AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ.

ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 20, 2024 | 3:58 PM

Share

ಅಹಮದಾಬಾದ್‌, ಮೇ.20:ಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ (Sardar Vallabhbhai Patel of Ahmedabad) ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಇದೀಗ ಗುಜರಾತ್​​​ ಎಟಿಎಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಲು ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ಟಿವಿ9 ಗುಜರಾತಿ ವರದಿ ಮಾಡಿದೆ. ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಯಾಕೆ ಬಂದಿದ್ದಾರೆ ಎಂಬ ಬಗ್ಗೆ ಇನ್ನು ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಐಪಿಎಲ್ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಿಗಾಗಿ ಮೂರು ತಂಡಗಳು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೊದಲು ಈ ಘಟನೆ ನಡೆದಿದೆ. ಹಾಗಾಗಿ ಈಗಾಗಲೇ ಅಹಮದಾಬಾದ್ ವಿಮಾನ ನಿಲ್ದಾಣ ಹಾಗೂ ಅಕ್ಕಪಕ್ಕದ ನಗರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಾಂಗ್ಲಾದೇಶದಿಂದ ಇಬ್ಬರು ಉಗ್ರರು ಗಡಿ ದಾಟಿ ಭಾರತಕ್ಕೆ ಬಂದಿದ್ದರು, ಅವರನ್ನು ಅಂತರರಾಷ್ಟ್ರೀಯ ಗಡಿಯ ಬಳಿ ಬಂಧಿಸಲಾಯಿತು. ಬಂಧಿತ ಐಸಿಸ್ ಉಗ್ರರನ್ನು ಉತ್ತರಾಖಂಡದ ಡೆಹ್ರಾಡೂನ್ ನಿವಾಸಿ ಹರೀಶ್ ಅಜ್ಮಲ್ ಫಾರೂಕಿ ಅಲಿಯಾಸ್ ಹರೀಶ್ ಅಜ್ಮಲ್ ಫಾರೂಖಿ ಮತ್ತು ಹರಿಯಾಣದ ಪಾಣಿಪತ್ ನಿವಾಸಿ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಛತ್ತೀಸ್‌ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು

ಇಬ್ಬರೂ ವ್ಯಕ್ತಿಗಳನ್ನು ಭಾರತದ ಒಳಗೆ ಇರುವ ಭಯೋತ್ಪಾದಕರನ್ನು ಪತ್ತೆ ಮಾಡಲು ಬಳಸಲಾಗಿದೆ. ಭಾರತದಾದ್ಯಂತ ಹಲವಾರು ಸ್ಥಳಗಳಲ್ಲಿ ಐಇಡಿಗಳ ಮೂಲಕ ನೇಮಕಾತಿ, ಭಯೋತ್ಪಾದಕ ನಿಧಿ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಇವರನ್ನು ಬಳಸಿಕೊಳ್ಳಲಾಗುತ್ತಿದೆ. ಎಸ್‌ಟಿಎಫ್ ಪ್ರಕಾರ, ಈ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ನವದೆಹಲಿ ಮತ್ತು ಎಟಿಎಸ್, ಲಕ್ನೋದಿಂದ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:27 pm, Mon, 20 May 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ