AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಸಾಮೂಹಿಕ ಅತ್ಯಾಚಾರ

ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು 24 ಗಂಟೆಗಳಲ್ಲಿ ಎರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ನಡೆದಿದೆ. ನಂತರ, ಮೂವರು ಶಂಕಿತರನ್ನು ಬಂಧಿಸಲಾಗಿದೆ ಎಲ್ಲರೂ ಮೀನುಗಾರರು ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಸಾಮೂಹಿಕ ಅತ್ಯಾಚಾರ
ಕ್ರೈಂ
ನಯನಾ ರಾಜೀವ್
|

Updated on: Oct 09, 2025 | 11:56 AM

Share

ಗುಜರಾತ್, ಅಕ್ಟೋಬರ್ 09: ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು 24 ಗಂಟೆಗಳಲ್ಲಿ ಎರಡು ಬಾರಿ ಸಾಮೂಹಿಕ ಅತ್ಯಾಚಾರ(Rape)ವೆಸಗಿರುವ ಘಟನೆ ಗುಜರಾತ್​ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ನಡೆದಿದೆ. ನಂತರ, ಮೂವರು ಶಂಕಿತರ ಬಂಧಿಸಲಾಗಿದ್ದು ಎಲ್ಲರೂ ಮೀನುಗಾರರು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆಯನ್ನು ಮಂಗಳವಾರ ಉನಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿತು. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಆಕೆಯ ಕುಟುಂಬದವರು ಆಕೆಯನ್ನು ಚಿಕಿತ್ಸೆಗೆ ಕರೆದೊಯ್ದರು. ಅತ್ಯಾಚಾರದ ಘಟನೆಯನ್ನು ಆಕೆ ವೈದ್ಯರಿಗೆ ತಿಳಿಸಿದಾಗ, ಆಸ್ಪತ್ರೆಯು ಪೊಲೀಸರಿಗೆ ಮಾಹಿತಿ ನೀಡಿತು.

ಅತ್ಯಾಚಾರ ಸಂತ್ರಸ್ತೆ ನವಬಂದರ್ ಮೆರೈನ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆಯ ಪತಿ 10 ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ನೀಡಿದ ದೂರಿನಲ್ಲಿ ಮಹಿಳೆ, ಒಂದು ವಾರದ ಹಿಂದೆ ಮಾಂಡ್ವಿ ಚೆಕ್‌ಪೋಸ್ಟ್‌ನಿಂದ ತನ್ನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಮೂವರು ತನ್ನ ಬಳಿಗೆ ಬಂದರು. ಅವರು ಅವಳನ್ನು ಹಳ್ಳಿಗೆ ಬಿಡಲು ಮುಂದಾದರು ಮಹಿಳೆಗೆ ಅವರ ಪರಿಚಯವಿದ್ದಿದ್ದರಿಂದ ಅವರು ಒಪ್ಪಿಕೊಂಡಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಆರೋಪಿ ಮನೆಗೆ ಅತ್ಯಾಚಾರ ಸಂತ್ರಸ್ತೆಯ ಕಳುಹಿಸಿದ ಅಧಿಕಾರಿಗಳು, ಮತ್ತೆ ಆಕೆಯ ಮೇಲೆ ಅತ್ಯಾಚಾರ

ಆದರೆ, ಸ್ವಲ್ಪ ದೂರ ಪ್ರಯಾಣಿಸಿದ ನಂತರ, ಅವರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸರದಿ ಪ್ರಕಾರ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಇದಾದ ನಂತರ, ಮೂವರು ಆರೋಪಿಗಳಲ್ಲಿ ಒಬ್ಬನ ಮನೆಗೆ ಆಕೆಯನ್ನು ಬಲವಂತವಾಗಿ ಕರೆದೊಯ್ದು, ಅಲ್ಲಿ ಮತ್ತೆ ಅತ್ಯಾಚಾರ ಎಸಗಿದ್ದಾರೆ.

ಆಕೆಗೆ ಮನೆಗೆ ಮರಳಲು ಅವಕಾಶ ಮಾಡಿಕೊಟ್ಟರು ಆದರೆ ಈ ಘಟನೆಯನ್ನು ಯಾರ ಬಳಿಯಾದರೂ ಹೇಳಿದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಹಲವಾರು ತಂಡಗಳನ್ನು ರಚಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ