AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Plane Crash: ಡಿಎನ್​ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಏರ್ ಇಂಡಿಯಾ ಅಪಘಾತದ ಬಗ್ಗೆ ಅಮಿತ್ ಶಾ ಹೇಳಿಕೆ

Amit Shah: ಏರ್ ಇಂಡಿಯಾ ವಿಮಾನ ಪತನವಾದ ಸುದ್ದಿ ತಿಳಿಯುತ್ತಿದ್ದಂತೆ ದೆಹಲಿಯಿಂದ ಅಹಮದಾಬಾದ್​ಗೆ ತೆರಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಮಾನ ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ. ವಿಮಾನ ದುರಂತದಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದರ ಖಚಿತ ಮಾಹಿತಿ ಡಿಎನ್ಎ ಪರೀಕ್ಷೆಯ ಬಳಿಕವೇ ಗೊತ್ತಾಗಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Air India Plane Crash: ಡಿಎನ್​ಎ ಪರೀಕ್ಷೆ ಬಳಿಕ ಸಾವಿನ ಸಂಖ್ಯೆ ಘೋಷಣೆ; ಏರ್ ಇಂಡಿಯಾ ಅಪಘಾತದ ಬಗ್ಗೆ ಅಮಿತ್ ಶಾ ಹೇಳಿಕೆ
Amit Shah In Ahmedabad
Follow us
ಸುಷ್ಮಾ ಚಕ್ರೆ
|

Updated on:Jun 12, 2025 | 10:38 PM

ಅಹಮದಾಬಾದ್, ಜೂನ್ 12: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ (Air India Plane Crash) ವಿಮಾನ AI171 ದುರಂತದ ನಂತರ ಇಡೀ ದೇಶವು ಶೋಕದಲ್ಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ ಅಮಿತ್ ಶಾ, ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ಅಪಘಾತದಲ್ಲಿ ಸಾಕಷ್ಟು ಜನರು ಮೃತಪಟ್ಟಿದ್ದಾರೆ. ಆ ಬಗ್ಗೆ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್​ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

“ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನ AI-171 ಅಪಘಾತಕ್ಕೀಡಾಗಿದ್ದು, ಅನೇಕ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆಗೆ ಇಡೀ ರಾಷ್ಟ್ರವು ದುಃಖಿಸುತ್ತಿದೆ ಮತ್ತು ಮೃತರ ಕುಟುಂಬಗಳೊಂದಿಗೆ ನಿಂತಿದೆ. ಅಪಘಾತ ನಡೆದ 10 ನಿಮಿಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ಸಿಕ್ಕಿತು. ನಾನು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ನಾಗರಿಕ ವಿಮಾನಯಾನ ಸಚಿವರನ್ನು ಸಂಪರ್ಕಿಸಿದೆ. ಪ್ರಧಾನಿ ಕೂಡ ಸ್ವಲ್ಪ ಸಮಯದಲ್ಲೇ ಕರೆ ಮಾಡಿದರು. ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಡಿಎನ್ಎ ಪರಿಶೀಲನೆಯ ನಂತರ ಸಾವಿನ ಸಂಖ್ಯೆಯನ್ನು ಘೋಷಿಸಲಾಗುವುದು. ನಾನು ಈ ಘಟನೆಯಲ್ಲಿ ಬದುಕುಳಿದ ವ್ಯಕ್ತಿಯನ್ನು ಭೇಟಿಯಾದೆ ” ಎಂದು ಅಮಿತ್ ಶಾ ಹೇಳಿದ್ದಾರೆ.

ಇದನ್ನೂ ಓದಿ
Image
ಭಾರತವನ್ನು ಬೆಚ್ಚಿ ಬೀಳಿಸಿದ 8 ಭಯಾನಕ ವಿಮಾನ ದುರಂತಗಳಿವು
Image
ಅಹಮದಾಬಾದ್​​ನಲ್ಲಿ ಏರ್ ಇಂಡಿಯಾ ವಿಮಾನ ಪತನ; 241 ಪ್ರಯಾಣಿಕರ ಸಾವು
Image
ಒಂದು ವಾರದ ಹಿಂದೆಯೇ ವಿಮಾನ ಅಪಘಾತದ ಭವಿಷ್ಯ ನುಡಿದಿದ್ದ ಜ್ಯೋತಿಷಿ!
Image
ನಾಳೆ ಅಹಮದಾಬಾದ್​​ಗೆ ಮೋದಿ ಭೇಟಿ; ಭಾರತಕ್ಕೆ ಸಹಾಯಹಸ್ತ ಚಾಚಿದ ಟ್ರಂಪ್

ಇದನ್ನೂ ಓದಿ: Plane Crashes in India: ಭಾರತವನ್ನು ಬೆಚ್ಚಿ ಬೀಳಿಸಿದ 8 ಭಯಾನಕ ವಿಮಾನ ದುರಂತಗಳಿವು

“ಪ್ರತಿಯೊಂದು ಇಲಾಖೆಯು ಸಮನ್ವಯದಿಂದ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಏರ್ ಇಂಡಿಯಾ ವಿಮಾನವು ಸುಮಾರು 1,25,000 ಲೀಟರ್ ಇಂಧನವನ್ನು ಹೊತ್ತೊಯ್ದಿತ್ತು. ಬೆಂಕಿ ಹೊತ್ತಿ ಉರಿದಾಗ ಆ ಇಂಧನದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಹೆಚ್ಚಿನ ತಾಪಮಾನದಿಂದಾಗಿ ಯಾರನ್ನೂ ಉಳಿಸುವ ಅವಕಾಶವಿರಲಿಲ್ಲ. ನಾನು ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ್ದೆ. ಮೃತ ದೇಹಗಳನ್ನು ಸಂಗ್ರಹಿಸುವಿಕೆ ಬಹುತೇಕ ಪೂರ್ಣಗೊಂಡಿದೆ. ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ವಿದೇಶಗಳಲ್ಲಿರುವ ಕುಟುಂಬ ಸದಸ್ಯರಿಗೂ ಮಾಹಿತಿ ನೀಡಲಾಗಿದೆ. ಸುಮಾರು 1000 ಡಿಎನ್ಎ ಪರೀಕ್ಷೆಗಳನ್ನು ಮಾಡಲಾಗುವುದು. ಮೃತ ದೇಹಗಳ ಡಿಎನ್ಎ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದೆ. ಡಿಎನ್ಎ ಪರೀಕ್ಷೆಗಳ ನಂತರ ಶವಗಳನ್ನು ಹಸ್ತಾಂತರಿಸಲಾಗುವುದು. ಪರಿಶೀಲನಾ ಸಭೆಯಲ್ಲಿ ಪ್ರತಿಯೊಂದು ಅಂಶವನ್ನು ಚರ್ಚಿಸಲಾಯಿತು. ವಿಮಾನಯಾನ ಸಚಿವರು ತನಿಖೆಯನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ: ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು

ಡಿಎನ್‌ಎ ಮಾದರಿ ಪ್ರಸ್ತುತ ನಡೆಯುತ್ತಿದೆ. ಆ ಪ್ರಕ್ರಿಯೆಯ ನಂತರವೇ ಅಧಿಕಾರಿಗಳು ಎಲ್ಲಾ ಮೃತ ಪ್ರಯಾಣಿಕರನ್ನು ಔಪಚಾರಿಕವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಮಿತ್ ಶಾ ಹೇಳಿದರು. ತಮ್ಮ ಭೇಟಿಯ ಸಮಯದಲ್ಲಿ, ಅಮಿತ್ ಶಾ ಅವರು ನಾಗರಿಕ ವಿಮಾನಯಾನ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಗುಜರಾತ್ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ರಕ್ಷಣಾ, ವೈದ್ಯಕೀಯ ಪ್ರತಿಕ್ರಿಯೆ ಮತ್ತು ತನಿಖಾ ಪ್ರಯತ್ನಗಳನ್ನು ಸಂಘಟಿಸಲು ಉನ್ನತ ಮಟ್ಟದ ಸಭೆ ನಡೆಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:23 pm, Thu, 12 June 25