯ ಪೀಠದ ನ್ಯಾಯಮೂರ್ತಿ ಗೋಪಿ ಅವರ ಮುಂದೆ ಗಾಂಧಿಯವರ ಮನವಿಯನ್ನು ಪ್ರಸ್ತಾಪಿಸಲಾಯಿತು.ಆದಾಗ್ಯೂ, ನನ್ನ ಮುಂದೆ ಅಲ್ಲ ಎಂದು ಹೇಳಿದ ಗೀತಾ ಗೋಪಿ, ಮೇಲ್ಮನವಿಯ ವಿಚಾರಣೆಗೆ ಮತ್ತೊಂದು ಪೀಠವನ್ನು ನಿಯೋಜಿಸಬಹುದಾದ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನು ಸಂಪರ್ಕಿಸಲು ವಕೀಲರಿಗೆ ಹೇಳಿದ್ದಾರೆ. ಸೂರತ್‌ನ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 20 ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಸಲ್ಲಿಸಿದ ರಾಹುಲ್ ಗಾಂಧಿ ಮನವಿಯನ್ನು ವಜಾಗೊಳಿಸಿತ್ತು.

ಕೇರಳದ ವಯನಾಡ್‌ ಸಂಸದರಾಗಿದ್ದ ರಾಹುಲ್ ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿದೆ ಎಂಬ ಹೇಳಿಕೆ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಅವರಿಗೆ ಶಿಕ್ಷೆ ವಿಧಿಸಿತ್ತು.

22019 ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರಾಜಕೀಯ ಪ್ರಚಾರದಲ್ಲಿ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸುವ ಭರದಲ್ಲಿ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಉಲ್ಲೇಖಿಸಿ ಕಳ್ಳರ ಸರ್ ನೇಮ್ ಮೋದಿ ಎಂದೇ ಯಾಕಿದೆ ಎಂದು ಕೇಳಿದ್ದರು.

ಇದನ್ನೂ ಓದಿಅವರು ನಮ್ಮ ಎದೆ ಮೇಲೆ ರೈಫಲ್ ಇಟ್ಟು ಲೂಟಿ ಮಾಡಿದರು; ಸುಡಾನ್​​ ಸಂಘರ್ಷದ ಹೊತ್ತಲ್ಲಿ ಬದುಕಿನ ಕತೆ ಹೇಳಿದ ಭಾರತೀಯರು

ರಾಹುಲ್ ಗಾಂಧಿಯ ಈ ಹೇಳಿಕೆ ವಿರುದ್ಧ ಬಿಜೆಪಿಯ ಮಾಜಿ ಎಂಎಲ್‌ಎ ಪೂರ್ಣೇಶ್ ಮೋದಿ, ರಾಹುಲ್, ಮೋದಿ ಉಪನಾಮದ ವ್ಯಕ್ತಿಗಳನ್ನು ಅವಮಾನಿಸಿದ್ದಾರೆ ಮತ್ತು ಅವಮಾನಿಸಿದ್ದಾರೆ ಎಂದು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಏತನ್ಮಧ್ಯೆ, ತಮ್ಮ ಭಾಷಣದ ಮೂಲಕ ಗಾಂಧಿ ಉದ್ದೇಶಪೂರ್ವಕವಾಗಿ ‘ಮೋದಿ’ ಉಪನಾಮದಿಂದ ಜನರನ್ನು ಅವಮಾನಿಸಿದ್ದಾರೆ ಎಂಬ ಪೂರ್ಣೇಶ್ ಮೋದಿಯವರ ವಾದವನ್ನು ಸೂರತ್‌ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಒಪ್ಪಿಕೊಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Wed, 26 April 23