AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಕೊಂದು ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯ ಬಂಧನ

ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿ ಸ್ನೇಹಿತನ ಸಹಾಯದಿಂದ ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗಂಡನಿಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಇದೇ ವಿಚಾರವನ್ನಿಟ್ಟುಕೊಂಡು ಪದೇ ಪದೇ ಜಗಳವಾಡುತ್ತಿದ್ದಳು. ಈ ಕಾರಣಕ್ಕೆ ಆತ ಪತ್ನಿಯನ್ನು ಕೊಲ್ಲಲು ಬಯಸಿದ್ದ. ಬಳಿಕ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ.

ಗುಜರಾತ್: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಕೊಂದು ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯ ಬಂಧನ
ಕ್ರೈಂ
ನಯನಾ ರಾಜೀವ್
|

Updated on: Oct 24, 2025 | 12:08 PM

Share

ಅಹಮದಾಬಾದ್, ಅಕ್ಟೋಬರ್ 24: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ(Murder) ಮಾಡಿ ಸ್ನೇಹಿತನ ಸಹಾಯದಿಂದ ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗಂಡನಿಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿದೆ ಎನ್ನುವ  ವಿಚಾರವನ್ನಿಟ್ಟುಕೊಂಡು ಪದೇ ಪದೇ ಜಗಳವಾಡುತ್ತಿದ್ದಳು. ಈ ಕಾರಣಕ್ಕೆ ಆತ ಪತ್ನಿಯನ್ನು ಕೊಲ್ಲಲು ಬಯಸಿದ್ದ. ಬಳಿಕ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ.

ಈ ಘಟನೆ ಸರ್ದಾರ್ಪುರ್ ಗ್ರಾಮದಲ್ಲಿ ನಡೆದಿದ್ದು, ಗ್ರಾಮದ ಹೊರವಲಯದಲ್ಲಿ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ನಾನಿಯಾ ಸಾಸ್ತೆ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಬೇರೆ ಮಹಿಳೆಯೊಂದಿಗಿನ ಸಂಬಂಧದ ಬಗ್ಗೆ ಪತ್ನಿ ನಿಯತಿ ಜೊತೆ ಆಗಾಗ ಜಗಳವಾಡುತ್ತಿದ್ದ ಮತ್ತು ತನ್ನ ಪ್ರೇಯಸಿಯೊಂದಿಗೆ ಇರಲು ಪತ್ನಿಯನ್ನು ಬಿಟ್ಟು ಹೋಗಲು ನಿರ್ಧರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 18 ರಂದು, ರಾತ್ರಿ 8 ಗಂಟೆ ಸುಮಾರಿಗೆ, ನಾನಿಯಾ ಸಾಸ್ಟೆ ಜಮೀನಿನಲ್ಲಿ ನಿಯತಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ, ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಈ ಜಗಳದಲ್ಲಿ, ಆತ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಕೋಲ್ಕತ್ತಾದ ಆರ್​​ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಅಪ್ರಾಪ್ತ ಸೋದರಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲೆಯ ನಂತರ, ಅಪರಾಧದ ಸಾಕ್ಷ್ಯಗಳನ್ನು ನಾಶಪಡಿಸಲು ನಾನಿಯಾ ಸಾಸ್ತೆ ತನ್ನ ಸ್ನೇಹಿತ ಜೇನು ಸೋಲಂಕಿಯಿಂದ ಸಹಾಯ ಕೋರಿದ್ದಾನೆ ಎಂದು ಹೇಳಲಾಗುತ್ತದೆ. ಮಧ್ಯಪ್ರದೇಶದಲ್ಲಿ ಕ್ರಿಮಿನಲ್ ದಾಖಲೆ ಹೊಂದಿರುವ ಸೋಲಂಕಿಯನ್ನೂ ಬಂಧಿಸಲಾಯಿತು. ಇಬ್ಬರೂ ಶಂಕಿತರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ