AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಲ್​ಎ ಜಿಗ್ನೇಶ್​ ಮೇವಾನಿಗೆ ಜಾಮೀನು; ಆದ್ರೆ ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಮಹಿಳಾ ಪೊಲೀಸ್ ಅಧಿಕಾರಿ

ಪ್ರಕರಣದ ವಿಚಾರಣೆ ನಡೆಸಿದ್ದ ಬಾರಾಪೇಟಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಅಪರೇಶ್​ ಚಕ್ರವರ್ತಿ, ಶಾಸಕ ಜಿಗ್ನೇಶ್​ ಮೇವಾನಿಗೆ ಬೇಲ್​ ನೀಡಿದ್ದಾರೆ

ಎಂಎಲ್​ಎ ಜಿಗ್ನೇಶ್​ ಮೇವಾನಿಗೆ ಜಾಮೀನು; ಆದ್ರೆ ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಮಹಿಳಾ ಪೊಲೀಸ್ ಅಧಿಕಾರಿ
ಜಿಗ್ನೇಶ್ ಮೇವಾನಿ
TV9 Web
| Updated By: Lakshmi Hegde|

Updated on: May 01, 2022 | 1:33 PM

Share

ಗುವಾಗಹಟಿ: ಮಹಿಳಾ ಪೊಲೀಸ್ ಸಬ್​ ಇನ್ಸ್​​ಪೆಕ್ಟರ್​ ಒಬ್ಬರು ನೀಡಿದ್ದ ಹಲ್ಲೆ ದೂರಿನ ಅನ್ವಯ ಪೊಲೀಸರಿಂದ ಬಂಧಿತರಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು ಸಿಕ್ಕಿದೆ. ಆದರೆ ಈ ಮಹಿಳಾ ಪೊಲೀಸ್ ಅಧಿಕಾರಿ ಜಿಗ್ನೇಶ್​ರನ್ನು ಇಲ್ಲಿಗೇ ಬಿಟ್ಟುಬಿಡುವಂತೆ ಕಾಣುತ್ತಿಲ್ಲ. ಮೇವಾನಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ, ಮತ್ತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.  ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಜಿಗ್ನೇಶ್​ ಮೇವಾನಿಯವರನ್ನು ಪೊಲೀಸರು ವಾಹನದಲ್ಲಿ ಕರೆದುಕೊಂಡು ಹೋಗುವಾಗ, ಇಬ್ಬರು ಪುರುಷ ಪೊಲೀಸ್​ ಸಿಬ್ಬಂದಿಯ ಎದುರಿಗೇ, ಜಿಗ್ನೇಶ್ ಮೇವಾನಿ ತಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂಬುದು ಈ ಮಹಿಳಾ ಅಧಿಕಾರಿಯ ದೂರಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ಬಾರಾಪೇಟಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಅಪರೇಶ್​ ಚಕ್ರವರ್ತಿ, ಶಾಸಕ ಜಿಗ್ನೇಶ್​ ಮೇವಾನಿಗೆ ಬೇಲ್​ ನೀಡಿದ್ದಾರೆ. ಚಲಿಸುವ ವಾಹನದಲ್ಲಿ ಪುರುಷ ಪೊಲೀಸ್ ಅಧಿಕಾರಿಗಳ ಎದುರೇ, ಮಹಿಳಾ ಅಧಿಕಾರಿಯ ಮೇಲೆ ಮೇವಾನಿ ಹಲ್ಲೆ ನಡೆಸಲು ಪ್ರಯತ್ನ ಪಟ್ಟಿದ್ದಾರೆ ಎಂಬ ಎಫ್​ಐಆರ್ ಸುಳ್ಳು ಎಂದು ಆದೇಶ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಅಸ್ಸಾಂ ಮುಖ್ಯಮಂತ್ರಿ, ಜಿಲ್ಲಾ ನ್ಯಾಯಾಧೀಶರು ಅವರ ತೀರ್ಪು ನೀಡಿದ್ದಾರೆ. ಆದರೆ ಈಗ ಮಹಿಳಾ ಪೊಲೀಸ್ ಅಧಿಕಾರಿ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ಅದಕ್ಕಾಗಿ ನನ್ನ ಅನುಮತಿಯನ್ನೂ ಕೇಳಿದ್ದಾರೆ. ಅವರು ಅನುಮತಿ ಕೇಳಿ ಮನವಿ ಮಾಡಿದ ಅರ್ಜಿ, ದೂರಿನ ವಿವರಗಳನ್ನೊಳಗೊಂಡ ಫೈಲ್​ ನನ್ನ ಎದುರು ಇದೆ. ನಾನು ಅನುಮೋದನೆ ಕೊಟ್ಟ ತಕ್ಷಣ ಪೊಲೀಸ್​ ಅಧಿಕಾರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜಿಗ್ನೇಶ್ ಮೇವಾನಿ ಮೊದಲು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನಿರಂತರವಾಗಿ ಅವಹೇಳನಕಾರಿ ಟ್ವೀಟ್​​ಗಳನ್ನು ಮಾಡಿ, ಪೊಲೀಸರಿಂದ ಬಂಧಿತರಾಗಿದ್ದರು. ಆ ಪ್ರಕರಣದಲ್ಲಿ ಜಾಮೀನು ಸಿಕ್ಕಿ, ಲಾಕಪ್​ನಿಂದ ಹೊರಬರುತ್ತಿದ್ದಂತೆ ಈ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದರು. ಕಳೆದ 9-10ದಿನಗಳಿಂದಲೂ ಪೊಲೀಸ್​ ಕಸ್ಟಡಿಯಲ್ಲೇ ಇದ್ದ ಮೇವಾನಿಗೆ ಸದ್ಯ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ: Skin Care: ನಿಮ್ಮ ಈ ಹವ್ಯಾಸಗಳೇ ಚರ್ಮದ ಆರೋಗ್ಯಕ್ಕೆ ಮುಳುವಾಗಬಹುದು; ಏನೇನದು? ಇಲ್ಲಿದೆ ನೋಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ