AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nilamben Parikh: ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನೀಲಂಬೆನ್ ನಿಧನ

ಮಹಾತ್ಮ ಗಾಂಧಿ ಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್ಅವರು ನಿಧನರಾಗಿದ್ದಾರೆ. ಅವರು ನವಸಾರಿಯಲ್ಲಿ ಕೊನೆಯುಸಿರೆಳೆದರು. ನೀಲಂಬೆನ್ ಅವರು ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 8 ಗಂಟೆಗೆ ಅವರ ನಿವಾಸದಿಂದ ಪ್ರಾರಂಭವಾಗಲಿದ್ದು, ವೀರ್ವಾಲ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Nilamben Parikh: ಮಹಾತ್ಮ ಗಾಂಧಿಯವರ ಮರಿಮೊಮ್ಮಗಳು ನೀಲಂಬೆನ್ ನಿಧನ
ನೀಲಂಬೆನ್ ಪಾರಿಖ್ Image Credit source: Aaj Tak
ನಯನಾ ರಾಜೀವ್
|

Updated on:Apr 02, 2025 | 7:55 AM

Share

ಗುಜರಾತ್, ಏಪ್ರಿಲ್ 2: ಮಹಾತ್ಮ ಗಾಂಧಿ(Mahatma Gandhi) ಯವರ ಮರಿ ಮೊಮ್ಮಗಳು ನೀಲಂಬೆನ್ ಪಾರಿಖ್(Nilamben Parikh) ಅವರು ನಿಧನರಾಗಿದ್ದಾರೆ. ನವಸಾರಿಯಲ್ಲಿ ಕೊನೆಯುಸಿರೆಳೆದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ನೀಲಂಬೆನ್  ಮಹಾತ್ಮ ಗಾಂಧಿಯವರ ಪುತ್ರ ಹರಿದಾಸ್ ಗಾಂಧಿಯವರ ಮೊಮ್ಮಗಳು. ಅವರು ನವಸಾರಿ ಜಿಲ್ಲೆಯ ಅಲ್ಕಾ ಸೊಸೈಟಿಯಲ್ಲಿರುವ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರ ಮನೆಯಲ್ಲಿ ವಾಸಿಸುತ್ತಿದ್ದರು.

ಅವರ ಅಂತಿಮ ಯಾತ್ರೆ ಇಂದು ಬೆಳಗ್ಗೆ 8 ಗಂಟೆಗೆ ಅವರ ನಿವಾಸದಿಂದ ಪ್ರಾರಂಭವಾಗಲಿದ್ದು, ವೀರ್ವಾಲ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನೀಲಂಬೆನ್ ಪಾರಿಖ್ ನಿಜವಾದ ಗಾಂಧಿವಾದಿ. ಯಾವಾಗಲೂ ಮಹಿಳಾ ಕಲ್ಯಾಣ ಮತ್ತು ಮಾನವ ಸೇವೆಗೆ ಸಮರ್ಪಿತರಾಗಿದ್ದರು.

ಜನವರಿ 30, 2008 ರಂದು ಮಹಾತ್ಮ ಗಾಂಧಿಯವರ 60 ನೇ ಪುಣ್ಯತಿಥಿಯಂದು, ನೀಲಂಬೆನ್ ಪಾರಿಖ್ ಅವರು ಬಾಪು ಅವರ ಕೊನೆಯ ಚಿತಾಭಸ್ಮವನ್ನು ಗೌರವಯುತವಾಗಿ ವಿಸರ್ಜಿಸಿದರು. ಈ ಸಂದರ್ಭದಲ್ಲಿ ಗಾಂಧೀಜಿಯವರ ಅನುಯಾಯಿಗಳು ಮತ್ತು ಕುಟುಂಬ ಸದಸ್ಯರು ಸಹ ಅವರಿಗೆ ಗೌರವ ಸಲ್ಲಿಸಿದ್ದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ತರಬೇತಿ ನೀಡುವುದು ಇದರ ಉದ್ದೇಶವಾಗಿತ್ತು.

ಇದನ್ನೂ ಓದಿ
Image
ಆರೆಸ್ಸೆಸ್, ವಿವೇಕಾನಂದ, ಗಾಂಧೀಜಿ ಪ್ರಭಾವ ಸ್ಮರಿಸಿದ ಮೋದಿ
Image
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅಗಮಿಸುವ ಮೊದಲೇ ಮಾತು ಮುಗಿಸಿದ ಸಿಎಂ
Image
ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ: 2 ದಿನ ಶಾಲೆಗಳಿಗೆ ರಜೆ ಘೋಷಣೆ
Image
ಮಹಾತ್ಮಾ ಗಾಂಧಿ ಕುರಿತ ಹತ್ತು ಅತ್ಯುತ್ತಮ ಸಿನಿಮಾಗಳು ಇವು

ಮತ್ತಷ್ಟು ಓದಿ: ಆರ್​ಎಸ್​ಎಸ್, ಬಿಜೆಪಿಯವರು ಮಹಾತ್ಮ ಗಾಂಧಿ ಹಂತಕ ಗೋಡ್ಸೆ ಆರಾಧಕರು: ಸಿದ್ದರಾಮಯ್ಯ ಕಿಡಿ

ನೀಲಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು. ಅವರ ಮಗ ಸಮೀರ್ ಪಾರಿಖ್ ನವಸಾರಿಯಲ್ಲಿ ನೇತ್ರಶಾಸ್ತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತಿ ದಿವಂಗತ ಯೋಗೇಂದ್ರಭಾಯಿ.

ತಾಯಿ ಯಾವುದೇ ಕಾಯಿಲೆಗಳಿಂದ ಬಳಲುತ್ತಿರಲಿಲ್ಲ ಆದರೆ ಕಳೆದ ಕೆಲವು ದಿನಗಳಿಂದ, ಅವರು ವಯಸ್ಸಿನ ಕಾರಣದಿಂದಾಗಿ ಊಟ ಮಾಡುವುದನ್ನು ಬಹುತೇಕ ತ್ಯಜಿಸಿದ್ದರು. ಇಂದು ಯಾಕೋ ಆಸ್ಪತ್ರೆಗೆ ಹೋಗುವ ಮನಸ್ಸಾಗಲಿಲ್ಲ, ನಾನು ಅವರ ಪಕ್ಕದಲ್ಲಿ ಕುಳಿತು ಅವರ ಕೈ ಹಿಡಿದುಕೊಂಡೆ. ಕ್ರಮೇಣ ಅವರ ನಾಡಿಮಿಡಿತ ಕಡಿಮೆಯಾಗುತ್ತಿರುವುದನ್ನು ಗಮನಿಸಿದೆ.

ಯಾವುದೇ ನೋವಿಲ್ಲದೆ ಅಮ್ಮ ಕಣ್ಮುಚ್ಚಿದ್ದಾರೆ ಎಂದು ಮಗ ಸಮೀರ್ ಹೇಳಿದ್ದಾರೆ. ವರು ಕುಟುಂಬದ ಮೇಲೆ ಗಾಂಧಿವಾದಿ ಸಿದ್ಧಾಂತಗಳನ್ನು ಹೇರದಿದ್ದರೂ, ಅವರ ವೈಯಕ್ತಿಕ ಮೌಲ್ಯಗಳೇ ಅವರ ಜೀವನದಲ್ಲಿ ಅವರಿಗೆ ಸ್ಫೂರ್ತಿ ನೀಡಿತು ಎಂದು ಡಾ. ಪಾರಿಖ್ ಹೇಳಿದರು.

ಯೋಗೇಂದ್ರಭಾಯಿ ಮತ್ತು ನೀಲಂಬೆನ್ 1955 ರಲ್ಲಿ ಪದವಿ ಪಡೆದ ನಂತರ ಬಾಂಬೆಯನ್ನು ತೊರೆದರು. ಅವರು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಾ ತಮ್ಮ ಜೀವನವನ್ನು ಕಳೆಯಲು ನಿರ್ಧರಿಸಿದ್ದರು. ಸ್ವಲ್ಪ ಕಾಲ ವಿನೋಬಾ ಭಾವೆ ಅವರ ಭೂದಾನ ಚಳವಳಿಯಲ್ಲಿ ಸೇರಿಕೊಂಡರು. ಅವರು 1962 ರಲ್ಲಿ ದಕ್ಷಿಣ ಗುಜರಾತ್‌ನ ವ್ಯಾರಾಗೆ ಸ್ಥಳಾಂತರಗೊಳ್ಳುವ ಮೊದಲು ಒಡಿಶಾದ ದೂರದ ಹಳ್ಳಿಯಲ್ಲಿ ವಾಸಿಸುತ್ತಿದ್ದರು.ಆರಂಭದಲ್ಲಿ, ಅವರು ತಾಪಿ ಜಿಲ್ಲೆಯ ದೂರದ ಹಳ್ಳಿಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು ಎಂದು ಮಗ ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:48 am, Wed, 2 April 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ