AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕೃತ; ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ಆದೇಶ

ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಶನಿವಾರ ನಿರಾಕರಿಸಿದ್ದು, ತಕ್ಷಣವೇ ಶರಣಾಗುವಂತೆ ಆದೇಶ ನೀಡಿದೆ.

ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿ ತಿರಸ್ಕೃತ; ತಕ್ಷಣವೇ ಶರಣಾಗುವಂತೆ ಗುಜರಾತ್ ಹೈಕೋರ್ಟ್ ಆದೇಶ
ತೀಸ್ತಾ ಸೆಟಲ್ವಾಡ್
Follow us
Ganapathi Sharma
|

Updated on: Jul 01, 2023 | 4:06 PM

ಅಹಮದಾಬಾದ್: ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ (Teesta Setalvad) ಅವರ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ಶನಿವಾರ ನಿರಾಕರಿಸಿದ್ದು, ತಕ್ಷಣವೇ ಶರಣಾಗುವಂತೆ ಆದೇಶ ನೀಡಿದೆ. ಈ ವಿಷಯವು 2002 ರ ಗೋಧ್ರಾ ನಂತರದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಸೆಟಲ್ವಾಡ್ ಮಾಡಿರುವ ಸಾಕ್ಷ್ಯಾಧಾರ ರಹಿತ ಆರೋಪಕ್ಕೆ ಸಂಬಂಧಿಸಿದ್ದಾಗಿದೆ. ಸೆಟಲ್ವಾಡ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಿರ್ಜಾರ್ ದೇಸಾಯಿ ಅವರ ಪೀಠವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದರ ಜತೆಗೆ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ತಕ್ಷಣವೇ ಶರಣಾಗುವಂತೆ ಸೂಚನೆ ನೀಡಿದೆ.

ಈ ಮಧ್ಯೆ, ತೀರ್ಪಿನ ಅನುಷ್ಠಾನಕ್ಕೆ 30 ದಿನಗಳ ಅವಧಿಗೆ ತಡೆ ನೀಡಬೇಕು ಎಂದು ಹಿರಿಯ ವಕೀಲ ಮಿಹಿರ್ ಠಾಕೋರ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಸೆಟಲ್ವಾಡ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಹೀಗಾಗಿ ಅವರಿಗೆ ಬಂಧನದಿಂದ ಬಿಡುಗಡೆ ದೊರೆತಿತ್ತು.

2002ರ ಗುಜರಾತ್ ಗಲಭೆಗೆ ಸಂಬಂಧಿಸಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಅನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿತ್ತು. ನಂತರ ತೀಸ್ತಾ ಅವರ ಬಂಧನವಾಗಿತ್ತು. 2022ರ ಸೆಪ್ಟೆಂರ್ 22ರಂದು ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

2002 ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ (ಅಂದಿನ ಗುಜರಾತ್ ಮುಖ್ಯಮಂತ್ರಿ) ಮತ್ತು ಇತರರ ವಿರುದ್ಧ ನಕಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಆರೋಪ ತೀಸ್ತಾ ಮೇಲಿದೆ.

ಸೆಟಲ್ವಾಡ್ ವಿರುದ್ಧದ ಆರೋಪಗಳು ಸುಳ್ಳು ಸಾಕ್ಷ್ಯಗಳ ಸೃಷ್ಟಿಗೆ ಸಂಬಂಧಿಸಿದೆ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು. ಅವರ ಮನವಿಯನ್ನು ಪುರಸ್ಕರಿಸಬಾರದು ಎಂದು ರಾಜ್ಯ ಸರ್ಕಾರದ ಪರ ವಕೀಲರು ಜೂನ್ 15ರಂದು ಹೈಕೋರ್ಟ್​ನಲ್ಲಿ ವಾದ ಮಂಡಿಸಿದ್ದರು.

ಇದನ್ನೂ ಓದಿ: Breaking ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್

2002ರ ಗಲಭೆಯ ನಂತರ ಗುಜರಾತ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಸೆಟಲ್ವಾಡ್ ಅವರು ಕಾಂಗ್ರೆಸ್ ನಾಯಕ, ದಿವಂಗತ ಅಹ್ಮದ್ ಪಟೇಲ್ ಅವರಿಂದ 30 ಲಕ್ಷ ರೂಪಾಯಿ ಪಡೆದಿದ್ದರು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.

ಕಳೆದ ವರ್ಷ ಜೂನ್ 25 ರಂದು ಗುಜರಾತ್ ಪೊಲೀಸರು ಸಹ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಆರ್​​ಬಿ ಶ್ರೀಕುಮಾರ್ ಜೊತೆಗೆ ಸೆಟಲ್ವಾಡ್ ಅವರನ್ನು ಬಂಧಿಸಿದ್ದರು. 2002 ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕ ವ್ಯಕ್ತಿಗಳನ್ನು ತಪ್ಪಾಗಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಬಗ್ಗೆ ಅಹಮದಾಬಾದ್ ಡಿಟೆಕ್ಷನ್ ಆಫ್ ಕ್ರೈಮ್ ಬ್ರಾಂಚ್ (ಡಿಸಿಬಿ) ದಾಖಲಿಸಿದ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ನಂತರ ಈ ಬಂಧನವಾಗಿತ್ತು.

ಏಳು ದಿನಗಳ ಪೊಲೀಸ್ ಕಸ್ಟಡಿ ನಂತರ, ಜುಲೈ 2 ರಂದು ಸೆಟಲ್ವಾಡ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಸೆಟಲ್ವಾಡ್ ಬಂಧನವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ