AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ಎಫ್‌ ಯೋಧನನ್ನು ಹೊಡೆದು ಕೊಂದ ಪ್ರಕರಣದಲ್ಲಿ 7 ಮಂದಿ ಬಂಧನ; ಭಯಾನಕ ಕೃತ್ಯವನ್ನು ವಿವರಿಸಿದ ಪುತ್ರ

ಮೆಲ್ಜಿಭಾಯ್ ವಘೇಲಾ ತನ್ನ ಮಗ ಮತ್ತು ಸಂಬಂಧಿಕರೊಂದಿಗೆ ಶೈಲೇಶ್ ಅವರ ಮನೆಗೆ ತಲುಪಿದರು. ಅಲ್ಲಿ ಆರೋಪಿಯ ತಂದೆ ದಿನೇಶ್ ಜಾದವ್ ಜತೆ ಜಗಳ ಪ್ರಾರಂಭವಾಯಿತು. ಚಿಕ್ಕಪ್ಪ ಅರವಿಂದ್ ಜಾದವ್ ಮತ್ತು ಇತರ ಕುಟುಂಬ ಸದಸ್ಯರು ಅವನ ಮೇಲೆ ಹಲ್ಲೆ ನಡೆಸಿದರು.

ಬಿಎಸ್ಎಫ್‌ ಯೋಧನನ್ನು ಹೊಡೆದು ಕೊಂದ ಪ್ರಕರಣದಲ್ಲಿ 7 ಮಂದಿ ಬಂಧನ; ಭಯಾನಕ ಕೃತ್ಯವನ್ನು ವಿವರಿಸಿದ ಪುತ್ರ
ಯೋಧ ಮೆಲ್ಜಿಭಾಯಿ ವಘೇಲಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 27, 2022 | 8:58 PM

Share

ಅಹಮದಾಬಾದ್: ತನ್ನ ಮಗಳ ಅಶ್ಲೀಲ ವಿಡಿಯೊ ಪ್ರಸಾರ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಗಡಿ ಭದ್ರತಾ ಪಡೆ (BSF) ಯೋಧನನ್ನು ಕೊಂದ ಆರೋಪದಲ್ಲಿ ಗುಜರಾತ್ ಪೊಲೀಸರು (Gujarat Police) ಮಂಗಳವಾರ ಏಳು ಜನರನ್ನು ಬಂಧಿಸಿದ್ದಾರೆ. ರಾಜ್ಯದ ನಾಡಿಯಾದ್ ನಗರದಲ್ಲಿ ಶನಿವಾರ ನಡೆದ ಭಯಾನಕ ಕೃತ್ಯ ಕುರಿತು ಬಿಎಸ್‌ಎಫ್ ಯೋಧನ ಮಗ ಸುದ್ದಿ ಸಂಸ್ಥೆ ಎಎನ್‌ಐಗೆ ವಿವರಿಸಿದ್ದಾರೆ. ವಿಡಿಯೊ ವೈರಲ್ ಮಾಡಿದವರನ್ನು ಮಾತನಾಡಿಸಲು ನನ್ನ ತಂದೆ-ತಾಯಿ ಮತ್ತು ಸಹೋದರ ಹೋದಾಗ ಹಿಂದಿನಿಂದ ಬಂದ ಕೆಲವರು ನನ್ನ ತಂದೆಯ ತಲೆಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ.ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು 45 ವರ್ಷದ ಮೆಲ್ಜಿಭಾಯ್ ವಘೇಲಾ ಅವರ ಪುತ್ರ ಪ್ರತೀಕ್ ಹೇಳಿದ್ದಾರೆ. ವಘೇಲಾ ತನ್ನ ಅಪ್ರಾಪ್ತ ಮಗಳ ಅಶ್ಲೀಲ ವಿಡಿಯೊ ಕುರಿತು ಆರೋಪಿಗಳಲ್ಲಿ ಒಬ್ಬನಾದ ಶೈಲೇಶ್ ಜಾದವ್‌ನನ್ನು ಪ್ರಶ್ನಿಸಿದಾಗ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಘೇಲಾ ಅವರು ಜಾದವ್ ಅವರ ಮನೆಗೆ ಹೋದ ನಂತರ ಚಕ್ಲಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಲ್ಲಿ ಆತನ ಸಂಬಂಧಿಕರು ಹಲ್ಲೆ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶೈಲೇಶ್ ಅವರ ಮನೆಯಲ್ಲಿ ಘಟನೆ ನಡೆದಾಗ, ಆತ ಸ್ಥಳದಲ್ಲಿ ಇರಲಿಲ್ಲ.

ಮೆಲ್ಜಿಭಾಯ್ ವಘೇಲಾ ತನ್ನ ಮಗ ಮತ್ತು ಸಂಬಂಧಿಕರೊಂದಿಗೆ ಶೈಲೇಶ್ ಅವರ ಮನೆಗೆ ತಲುಪಿದರು. ಅಲ್ಲಿ ಆರೋಪಿಯ ತಂದೆ ದಿನೇಶ್ ಜಾದವ್ ಜತೆ ಜಗಳ ಪ್ರಾರಂಭವಾಯಿತು. ಚಿಕ್ಕಪ್ಪ ಅರವಿಂದ್ ಜಾದವ್ ಮತ್ತು ಇತರ ಕುಟುಂಬ ಸದಸ್ಯರು ಅವನ ಮೇಲೆ ಹಲ್ಲೆ ನಡೆಸಿದರು. ವಘೇಲಾ ಸ್ಥಳದಲ್ಲೇ ಸಾವನ್ನಪ್ಪಿದರು. ಮಗ ಗಾಯಗೊಂಡಿದ್ದಾರೆ ಎಂದು ನಾಡಿಯಾಡ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಆರ್ ಬಾಜ್‌ಪೇಯ್ ಹೇಳಿದ್ದಾರೆ.

ಇದನ್ನೂ ಓದಿ: Covid variant BF.7 : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್​ ಡ್ರಿಲ್​: ಹುಬ್ಬಳ್ಳಿಯ ಕಿಮ್ಸ್​ಗೆ ಸುಧಾಕರ್​ ಭೇಟಿ

ವಘೇಲಾ ಬಿಎಸ್‌ಎಫ್ 56 ಬೆಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ ಆಗಿದ್ದರು. ತಲೆಗೆ ಗಾಯಗೊಂಡ ಮಗ ನವದೀಪ್ ವಘೇಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾಜ್‌ಪೇಯ್ ಹೇಳಿದರು.

ವಾಣಿಪುರ ಗ್ರಾಮದ ಸುನೀಲ್ ಯಾದವ್ ಅಲಿಯಾಸ್ ಶೈಲೇಶ್ ಎಂಬಾತ ಯುವತಿಯ ವಿಡಿಯೊ ಮಾಡಿದ್ದಾನೆ ಎಂದು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಹೇಳಿದೆ. ಶೈಲೇಶ್ ಮತ್ತು ಯೋಧನ ಪುತ್ರಿ ಸಹಪಾಠಿಗಳು ಆಗಿದ್ದು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಹತ್ಯೆ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಲ್ಲಾ ಏಳು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್