AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬಾಕಿ ಸಂಬಳವನ್ನು ಕೇಳಿದ್ದಕ್ಕೆ ದಲಿತ ಸಿಬ್ಬಂದಿ ಬಾಯಿಗೆ ಚಪ್ಪಲಿ ಹಾಕಿದ ಮಹಿಳಾ ಉದ್ಯಮಿ

ಬಾಕಿ ಸಂಬಳವನ್ನು ಕೊಡುವಂತೆ ಕೇಳಿದ್ದಕ್ಕೆ ಮಹಿಳಾ ಉದ್ಯಮಿಯೊಬ್ಬರು ಮಾಜಿ ಉದ್ಯೋಗಿಯೊಬ್ಬರ ಬಾಯಿಗೆ ಚಪ್ಪಲಿ ಹಾಕಿರುವ ಘಟನೆ ಗುಜರಾತ್​ನ ಮಾರ್ಬಿಯಲ್ಲಿ ನಡೆದಿದೆ. ಬಾಕಿ ಹಣ ಕೊಡಿ ಎಂದಿದ್ದಕ್ಕೆ ದಲಿತ ಉದ್ಯೋಗಿಯ ಬಾಯಿಗೆ ಚಪ್ಪಲಿಯಿಟ್ಟು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು, ಇದೀಗ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ಗುಜರಾತ್: ಬಾಕಿ ಸಂಬಳವನ್ನು ಕೇಳಿದ್ದಕ್ಕೆ ದಲಿತ ಸಿಬ್ಬಂದಿ ಬಾಯಿಗೆ ಚಪ್ಪಲಿ ಹಾಕಿದ ಮಹಿಳಾ ಉದ್ಯಮಿ
ಪೊಲೀಸ್ Image Credit source: Indian Express
ನಯನಾ ರಾಜೀವ್
|

Updated on: Nov 24, 2023 | 1:10 PM

Share

ಬಾಕಿ ಸಂಬಳವನ್ನು ಕೊಡುವಂತೆ ಕೇಳಿದ್ದಕ್ಕೆ ಮಹಿಳಾ ಉದ್ಯಮಿಯೊಬ್ಬರು ಮಾಜಿ ಉದ್ಯೋಗಿಯೊಬ್ಬರ ಬಾಯಿಗೆ ಚಪ್ಪಲಿ ಹಾಕಿರುವ ಘಟನೆ ಗುಜರಾತ್​ನ ಮಾರ್ಬಿಯಲ್ಲಿ ನಡೆದಿದೆ. ಬಾಕಿ ಹಣ ಕೊಡಿ ಎಂದಿದ್ದಕ್ಕೆ ದಲಿತ ಉದ್ಯೋಗಿಯ ಬಾಯಿಗೆ ಚಪ್ಪಲಿಯಿಟ್ಟು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು, ಇದೀಗ ಉದ್ಯಮಿ ವಿರುದ್ಧ ಪ್ರಕರಣ ದಾಖಲಾಗಿದೆ.

ನೀಲೇಶ್ ದಲ್ಸಾನಿಯಾ ಎಂಬುವವರು ವರ ಹಿರಿಯ ಸಹೋದರ ಮೆಹುಲ್ ಮತ್ತು ಅವರ ನೆರೆಯ ಭವೇಶ್ ಮಕ್ವಾನಾ ಅವರು ವಿಭೂತಿ ಪಟೇಲ್ ನಡೆಸುತ್ತಿರುವ ಖಾಸಗಿ ಸಂಸ್ಥೆಯಾದ ರಾಣಿಬಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (RIPL) ಕಚೇರಿಗೆ ಸುಮಾರು 7 ಗಂಟೆಗೆ ಹೋಗಿದ್ದಾರೆ.

ನೀಲೇಶ್ ಅವರು ಅಕ್ಟೋಬರ್‌ನಲ್ಲಿ ಆರ್‌ಐಪಿಎಲ್‌ನ ರಫ್ತು ವಿಭಾಗದಲ್ಲಿ ಕೆಲಸ ಮಾಡಿದ್ದರು 16 ದಿನಗಳ ಸಂಬಳವನ್ನು ಕೇಳಿದ್ದರು. ವಿಭೂತಿಯ ಸಹೋದರ ಎಂದು ಗುರುತಿಸಿಕೊಂಡ ಓಂ ಪಟೇಲ್, ನೀಲೇಶ್ ಮೇಲೆ ಹಲ್ಲೆ ನಡೆಸಿದ್ದಾನೆ.

ಮತ್ತಷ್ಟು ಓದಿ: ರಾಯಚೂರು: ಮಾರಕಾಸ್ತ್ರಗಳಿಂದ ಕೊಚ್ಚಿ, ಮುಂಗೈ ತುಂಡರಸಿ ದಲಿತ ಮುಖಂಡನ ಬರ್ಬರ ಹತ್ಯೆ

ವಿಭೂತಿ ಕಚೇರಿಯಲ್ಲಿ ಮ್ಯಾನೇಜರ್ ಆಗಿದ್ದ ಪರೀಕ್ಷಿತ್ ಪಟೇಲ್ ವಿಭೂತಿ ಮತ್ತು ಇತರ ನಾಲ್ವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಆತನನ್ನು ಲಿಫ್ಟ್‌ಗೆ ಎಳೆದೊಯ್ದು, ವಾಣಿಜ್ಯ ಕಟ್ಟಡದ ಟೆರೇಸ್‌ಗೆ ಕರೆದೊಯ್ದು ಬೆಲ್ಟ್‌ನಿಂದ ಹೊಡೆದಿದ್ದಾರೆ ಮತ್ತು ಒದ್ದಿದ್ದಾರೆ ಎಂದಿದ್ದಾರೆ.

ವಿಭೂತಿ ಪಟೇಲ್ ಚಪ್ಪಲಿಯನ್ನು ಬಾಯಲ್ಲಿ ಹಿಡಿದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಒಂದೊಮ್ಮೆ ಧೈರ್ಯ ಮಾಡಿ ದೂರು ದಾಖಲಿಸಿದ್ದಲ್ಲಿ ಜೀವಂತ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದರು.

ನೀಲೇಶ್​ ಅವರನ್ನು ಅಮಾನವೀಯವಾಗಿ ಥಳಿಸಲಾಗಿದೆ, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್​ಐಆರ್​ ದಾಖಲಿಸಿದ್ದೇವೆ ಆರೋಪಿಯನ್ನು ಬಂಧಿಸಲು ಪ್ರಯತ್ನ ನಡೆಯುತ್ತಿದೆ ಎಂದು ಮೊರ್ಬಿ ಪೊಲೀಸ್ ಉಪ ವರಿಷ್ಠಾಧಿಕಾರಿ ಪ್ರತಪಾಲ್ ಸಿನ್ಹ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ