AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ವಿರುದ್ಧ ನಿಂದನಾತ್ಮಕ ಪೋಸ್ಟ್​ ಹಾಕಿ ಜೈಲು ಸೇರಿದ್ದ ಗುಜರಾತ್​ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು

ದೂರು ನೀಡಿದ್ದ ಬಿಜೆಪಿ ನಾಯಕ ಅರೂಪ್​ ಕುಮಾರ್ ಡೇ, ಮೇವಾನಿ ಟ್ವೀಟ್​ಗಳೆಲ್ಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನರ ಭಾವನೆಗಳನ್ನು ಕೆರಳಿಸುವಂತೇ ಇರುತ್ತವೆ ಎಂದು ಹೇಳಿದ್ದರು.

ಪ್ರಧಾನಿ ವಿರುದ್ಧ ನಿಂದನಾತ್ಮಕ ಪೋಸ್ಟ್​ ಹಾಕಿ ಜೈಲು ಸೇರಿದ್ದ ಗುಜರಾತ್​ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು
ಜಿಗ್ನೇಶ್ ಮೇವಾನಿ
TV9 Web
| Edited By: |

Updated on: Apr 25, 2022 | 4:15 PM

Share

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ನಿಂದನಾತ್ಮಕ ಟ್ವೀಟ್​ಗಳನ್ನು ಮಾಡಿ, ಜೈಲು ಸೇರಿದ್ದ ದಲಿತ ಮುಖಂಡ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ  ಇಂದು ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿದೆ.  ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅಂತಿಮವಾಗಿ ಜಿಗ್ನೇಶ್ ಮೇವಾನಿಗೆ ಬೇಲ್​ ಸಿಕ್ಕಿದೆ.  ನಾಲ್ಕು ದಿನಗಳ ಹಿಂದೆ ಅಂದರೆ ಗುರುವಾರ ಗುಜರಾತ್​ನ ಪಾಲನ್​ಪುರದಲ್ಲಿರುವ ಸರ್ಕೀಟ್​ ಹೌಸ್​​ನಲ್ಲಿ ಜಿಗ್ನೇಶ್​ರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೀಳಾಗಿ ಹಲವು ಟ್ವೀಟ್​​ಗಳನ್ನು ಮಾಡಿದ್ದ ಮೇವಾನಿ ವಿರುದ್ಧ ಅಸ್ಸಾಂನ ಕೊಕ್ರಾಝರ್​​ನ ಬಿಜೆಪಿ ನಾಯಕ ಅರೂಪ್​ ಕುಮಾರ್ ಡೇ ದೂ​ರು ನೀಡಿದ್ದರು. ಎಫ್​ಐಆರ್​ ಕೂಡ ದಾಖಲಾಗಿತ್ತು. ಆದರೆ ತಮ್ಮ ಬಂಧನವನ್ನು ಜಿಗ್ನೇಶ್ ಮೇವಾನಿ ಖಂಡಿಸಿದ್ದರು. ಪ್ರಧಾನಿ ಕಾರ್ಯಾಲಯ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದರು.

ಇಂದು ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಜಿಗ್ನೇಶ್ ಮೇವಾನಿ, ನನ್ನ ಪ್ರತಿಷ್ಠೆಯನ್ನು ಕುಂದಿಸಲು ಬಿಜೆಪಿ ಮತ್ತು ಆರ್​ಎಸ್​ಎಸ್​ನಿಂದ ಕುತಂತ್ರ ನಡೆಯುತ್ತಿದೆ. ನನ್ನ ವಿರುದ್ಧ ವ್ಯವಸ್ಥಿತವಾಗಿ ಬಲೆ ಹೆಣೆದಿದ್ದಾರೆ. ಅಂದು ಚಂದ್ರಶೇಖರ್ ಆಜಾದ್​, ರೋಹಿತ್ ವೇಮುಲಾಗೇ ಮಾಡಿದ್ದನ್ನೇ ನನಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.  ಅಂದಹಾಗೇ, ಜಿಗ್ನೇಶ್ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಶಾಂತಿ ಭಂಗಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಅವರನ್ನ ಬಂಧಿಸಲಾಗಿತ್ತು.

ಇನ್ನು ದೂರು ನೀಡಿದ್ದ ಬಿಜೆಪಿ ನಾಯಕ ಅರೂಪ್​ ಕುಮಾರ್ ಡೇ, ಮೇವಾನಿ ಟ್ವೀಟ್​ಗಳೆಲ್ಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನರ ಭಾವನೆಗಳನ್ನು ಕೆರಳಿಸುವಂತೇ ಇರುತ್ತವೆ ಎಂದು ಹೇಳಿದ್ದರು. ಬಳಿಕ ಮಾಧ್ಯಮವೊಂದರ ಜತೆಗೆ ಮಾತನಾಡಿದ್ದ ಅವರು, ಜಿಗ್ನೇಶ್ ಮೇವಾನಿ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಕೆಟ್ಟದಾಗಿ ಬಿಂಬಿಸುತ್ತಿದ್ದಾರೆ. ನರೇಂದ್ರ ಮೋದಿಯವರಂಥ ಪ್ರಧಾನಿಯನ್ನು ಪಡೆಯಲು ನಾವು ಪುಣ್ಯ ಮಾಡಿರಬೇಕು. ಆದರೆ ಯಾವುದೇ ಹಿಂಸಾಚಾರವಾದರೂ ಅದಕ್ಕೆ ಮೋದಿಯವರ ಹೆಸರು ತರುತ್ತಾರೆ. ಪ್ರಧಾನಿ ಹೇಗೆ ಕಾರಣರಾಗುತ್ತಾರೆ ಎಂದು ಪ್ರಶ್ನಿಸಿದ್ದರು.

ಗುಜರಾತ್​ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿಯವರ ಬಂಧನವನ್ನು ಕಾಂಗ್ರೆಸ್ ವಿರೋಧಿಸಿತ್ತು. ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮೋದಿ ಜೀ ನೀವು ನಿಮ್ಮ ವಿರುದ್ಧ ಭಿನ್ನಾಭಿಪ್ರಾಯ ಹೊಂದಿರುವವರನ್ನು ಹತ್ತಿಕ್ಕಲು ಪ್ರಯತ್ನ ಮಾಡಬಹುದು. ಆದರೆ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದಿದ್ದರು.

ಇದನ್ನೂ ಓದಿ: viral video: ಸದ್ದಿಲ್ಲದೆ ಆಸ್ಟ್ರೇಲಿಯಾದ ಬಾರ್​ವೊಂದಕ್ಕೆ ಎಂಟ್ರಿ ಕೊಟ್ಟ ಕಾಂಗರೂ; ಮುಂದೇನಾಯ್ತು..!

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ