AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಕ್ಕಿ ಜೈಲಿಂದ ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಗುಜರಾತ್ ಶಾಸಕ ಜಿಗ್ನೇಶ್​ ಮೇವಾನಿ

ಜಿಗ್ನೇಶ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅಂತಿಮವಾಗಿ ಬೇಲ್​ ಕೊಟ್ಟಿತ್ತು. ಬೇಲ್​ ಸಿಕ್ಕ ಬೆನ್ನಲ್ಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಜಿಗ್ನೇಶ್​, ನನ್ನ ಪ್ರತಿಷ್ಠೆಯನ್ನು ಕುಂದಿಸಲು ಬಿಜೆಪಿ ಮತ್ತು ಆರ್​ಎಸ್​ಎಸ್​ನಿಂದ ಕುತಂತ್ರ ನಡೆಯುತ್ತಿದೆ ಎಂದಿದ್ದರು.

ಜಾಮೀನು ಸಿಕ್ಕಿ ಜೈಲಿಂದ ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಗುಜರಾತ್ ಶಾಸಕ ಜಿಗ್ನೇಶ್​ ಮೇವಾನಿ
ಜಿಗ್ನೇಶ್ ಮೇವಾನಿ
TV9 Web
| Updated By: Lakshmi Hegde|

Updated on: Apr 25, 2022 | 4:47 PM

Share

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹಲವು ನಿಂದನಾತ್ಮಕ ಟ್ವೀಟ್​ಗಳನ್ನು ಮಾಡಿ ನಾಲ್ಕು ದಿನಗಳ ಹಿಂದೆ  ಜೈಲು ಸೇರಿದ್ದ ದಲಿತ ಮುಖಂಡ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ  ಇಂದು ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿತ್ತು.  ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅಂತಿಮವಾಗಿ ಜಿಗ್ನೇಶ್ ಮೇವಾನಿಗೆ ಬೇಲ್​ ಸಿಕ್ಕು, ಅವರು ಜೈಲಿನಿಂದ ಹೊರಬಂದಿದ್ದರು. ಆದರೆ ಈಗ ಮತ್ತೊಂದು ಕೇಸ್​​ನಲ್ಲಿ ಮತ್ತೊಮ್ಮೆ ಜಿಗ್ನೇಶ್ ಮೇವಾನಿ ಬಂಧನವಾಗಿದೆ. ಈ ಬಾರಿ ಅಸ್ಸಾಂನ ಬಾರ್ಪೇಟಾ ಪೊಲೀಸರು ಜಿಗ್ನೇಶ್​ರನ್ನು ಬಂಧಿಸಿದ್ದಾರೆ. ಆದರೆ ಈಗ ಜಿಗ್ನೇಶ್ ಬಂಧನವಾಗಿದ್ದೇಕೆ ಎಂಬ ಬಗ್ಗೆ ಅವರು ಮಾಹಿತಿ ನೀಡಿಲ್ಲ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೀಳಾಗಿ ಹಲವು ಟ್ವೀಟ್​​ಗಳನ್ನು ಮಾಡಿದ್ದ ಮೇವಾನಿ ವಿರುದ್ಧ ಅಸ್ಸಾಂನ ಕೊಕ್ರಾಝರ್​​ನ ಬಿಜೆಪಿ ನಾಯಕ ಅರೂಪ್​ ಕುಮಾರ್ ಡೇ ದೂ​ರು ನೀಡಿದ್ದರು. ಎಫ್​ಐಆರ್​ ಕೂಡ ದಾಖಲಾಗಿತ್ತು. ಹೀಗಾಗಿ ಗುರುವಾರ  ಆದರೆ ತಮ್ಮ ಬಂಧನವನ್ನು ಜಿಗ್ನೇಶ್ ಮೇವಾನಿ ಖಂಡಿಸಿದ್ದರು. ಪ್ರಧಾನಿ ಕಾರ್ಯಾಲಯ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದರು. ಗುಜರಾತ್​ನ ಪಾಲನ್​ಪುರದಲ್ಲಿರುವ ಸರ್ಕೀಟ್​ ಹೌಸ್​​ನಲ್ಲಿ ಜಿಗ್ನೇಶ್​ರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಜಿಗ್ನೇಶ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಅಂತಿಮವಾಗಿ ಬೇಲ್​ ಕೊಟ್ಟಿತ್ತು. ಬೇಲ್​ ಸಿಕ್ಕ ಬೆನ್ನಲ್ಲೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಜಿಗ್ನೇಶ್​, ನನ್ನ ಪ್ರತಿಷ್ಠೆಯನ್ನು ಕುಂದಿಸಲು ಬಿಜೆಪಿ ಮತ್ತು ಆರ್​ಎಸ್​ಎಸ್​ನಿಂದ ಕುತಂತ್ರ ನಡೆಯುತ್ತಿದೆ. ನನ್ನ ವಿರುದ್ಧ ವ್ಯವಸ್ಥಿತವಾಗಿ ಬಲೆ ಹೆಣೆದಿದ್ದಾರೆ. ಅಂದು ಚಂದ್ರಶೇಖರ್ ಆಜಾದ್​, ರೋಹಿತ್ ವೇಮುಲಾಗೇ ಮಾಡಿದ್ದನ್ನೇ ನನಗೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇನ್ನೊಂದೆಡೆ ದೂರು ಕೊಟ್ಟಿದ್ದ ಬಿಜೆಪಿ ನಾಯಕ, ಮೇವಾನಿ ಟ್ವೀಟ್​ಗಳೆಲ್ಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನರ ಭಾವನೆಗಳನ್ನು ಕೆರಳಿಸುವಂತೇ ಇರುತ್ತವೆ ಎಂದು ಹೇಳಿದ್ದರು. ಬಳಿಕ ಮಾಧ್ಯಮವೊಂದರ ಜತೆಗೆ ಮಾತನಾಡಿದ್ದ ಅವರು, ಜಿಗ್ನೇಶ್ ಮೇವಾನಿ ಸಮಾಜವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಸುಖಾಸುಮ್ಮನೆ ಸರ್ಕಾರವನ್ನು ದೂರುವ ಬದಲು ನ್ಯೂನತೆಗಳಿದ್ದರೆ ಹೇಳಲಿ, ಸರಿಪಡಿಸುತ್ತೇವೆ: ಕೋಟ ಶ್ರೀನಿವಾಸ ಪೂಜಾರಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!