AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat bridge: ‘ಬಳಕೆ ಯೋಗ್ಯ’ ಪ್ರಮಾಣಪತ್ರ ಪಡೆಯದೆ ಕೇಬಲ್ ಸೇತುವೆ ಮೇಲೆ ಸಾರ್ವಜನಿಕರ ಓಡಾಟಕ್ಕೆ ಅವಕಾಶ

ಶತಮಾನದಷ್ಟು ಹಳೆಯ ಕೇಬಲ್ ಸೇತುವೆ ನವೀಕರಣದ ನಂತರ ಬಳಕೆ ಯೋಗ್ಯ ಪ್ರಮಾಣಪತ್ರ ಪಡೆಯದೆ ನೇರವಾಗಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂಬ ವಿಚಾರ ತಿಳಿದುಬಂದಿದೆ.

Gujarat bridge: 'ಬಳಕೆ ಯೋಗ್ಯ' ಪ್ರಮಾಣಪತ್ರ ಪಡೆಯದೆ ಕೇಬಲ್ ಸೇತುವೆ ಮೇಲೆ ಸಾರ್ವಜನಿಕರ ಓಡಾಟಕ್ಕೆ ಅವಕಾಶ
ಗುಜರಾತ್: ಮೊರ್ಬಿ ಕೇಬಲ್ ಸೇತುವೆ ಕುಸಿತ
TV9 Web
| Edited By: |

Updated on:Oct 31, 2022 | 11:59 AM

Share

ಗಾಂಧಿನಗರ: ಗುಜರಾತ್‌ನ ಮೊರ್ಬಿ ನಗರದಲ್ಲಿ ಕುಸಿದ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣಕಾರರು ಮಾಡಿದ ಈ ಒಂದು ಎಡವಟ್ಟು ಜನರ ಪ್ರಾಣ ಹಿಂಡಿತೇ ಎಂಬ ಪ್ರಶ್ನೆ ಎದ್ದಿದೆ. ಸೇತುವೆ ನವೀಕರಣದ ನಂತರ ಸಾರ್ವಜನಿಕರ ಬಳಕೆಗೆ ಅವಕಾಶ ನೀಡುವ ಮುನ್ನ ಅದು ಬಳಕೆಗೆ ಯೋಗ್ಯವಾಗಿದೆಯೇ ಎಂಬುದನ್ನು ತಿಳಿದುಕೊಳ್ಳಬೇಕಿತ್ತು. ಈ ಬಗ್ಗೆ ಅಧಿಕಾರಿಗಳು ಪರೀಕ್ಷೆ ನಡೆಸಿ ಪ್ರಮಾಣಪತ್ರವನ್ನು ನೀಡುತ್ತಾರೆ. ಆದರೆ ಈ ಸೇತುವೆ ನವೀಕರಣದ ವಿಚಾರದಲ್ಲಿ ನವೀಕರಣ ಮಾಡಿದ ಖಾಸಗಿ ಸಂಸ್ಥೆ ಪರೀಕ್ಷೆಗೆ ಮುಂದಾಗಿಲ್ಲ. ಬದಲಾಗಿ ನವೀಕರಣದ ನಂತರ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂಬ ವಿಚಾರ ಇದೀಗ ತಿಳಿದುಬಂದಿದೆ. ನವೀಕರಣದ ನಂತರ ಸೇತುವೆಯನ್ನು ಪುನಃ ತೆರೆಯುವ ಮೊದಲು ಅಧಿಕಾರಿಗಳಿಂದ ಬಳಕೆಗೆ ಯೋಗ್ಯ ಪ್ರಮಾಣಪತ್ರವನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯ ಪುರಸಭೆಯ ಮುಖ್ಯಸ್ಥರು ಸುದ್ದಿಸಂಸ್ಥೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಒರೆವಾ ಎಂಬ ಖಾಸಗಿ ಟ್ರಸ್ಟ್ ಸರ್ಕಾರದ ಟೆಂಡರ್ ಪಡೆದು ಸೇತುವೆಯನ್ನು ನವೀಕರಿಸಿದೆ. ನವೀಕರಣಕ್ಕಾಗಿ ಸೇತುವೆಯನ್ನು ಏಳು ತಿಂಗಳಿನಿಂದ ಮುಚ್ಚಲಾಗಿತ್ತು. ನವೀಕರಣ ಪೂರ್ಣಗೊಂಡು ಅಕ್ಟೋಬರ್ 26 ರಂದು ಮತ್ತೆ ತೆರೆಯಲಾಯಿತು.

“ಇದು ಸರ್ಕಾರಿ ಟೆಂಡರ್ ಆಗಿತ್ತು. ನವೀಕರಣ ಮಾಡಿದ ಓರೆವಾ ಗ್ರೂಪ್ ಸೇತುವೆಯನ್ನು ತೆರೆಯುವ ಮೊದಲು ಅದರ ನವೀಕರಣದ ವಿವರಗಳನ್ನು ನೀಡಿ ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕಾಗಿತ್ತು. ಆದರೆ ಅದು ಹಾಗೆ ಮಾಡಲಿಲ್ಲ. ಸರ್ಕಾರಕ್ಕೆ ಈ ಬಗ್ಗೆ ತಿಳಿದಿರಲಿಲ್ಲ” ಮೋರ್ಬಿ ಮುನ್ಸಿಪಲ್ ಏಜೆನ್ಸಿ ಮುಖ್ಯಸ್ಥ ಸಂದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

ಭಾನುವಾರ (ಅ30) ಸಂಜೆ ವೇಳೆ ಸೇತುವೆ ಮೇಲೆ ಮಿತಿಗೂ ಮೀರಿ ನೂರಾರು ಜನರು ನಿಂತಿದ್ದರು ಮತ್ತು ಓಟಾಡ ನಡೆಸುತ್ತಿದ್ದರು. ಇದರಿಂದಾಗಿ ಸೇತುವೆ ಕುಸಿದುಬಿದ್ದಿದೆ ಎನ್ನಲಾಗಿದೆ. ಕೂಡಲೇ ರಕ್ಷಣ ಕಾರ್ಯ ಆರಂಭಿಸಲಾಗಿದ್ದು, ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಸೇನೆಯ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಭಾರತೀಯ ವಾಯುಪಡೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು, ನದಿಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಘಟನೆಯಲ್ಲಿ 90ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Mon, 31 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ