AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊರ್ಬಿ ಸೇತುವೆ ಕುಸಿತ: ಮೃತರ ಕುಟುಂಬಕ್ಕೆ ತಲಾ 2ಲಕ್ಷ ಪರಿಹಾರ ಘೋಷಣೆ; ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ

ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿತ ಪ್ರಕರಣವು ರಾಜಕೀಯ ಕೆಸರೆರೆಚಾಟಕ್ಕೆ ಎಡೆಮಾಡಿಕೊಟ್ಟಿದೆ. ರಾಷ್ಟ್ರಪತಿ, ಪ್ರಧಾನಿಯವರು ದುಃಖ ವ್ಯಕ್ತಪಡಿಸಿದರೆ, ವಿಪಕ್ಷಗಳು ಟೀಕೆಯಲ್ಲಿ ನಿರತವಾಗಿವೆ.

ಮೊರ್ಬಿ ಸೇತುವೆ ಕುಸಿತ: ಮೃತರ ಕುಟುಂಬಕ್ಕೆ ತಲಾ 2ಲಕ್ಷ ಪರಿಹಾರ ಘೋಷಣೆ; ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ
ಮೊರ್ಬಿ ಸೇತುವೆ ಕುಸಿತ
TV9 Web
| Edited By: |

Updated on:Oct 31, 2022 | 12:00 PM

Share

ಗಾಂಧಿನಗರ: ಭಾನುವಾರ ಗುಜರಾತ್‌ನ ಮೊರ್ಬಿ ನಗರದಲ್ಲಿ ಸೇತುವೆ ಕುಸಿದು ಸಾವುನೋವು ಸಂಭವಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಹಲವಾರು ಗಣ್ಯ ನಾಯಕರು ದುಃಖ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ರಾಜ್ಯದ ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ರಕ್ಷಣಾ ಕಾರ್ಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಮನವಿ ಮಾಡಿದರು. ಘಟನೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಆದಾಗ್ಯೂ ಕೆಲವು ಪಕ್ಷದ ನಾಯಕರು ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿಯನ್ನು ಟೀಕಿಸಿದರು. ಈ ಘಟನೆಯನ್ನು “ಮಾನವ ನಿರ್ಮಿತ ದುರಂತ” ಎಂದು ಕಾಂಗ್ರೆಸ್​ನ ರಾಷ್ಟ್ರೀಯ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಬಣ್ಣಿಸಿದರು.

2016ರ ಮಾರ್ಚ್ 31ರಂದು ಕೋಲ್ಕತಾದಲ್ಲಿ ವಿವೇಕಾನಂದ ರಸ್ತೆಯ ಮೇಲ್ಸೇತುವೆ ಕುಸಿದು ಅನೇಕರನ್ನು ಬಲಿತೆಗೆದುಕೊಂಡ ನಂತರ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವನ್ನು ಅಣಕಿಸುವ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಬಳಸಿದ್ದಾರೆ ಎಂದು ಹೇಳುತ್ತಾ, ಈ ಘಟನೆಯು “ದೇವರ ಕೃತ್ಯವೋ ಅಥವಾ ವಂಚನೆಯ ಕೃತ್ಯವೋ” ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರಶ್ನಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಎಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸಿದರು. “ಗುಜರಾತ್‌ನ ಮೋರ್ಬಿಯಲ್ಲಿ ನಡೆದ ದುರಂತ ಘಟನೆಯ ಬಗ್ಗೆ ಕೇಳಿ ದುಃಖಿತನಾಗಿದ್ದೇನೆ. ಎಲ್ಲರನ್ನು ಸುರಕ್ಷಿತವಾಗಿ ರಕ್ಷಿಸಲು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ. ನನ್ನ ಆಲೋಚನೆಗಳು ಸಂತ್ರಸ್ತ ಕುಟುಂಬಗಳೊಂದಿಗೆ ಇವೆ” ಎಂದು ಧನಕರ್ ಅವರನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಇನ್ನು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಘಟನೆ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಮೋದಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಎಲ್ಲಾ ಅಗತ್ಯ ನೆರವು ನೀಡಲಾಗುತ್ತಿದೆ” ಎಂದು ಹೇಳಿದರು. ರಾಷ್ಟ್ರಪತಿ ಮುರ್ಮು ಟ್ವೀಟ್‌ ಮಾಡಿ, “ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ನನ್ನನ್ನು ಚಿಂತೆಗೀಡು ಮಾಡಿದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತ ಜನರೊಂದಿಗೆ ಇವೆ” ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಮ್ ಆದ್ಮಿ ಪಕ್ಷವು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸರ್ವಪ್ರಯತ್ನ ನಡೆಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ, “ಗುಜರಾತ್​ನಿಂದ ಬಹಳ ದುಃಖದ ಸುದ್ದಿ ಬರುತ್ತಿದೆ. ಮೋರ್ಬಿಯಲ್ಲಿ ಸೇತುವೆ ಕುಸಿದು ಅನೇಕ ಜನರು ನದಿಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಪ್ರತಿಯೊಬ್ಬರ ಜೀವನ ಮತ್ತು ಯೋಗಕ್ಷೇಮಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದರು.

ಸುಮಾರು ನಾಲ್ಕು ದಿನಗಳ ಹಿಂದೆ ಹಳೆಯ ಸೇತುವೆಯನ್ನು ನವೀಕರಿಸಲಾಗಿತ್ತು. ಬಳಿಕೆ ಅ.26ರಂದು ಸೇತುವೆ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆ ಮೇಲೆ ನಿಂತಿದ್ದರಿಂದ ಭಾನುವಾರ ಸಂಜೆ 6.30 ರ ಸುಮಾರಿಗೆ ಸೇತುವೆ ಕುಸಿದಿದೆ ಎನ್ನಲಾಗುತ್ತಿದ್ದು, ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 am, Mon, 31 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ