AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆ ನೆಲದ ಮೇಲೆಯೇ ಬಿದ್ದು ನರಳಾಡುತ್ತಿರುವ ರೋಗಿಗಳು; ವಿಡಿಯೋ ಶೇರ್ ಮಾಡಿಕೊಂಡ ಕಾಂಗ್ರೆಸ್ ಸಂಸದ

ಈ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ರನ್ನು ಟ್ಯಾಗ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹರ್ಷವರ್ಧನ್ ಅವರೇ, ಗುಜರಾತ್​ಗೆ ಕೇಂದ್ರದಿಂದ ತಂಡವನ್ನು ಕಳಿಸುವ ಅಗತ್ಯ ನಿಮಗೆ ಕಾಣುತ್ತಿಲ್ಲವೇ? ಎಂದಿದ್ದಾರೆ.

ಸರ್ಕಾರಿ ಆಸ್ಪತ್ರೆ ನೆಲದ ಮೇಲೆಯೇ ಬಿದ್ದು ನರಳಾಡುತ್ತಿರುವ ರೋಗಿಗಳು; ವಿಡಿಯೋ ಶೇರ್ ಮಾಡಿಕೊಂಡ ಕಾಂಗ್ರೆಸ್ ಸಂಸದ
ಸರ್ಕಾರಿ ಆಸ್ಪತ್ರೆಯಲ್ಲಿ ನೆಲ, ಸ್ಟ್ರೆಚರ್​ ಮೇಲೆ ರೋಗಿಗಳು ಮಲಗಿರುವುದು
Lakshmi Hegde
|

Updated on: Apr 08, 2021 | 4:55 PM

Share

ಅಹ್ಮದಾಬಾದ್: ದೇಶಾದ್ಯಂತ ಕೊರೊನಾ ವೈರಸ್​ ಸಿಕ್ಕಾಪಟೆ ಹೆಚ್ಚುತ್ತಿದೆ. ಹಲವು ರಾಜ್ಯಗಳಲ್ಲಿ ದಿನದಿನವೂ ಸೋಂಕಿತರ ಸಂಖ್ಯೆ ಏರುತ್ತಿದೆ. ಆಸ್ಪತ್ರೆಗಳಿಗೆ ದಾಖಲಾಗುವವರ ಪ್ರಮಾಣವೂ ಅಧಿಕವಾಗುತ್ತಿದೆ. ಈ ಮಧ್ಯೆ ಗುಜರಾತ್​​ನ ಕಾಂಗ್ರೆಸ್ ಸಂಸದ ಶಕ್ತಿ ಸಿನ್ಹ ಗೋಹಿಲ್​ ಅವರು ಶೇರ್​ ಮಾಡಿಕೊಂಡಿರುವ ವಿಡಿಯೋವೊಂದು ಆತಂಕವನ್ನು ಹುಟ್ಟಿಸಿದೆ. ಇದು ಗುಜರಾತ್​ನ ಭಾವನಗರ್​ ಸರ್ಕಾರಿ ಆಸ್ಪತ್ರೆಯಲ್ಲಿ ಚಿತ್ರೀಕರಿಸಿದ್ದು ಎಂದು ಸಂಸದರು ಹೇಳಿಕೊಂಡಿದ್ದಾರೆ.

ಒಂದು ನಿಮಿಷ 31 ಸೆಕೆಂಡ್​ಗಳ ವಿಡಿಯೋ ಇದಾಗಿದ್ದು, ಇದರಲ್ಲಿ ರೋಗಿಗಳು ಆಸ್ಪತ್ರೆಯಲ್ಲಿ ನೆಲದ ಮೇಲೆ, ಸ್ಟ್ರೆಚರ್​ಗಳ ಮೇಲೆಯೇ ಮಲಗಿರುವುದನ್ನು ನೋಡಬಹುದು.  ಕೊವಿಡ್​ 19 ಮಿತಿಮೀರುತ್ತಿರುವ ಕಾರಣದಿಂದ ಆಸ್ಪತ್ರೆಯಲ್ಲಿ ಬೆಡ್​ಗಳ ಕೊರತೆ ಉಂಟಾಗಿದೆ. ಹಾಗಾಗಿ ರೋಗಿಗಳು ನೆಲದ ಮೇಲೆ ಮಲಗುವ ಪರಿಸ್ಥಿತಿ ಉಂಟಾಗಿದೆ ಎಂದು ಸಂಸದ ಗೋಹಿಲ್ ಹೇಳಿದ್ದಾರೆ. ಕಣ್ಣಮುಂದೆಯೇ ಅವ್ಯವಸ್ಥೆ ಕಾಣಿಸುತ್ತಿದ್ದರೂ ಗುಜರಾತ್ ಸರ್ಕಾರ ಮಾತ್ರ, ಎಲ್ಲವೂ ಸರಿಯಾಗಿದೆ ಎಂದೇ ಹೇಳಿಕೊಳ್ಳುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಈ ವಿಡಿಯೋವನ್ನು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ ಸಂಸದ, ಗುಜರಾತ್ ಮುಖ್ಯಮಂತ್ರಿ ವಿಜಯ್​ ರೂಪಾಣಿ, ಮುಖ್ಯಮಂತ್ರಿ ಕಚೇರಿ ಮತ್ತು ಡೆಪ್ಯೂಟಿ ಸಿಎಂ ನಿತಿನ್​ ಪಟೇಲ್​​ರನ್ನು ಅವರನ್ನು ಟ್ಯಾಗ್ ಮಾಡಿದ್ದಾರೆ.

ಈ ವಿಡಿಯೋಕ್ಕೆ ಪ್ರತಿಕ್ರಿಯೆ ನೀಡಿರುವ ಶಿವಸೇನೆಯ ಪ್ರಿಯಾಂಕಾ ಚತುರ್ವೇದಿ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ರನ್ನು ಟ್ಯಾಗ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹರ್ಷವರ್ಧನ್ ಅವರೇ, ಗುಜರಾತ್​ಗೆ ಕೇಂದ್ರದಿಂದ ತಂಡವನ್ನು ಕಳಿಸುವ ಅಗತ್ಯ ನಿಮಗೆ ಕಾಣುತ್ತಿಲ್ಲವೇ? ನಿಮ್ಮ ರಾಜಕೀಯಕ್ಕಾಗಿ ಗುಜರಾತ್​ನಲ್ಲಿ ಎಲ್ಲವೂ ಸರಿ ಇದೆ ಎಂಬ ಇಮೇಜ್​​ನ್ನು ಸೃಷ್ಟಿಸಲು ಹೊರಟಿದ್ದೀರಿ. ಇದಕ್ಕಾಗಿ ಗುಜರಾತ್​ ಜನ ತ್ಯಾಗ ಮಾಡಬೇಕಾಗಿ ಬಂದಿದೆ ಎಂದು ಕಿಡಿಕಾರಿದ್ದಾರೆ.

ಗುಜರಾತ್​ನಲ್ಲಿ ಕೊವಿಡ್​-19 ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 3,575 ಕೊವಿಡ್​ ಕೇಸ್​ಗಳು ದಾಖಲಾಗಿದ್ದವು. ಆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,28,453ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,620ಕ್ಕೆ ತಲುಪಿದೆ. ಗುಜರಾತ್​​ನ 20 ಪ್ರಮುಖ ನಗರಗಳಲ್ಲಿ ಸಂಜೆ 8ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್​ಕರ್ಫ್ಯೂ ಹೇರಲಾಗಿದ್ದು, ಏಪ್ರಿಲ್​ 30ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಅಲ್ಲದೆ, ಏಪ್ರಿಲ್​ 30ರವರೆಗೆ ಸಾರ್ವಜನಿಕವಾಗಿ ಗುಂಪುಗೂಡುವಂತಿಲ್ಲ ಎಂದು ಹೇಳಿದೆ. ಹಾಗೇ, ಮದುವೆ ಸಮಾರಂಭದಲ್ಲಿ ಕೇವಲ 100-200ಜನರಷ್ಟೇ ಸೇರಬಹುದು. ಉಳಿದ ಕಾರ್ಯಕ್ರಮದಲ್ಲಿ ಗರಿಷ್ಠ 50 ಮಂದಿಗೆ ಮಾತ್ರ ಅವಕಾಶ.

ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್​ ಸಂಚಾರ

ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪ ಏನು ಹೇಳಿದ್ದರು ನೆನಪು ಮಾಡ್ಕೊಳಿ: ಸಂಸದ ಪ್ರತಾಪ್​ಗೆ ಸಾರಿಗೆ ನೌಕರರಿಂದ ಟಕ್ಕರ್

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!